<p><strong>ಹುಣಸಗಿ:</strong> ತಾಲ್ಲೂಕಿನ ಗಡಿ ಗ್ರಾಮವಾಗಿರುವ ಬಸಾಪುರ ಗ್ರಾಮಕ್ಕೆ ಇಲ್ಲಿಯವರೆಗೂ ಒಂದು ಬಾರಿಯೂ ಬಸ್ ಸೌಲಭ್ಯವಿರಲಿಲ್ಲ. ಆದರೆ ಸದ್ಯ ಸುರಪುರ ಬಸ್ ಘಟಕದ ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸಿದ್ದು, ಬಸಾಪುರ ಗ್ರಾಮದ ಜನತೆಯ ಸಂತಸಕ್ಕೆ ಕಾರಣವಾಗಿದೆ.</p>.<p>ಈ ಕುರಿತು ಗ್ರಾಮದ ಶಿಕ್ಷಕರಾದ ನೀಲಪ್ಪ ತೆಗ್ಗಿ ಅವರು ಮಾತನಾಡಿ, ‘ನಮ್ಮ ಗ್ರಾಮಕ್ಕೆ ಬಸ್ ಸೌಲಭ್ಯವಿಲ್ಲದ್ದರಿಂದಾಗಿ ಗ್ರಾಮದ ಜನರು ಯಾವುದೇ ಕೆಲಸ ಕಾರ್ಯಗಳಿಗೆ ಖಾಸಗಿ ವಾಹನಗಳಿಗೆ ಅವಲಂಬಿತರಾಗಿದ್ದರು. ಅಲ್ಲದೆ ಬಡ ಜನತೆ ನಡೆದುಕೊಂಡು ಹೋಗುವ ಪರಿಸ್ಥಿತಿ ಇತ್ತು. ವಿದ್ಯಾರ್ಥಿನಿಯರು ಹೆಚ್ಚಿನ ಶಿಕ್ಷಣಕ್ಕೆ ಪರದಾಡುವಂತಿತ್ತು. ಈ ಕುರಿತು ಸುರಪುರ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಅಧಿಕಾರಿಗಳು ಸ್ಪಂದಿಸಿ ಬೆಳಿಗ್ಗೆ ಮತ್ತೆ ಸಂಜೆ ಹುಣಸಗಿಯಿಂದ ವಿಜಯಪುರ ಜಿಲ್ಲೆಯ ನಾಲತವಾಡದವರೆಗೆ ಬಸ್ ಸಂಪರ್ಕ ಕಲ್ಲಿಸಿದ್ದಾರೆ’ ಎಂದು ಹೇಳಿದರು. <br> ಈ ಬಸ್ ನಿರಂತರವಾಗಿ ಸಂಚರಿಸಲಿ ಎಂದು ಗ್ರಾಮದ ನೀಲಕಂಠ ಕೊಂಡಿಕಾರ ಆಶಿಸಿದರು.</p>.<p>ಬಸ್ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಪೂಜೆ ಸಲ್ಲಿಸಿ ಚಾಲಕ ನಿರ್ವಾಹಕರನ್ನು ಸನ್ಮಾನಿಸಿದರು.</p>.<p>ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ನಿಂಗಪ್ಪ ಕೊಂಡಿಕಾರ, ಸಿದ್ದಪ್ಪ ಬಿರಾದಾರ, ಸುರೇಶ, ಪವನ್ ಕೊಂಡಿಕಾರ, ಯಮನಪ್ಪ ಜೈನಾಪುರ ಸೇರಿದಂತೆ ಇತರರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ:</strong> ತಾಲ್ಲೂಕಿನ ಗಡಿ ಗ್ರಾಮವಾಗಿರುವ ಬಸಾಪುರ ಗ್ರಾಮಕ್ಕೆ ಇಲ್ಲಿಯವರೆಗೂ ಒಂದು ಬಾರಿಯೂ ಬಸ್ ಸೌಲಭ್ಯವಿರಲಿಲ್ಲ. ಆದರೆ ಸದ್ಯ ಸುರಪುರ ಬಸ್ ಘಟಕದ ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸಿದ್ದು, ಬಸಾಪುರ ಗ್ರಾಮದ ಜನತೆಯ ಸಂತಸಕ್ಕೆ ಕಾರಣವಾಗಿದೆ.</p>.<p>ಈ ಕುರಿತು ಗ್ರಾಮದ ಶಿಕ್ಷಕರಾದ ನೀಲಪ್ಪ ತೆಗ್ಗಿ ಅವರು ಮಾತನಾಡಿ, ‘ನಮ್ಮ ಗ್ರಾಮಕ್ಕೆ ಬಸ್ ಸೌಲಭ್ಯವಿಲ್ಲದ್ದರಿಂದಾಗಿ ಗ್ರಾಮದ ಜನರು ಯಾವುದೇ ಕೆಲಸ ಕಾರ್ಯಗಳಿಗೆ ಖಾಸಗಿ ವಾಹನಗಳಿಗೆ ಅವಲಂಬಿತರಾಗಿದ್ದರು. ಅಲ್ಲದೆ ಬಡ ಜನತೆ ನಡೆದುಕೊಂಡು ಹೋಗುವ ಪರಿಸ್ಥಿತಿ ಇತ್ತು. ವಿದ್ಯಾರ್ಥಿನಿಯರು ಹೆಚ್ಚಿನ ಶಿಕ್ಷಣಕ್ಕೆ ಪರದಾಡುವಂತಿತ್ತು. ಈ ಕುರಿತು ಸುರಪುರ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಅಧಿಕಾರಿಗಳು ಸ್ಪಂದಿಸಿ ಬೆಳಿಗ್ಗೆ ಮತ್ತೆ ಸಂಜೆ ಹುಣಸಗಿಯಿಂದ ವಿಜಯಪುರ ಜಿಲ್ಲೆಯ ನಾಲತವಾಡದವರೆಗೆ ಬಸ್ ಸಂಪರ್ಕ ಕಲ್ಲಿಸಿದ್ದಾರೆ’ ಎಂದು ಹೇಳಿದರು. <br> ಈ ಬಸ್ ನಿರಂತರವಾಗಿ ಸಂಚರಿಸಲಿ ಎಂದು ಗ್ರಾಮದ ನೀಲಕಂಠ ಕೊಂಡಿಕಾರ ಆಶಿಸಿದರು.</p>.<p>ಬಸ್ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಪೂಜೆ ಸಲ್ಲಿಸಿ ಚಾಲಕ ನಿರ್ವಾಹಕರನ್ನು ಸನ್ಮಾನಿಸಿದರು.</p>.<p>ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ನಿಂಗಪ್ಪ ಕೊಂಡಿಕಾರ, ಸಿದ್ದಪ್ಪ ಬಿರಾದಾರ, ಸುರೇಶ, ಪವನ್ ಕೊಂಡಿಕಾರ, ಯಮನಪ್ಪ ಜೈನಾಪುರ ಸೇರಿದಂತೆ ಇತರರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>