<p>ಗುರುಮಠಕಲ್: ಕಲಬುರಗಿ ಜಿಲ್ಲೆಯ ಸೇಡಂ ಬಸ್ ಘಟಕದ ಸೇಡಂ-ಹೈದರಾಬಾದ್ ಮಾರ್ಗದ ಕೆ.ಎ.32 ಎಫ್ 2419 ಬಸ್ ಪಲ್ಟಿಯಾಗಿ 20 ಜನರಿಗೆ ಗಾಯಗಳಾದ ಘಟನೆ ಶನಿವಾರ ಜರುಗಿದೆ.</p>.<p>ಶನಿವಾರ ಬೆಳಿಗ್ಗೆ ಸೇಡಂ ನಗರದಿಂದ ಗುರುಮಠಕಲ್ ತಾಲ್ಲೂಕಿನ ಚಂಡರಿಕಿ ಮಾರ್ಗವಾಗಿ ಹೈದರಾಬಾದ್ ನಗರಕ್ಕೆ ತೆರಳುವಾಗ ತೆಲಂಗಾಣ ರಾಜ್ಯದ ನಾರಾಯಣಪೇಟ-ಲೋಕಪಲ್ಲಿ ನಡುವೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿದೆ.</p>.<p>ಗಾಯಾಳುಗಳಿಗೆ ನಾರಾಯಣಪೇಟ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಸೇಡಂ ಹಾಗೂ ಗುರುಮಠಕಲ್ ಬಸ್ ಘಟಕಗಳ ವ್ಯವಸ್ಥಾಪಕರಿಗೆ ಕರೆ ಮಾಡಿದಾಗ ಸಂಪರ್ಕ ಸಾಧ್ಯವಾಗಿಲ್ಲ.</p>.<p>ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಎಲ್ಲರಿಗೂ ಸಾಮಾನ್ಯ ಗಾಯಗಳಾಗಿವೆ. ಈ ಮಾರ್ಗದಲ್ಲಿ ಮೊದಲ ಬಾರಿಗೆ ಬಂದಿದ್ದ ಚಾಲಕನಿಗೆ ರಸ್ತೆಯ ತಿರುವಿನ ಕುರಿತು ಗೊತ್ತಿರಲಿಲ್ಲ. ಬಸ್ ವೇಗದಲ್ಲಿದ್ದ ಕಾರಣ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಾರಾಯಣಪೇಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುರುಮಠಕಲ್: ಕಲಬುರಗಿ ಜಿಲ್ಲೆಯ ಸೇಡಂ ಬಸ್ ಘಟಕದ ಸೇಡಂ-ಹೈದರಾಬಾದ್ ಮಾರ್ಗದ ಕೆ.ಎ.32 ಎಫ್ 2419 ಬಸ್ ಪಲ್ಟಿಯಾಗಿ 20 ಜನರಿಗೆ ಗಾಯಗಳಾದ ಘಟನೆ ಶನಿವಾರ ಜರುಗಿದೆ.</p>.<p>ಶನಿವಾರ ಬೆಳಿಗ್ಗೆ ಸೇಡಂ ನಗರದಿಂದ ಗುರುಮಠಕಲ್ ತಾಲ್ಲೂಕಿನ ಚಂಡರಿಕಿ ಮಾರ್ಗವಾಗಿ ಹೈದರಾಬಾದ್ ನಗರಕ್ಕೆ ತೆರಳುವಾಗ ತೆಲಂಗಾಣ ರಾಜ್ಯದ ನಾರಾಯಣಪೇಟ-ಲೋಕಪಲ್ಲಿ ನಡುವೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿದೆ.</p>.<p>ಗಾಯಾಳುಗಳಿಗೆ ನಾರಾಯಣಪೇಟ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಸೇಡಂ ಹಾಗೂ ಗುರುಮಠಕಲ್ ಬಸ್ ಘಟಕಗಳ ವ್ಯವಸ್ಥಾಪಕರಿಗೆ ಕರೆ ಮಾಡಿದಾಗ ಸಂಪರ್ಕ ಸಾಧ್ಯವಾಗಿಲ್ಲ.</p>.<p>ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಎಲ್ಲರಿಗೂ ಸಾಮಾನ್ಯ ಗಾಯಗಳಾಗಿವೆ. ಈ ಮಾರ್ಗದಲ್ಲಿ ಮೊದಲ ಬಾರಿಗೆ ಬಂದಿದ್ದ ಚಾಲಕನಿಗೆ ರಸ್ತೆಯ ತಿರುವಿನ ಕುರಿತು ಗೊತ್ತಿರಲಿಲ್ಲ. ಬಸ್ ವೇಗದಲ್ಲಿದ್ದ ಕಾರಣ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಾರಾಯಣಪೇಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>