ಯಾದಗಿರಿ: ಯಾದಗಿರಿ ಮತಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾದಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದರೈತ ಮೋರ್ಚಾ ಕಾರ್ಯದರ್ಶಿ ಚಂದ್ರಖೇರಗೌಡ ಮಾಗನೂರ, ಮತಕ್ಷೇತ್ರದ ಹಳ್ಳಿಗಳಾದಕರಣಗಿ, ಚಟ್ನಳ್ಳಿ, ನಾಲ್ವಡಗಿ, ಮರಮಕಲ್, ಬಲಕಲ್ ಗ್ರಾಮಗಳಿಗೆ ಬಸ್ ಸೌಕರ್ಯ ಒದಗಿಸಬೇಕು. ಸುಮಾರು ಎರಡು ವರ್ಷದಿಂದ ಬಸ್ ಸಂಚಾರ ಸ್ಥಗಿತವಾಗಿದ್ದು ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಬಸ್ ಸಂಚಾರ ಪ್ರಾರಂಭಿಸುವ ಮೂಲಕ ಈ ಭಾಗದ ಜನರಿಗೆ ಅನುಕೂಲ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿದಿನ ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಲು ದಾರಿ ನಡೆದುಕೊಂಡು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ಆರಂಭವಾದರೆ ಈ ಭಾಗದ ರೈತರಿಗೆ ಸಾರ್ವಜನಿಕರಿಗೆ ಅನುಕೂಲವಾಗಿದ್ದು, ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ನಂತರವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಪಿ.ಹರಿಬಾಬುಗೆ ಮನವಿ ಸಲ್ಲಿಸಲಾಯಿತು.