<p><strong>ಕೆಂಭಾವಿ:</strong> ಸಮೀಪದ ಮಲ್ಲಾ ಗ್ರಾಮದ ಜೋಡೆತ್ತುಗಳು ಕೇವಲ ಏಳು ಗಂಟೆಗಳಲ್ಲಿ ಇಪ್ಪತ್ತು ಎಕರೆ ಹತ್ತಿ ಬಿತ್ತಿದ ಜಮೀನಿನಲ್ಲಿ ಗಳೆ ಹೊಡೆಯುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿವೆ.</p>.<p>ಮಲ್ಲಾ ಗ್ರಾಮದ ಚಂದಪ್ಪ ಪೂಜಾರಿ ಎಂಬ ರೈತನ ಎತ್ತುಗಳು ಮಂಗಳವಾರ ಸತತ ಏಳು ಗಂಟೆಗಳ ಕಾಲ ಜೋಡು ದಿಂಡಿನ ಮೂಲಕ ಬಿತ್ತಿದ ಹೊಲದಲ್ಲಿ ಕಳೆ ತೆಗೆಯಲು ಗಳೆ ಹೊಡೆಯುವ ಮೂಲಕ ಎಲ್ಲರಿಂದಲೂ ಭೇಷ್ ಎನಿಸಿಕೊಂಡಿವೆ.</p>.<p>ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ನಿರಂತರವಾಗಿ ರೈತರಿಗೆ ಈ ಎತ್ತುಗಳು ಸಾಥ್ ನೀಡಿ, ಜಮೀನಿನ ಕಳೆ ತೆಗೆಯುವ ಮೂಲಕ ಸ್ವಚ್ಛಗೊಳಿಸಿವೆ. ಗ್ರಾಮದ ಅನೇಕ ರೈತರು ಈ ಜೋಡೆತ್ತಗಳ ಸಾಹಸ ವೀಕ್ಷಿಸಿ ಎತ್ತುಗಳಿಗೆ ಬೆನ್ನುತಟ್ಟಿ ಖುಷಿ ಪಟ್ಟರು. 7 ಗಂಟೆಗಳ ನಿರಂತರ ಉಳಿಮೆಯ ಕೆಲಸದಲ್ಲಿ ಎತ್ತುಗಳಿಗೆ ಸಿದ್ಧರಾಜ, ರೇವಣಸಿದ್ದ, ಸತೀಶ ಪೂಜಾರಿ, ದೇವೇಂದ್ರ ಮ್ಯಾಗೇರಿ ಸಾಥ್ ನೀಡಿದರು.</p>.<p>ರೈತನ ಜೊತೆಯಾಗಿ ಆಯಾಸವಿಲ್ಲದೆ ಕೆಲಸ ಮಾಡುತ್ತಿರುವ ಎತ್ತುಗಳ ಕಾರ್ಯ ಶ್ಲಾಘನೀಯ. ಪಶು ಇಲಾಖೆ ಇಂತಹ ಸಾಹಸಮಯ ಜಾನುವಾರುಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಹಿರಿಯ ರೈತ ಮುಖಂಡ ಮಹಿಪಾಲರೆಡ್ಡಿ ಡಿಗ್ಗಾವಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ಸಮೀಪದ ಮಲ್ಲಾ ಗ್ರಾಮದ ಜೋಡೆತ್ತುಗಳು ಕೇವಲ ಏಳು ಗಂಟೆಗಳಲ್ಲಿ ಇಪ್ಪತ್ತು ಎಕರೆ ಹತ್ತಿ ಬಿತ್ತಿದ ಜಮೀನಿನಲ್ಲಿ ಗಳೆ ಹೊಡೆಯುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿವೆ.</p>.<p>ಮಲ್ಲಾ ಗ್ರಾಮದ ಚಂದಪ್ಪ ಪೂಜಾರಿ ಎಂಬ ರೈತನ ಎತ್ತುಗಳು ಮಂಗಳವಾರ ಸತತ ಏಳು ಗಂಟೆಗಳ ಕಾಲ ಜೋಡು ದಿಂಡಿನ ಮೂಲಕ ಬಿತ್ತಿದ ಹೊಲದಲ್ಲಿ ಕಳೆ ತೆಗೆಯಲು ಗಳೆ ಹೊಡೆಯುವ ಮೂಲಕ ಎಲ್ಲರಿಂದಲೂ ಭೇಷ್ ಎನಿಸಿಕೊಂಡಿವೆ.</p>.<p>ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ನಿರಂತರವಾಗಿ ರೈತರಿಗೆ ಈ ಎತ್ತುಗಳು ಸಾಥ್ ನೀಡಿ, ಜಮೀನಿನ ಕಳೆ ತೆಗೆಯುವ ಮೂಲಕ ಸ್ವಚ್ಛಗೊಳಿಸಿವೆ. ಗ್ರಾಮದ ಅನೇಕ ರೈತರು ಈ ಜೋಡೆತ್ತಗಳ ಸಾಹಸ ವೀಕ್ಷಿಸಿ ಎತ್ತುಗಳಿಗೆ ಬೆನ್ನುತಟ್ಟಿ ಖುಷಿ ಪಟ್ಟರು. 7 ಗಂಟೆಗಳ ನಿರಂತರ ಉಳಿಮೆಯ ಕೆಲಸದಲ್ಲಿ ಎತ್ತುಗಳಿಗೆ ಸಿದ್ಧರಾಜ, ರೇವಣಸಿದ್ದ, ಸತೀಶ ಪೂಜಾರಿ, ದೇವೇಂದ್ರ ಮ್ಯಾಗೇರಿ ಸಾಥ್ ನೀಡಿದರು.</p>.<p>ರೈತನ ಜೊತೆಯಾಗಿ ಆಯಾಸವಿಲ್ಲದೆ ಕೆಲಸ ಮಾಡುತ್ತಿರುವ ಎತ್ತುಗಳ ಕಾರ್ಯ ಶ್ಲಾಘನೀಯ. ಪಶು ಇಲಾಖೆ ಇಂತಹ ಸಾಹಸಮಯ ಜಾನುವಾರುಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಹಿರಿಯ ರೈತ ಮುಖಂಡ ಮಹಿಪಾಲರೆಡ್ಡಿ ಡಿಗ್ಗಾವಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>