<p><strong>ಕೆಂಭಾವಿ:</strong> ಅವ್ಯವಸ್ಥೆಯ ಆಗರವಾದ ಪಟ್ಟಣದ ಬಸ್ ನಿಲ್ದಾಣಕ್ಕೆ ಭಾನುವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷಕುಮಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬಸ್ ನಿಲ್ದಾಣ ಸುತ್ತಲೂ ಪರಿಶೀಲಿಸಿ ನಂತರ ಮಾತನಾಡಿದ ಅವರು, ‘ಮಳೆ ಬಂದರೆ ಬಸ್ ನಿಲ್ದಾಣದಲ್ಲಿ ನೀರು ತುಂಬುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಇದಕ್ಕೆ ಶೀಘ್ರವೇ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಶಕ್ತಿ ಯೋಜನೆ ಈ ಬಸ್ ನಿಲ್ದಾಣ ಅಭಿವೃದ್ಧಿಯತ್ತ ಸಾಗುತ್ತಿದ್ದು, ಇಲ್ಲಿರುವ ಎಲ್ಲ ಸಮಸ್ಯೆಗಳಿಗೆ ಆದಷ್ಟು ಬೇಗ ಅಂತ್ಯ ಹಾಡಲಾಗುವುದು’ ಎಂದು ಹೇಳಿದರು.</p>.<p>‘ಕುಡಿಯುವ ನೀರು, ಶೌಚಾಲಯ, ಬಸ್ ನಿಲ್ದಾಣ ಶುಚಿತ್ವ, ಸಿಸಿ ರಸ್ತೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಮತ್ತು ಹೆಚ್ಚಿನ ಬಸ್ಗಳನ್ನು ಓಡಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಸಂಚಾರ ನಿಯಂತ್ರಕ ಮಾನಪ್ಪ ಉಪಸ್ಥಿತರಿದ್ದರು.</p>.<p>ಆಗ್ರಹ: ‘ಕೆಂಭಾವಿ ಪಟ್ಟಣ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಬಸ್ಗಳು ಮಾತ್ರ ಬೆರಣಿಕೆಯಷ್ಟು ಇಲ್ಲಿಂದ ಕಾರ್ಯಾಚರಣೆ ಮಾಡುತ್ತಿವೆ. ಈ ಬಸ್ ನಿಲ್ದಾಣದಿಂದ ನಿಗಮಕ್ಕೆ ಸಾಕಷ್ಟು ಆದಾಯ ಬರುತ್ತಿದ್ದರೂ ಯಾವುದೇ ನೂತನ ಬಸ್ಗಳು ಪ್ರಾರಂಭಿಸಿಲ್ಲ. ಮೊದಲು ಇದ್ದ ಕೆಲವೊಂದು ಮಾರ್ಗದ ಬಸ್ಗಳನ್ನು ರದ್ದು ಮಾಡುವ ಮೂಲಕ ಈ ಭಾಗದ ಪ್ರಯಾಣಿಕರಿಗೆ ಸಾರಿಗೆ ನಿಗಮ ಅನ್ಯಾಯ ಮಾಡಿದೆ. ಇಲ್ಲಿಂದ ಹೆಚ್ಚಿನ ಬಸ್ಗಳನ್ನು ಓಡಿಸಿ ಬಸ್ ನಿಲ್ದಾಣಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಸಂಜೀವರಾವ ಕುಲಕರ್ಣಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ಅವ್ಯವಸ್ಥೆಯ ಆಗರವಾದ ಪಟ್ಟಣದ ಬಸ್ ನಿಲ್ದಾಣಕ್ಕೆ ಭಾನುವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷಕುಮಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬಸ್ ನಿಲ್ದಾಣ ಸುತ್ತಲೂ ಪರಿಶೀಲಿಸಿ ನಂತರ ಮಾತನಾಡಿದ ಅವರು, ‘ಮಳೆ ಬಂದರೆ ಬಸ್ ನಿಲ್ದಾಣದಲ್ಲಿ ನೀರು ತುಂಬುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಇದಕ್ಕೆ ಶೀಘ್ರವೇ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಶಕ್ತಿ ಯೋಜನೆ ಈ ಬಸ್ ನಿಲ್ದಾಣ ಅಭಿವೃದ್ಧಿಯತ್ತ ಸಾಗುತ್ತಿದ್ದು, ಇಲ್ಲಿರುವ ಎಲ್ಲ ಸಮಸ್ಯೆಗಳಿಗೆ ಆದಷ್ಟು ಬೇಗ ಅಂತ್ಯ ಹಾಡಲಾಗುವುದು’ ಎಂದು ಹೇಳಿದರು.</p>.<p>‘ಕುಡಿಯುವ ನೀರು, ಶೌಚಾಲಯ, ಬಸ್ ನಿಲ್ದಾಣ ಶುಚಿತ್ವ, ಸಿಸಿ ರಸ್ತೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಮತ್ತು ಹೆಚ್ಚಿನ ಬಸ್ಗಳನ್ನು ಓಡಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಸಂಚಾರ ನಿಯಂತ್ರಕ ಮಾನಪ್ಪ ಉಪಸ್ಥಿತರಿದ್ದರು.</p>.<p>ಆಗ್ರಹ: ‘ಕೆಂಭಾವಿ ಪಟ್ಟಣ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಬಸ್ಗಳು ಮಾತ್ರ ಬೆರಣಿಕೆಯಷ್ಟು ಇಲ್ಲಿಂದ ಕಾರ್ಯಾಚರಣೆ ಮಾಡುತ್ತಿವೆ. ಈ ಬಸ್ ನಿಲ್ದಾಣದಿಂದ ನಿಗಮಕ್ಕೆ ಸಾಕಷ್ಟು ಆದಾಯ ಬರುತ್ತಿದ್ದರೂ ಯಾವುದೇ ನೂತನ ಬಸ್ಗಳು ಪ್ರಾರಂಭಿಸಿಲ್ಲ. ಮೊದಲು ಇದ್ದ ಕೆಲವೊಂದು ಮಾರ್ಗದ ಬಸ್ಗಳನ್ನು ರದ್ದು ಮಾಡುವ ಮೂಲಕ ಈ ಭಾಗದ ಪ್ರಯಾಣಿಕರಿಗೆ ಸಾರಿಗೆ ನಿಗಮ ಅನ್ಯಾಯ ಮಾಡಿದೆ. ಇಲ್ಲಿಂದ ಹೆಚ್ಚಿನ ಬಸ್ಗಳನ್ನು ಓಡಿಸಿ ಬಸ್ ನಿಲ್ದಾಣಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಸಂಜೀವರಾವ ಕುಲಕರ್ಣಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>