ನಂತರ ಮಾತನಾಡಿದ ಅವರು, ಯುವಕರು ಕ್ರೀಡೆಯಲ್ಲಿ ತೊಡಗಿಸಿ ಕೊಳ್ಳುವುದರಿಂದ ದೈಹಿಕ, ಮಾನಸಿಕ ಸದೃಢರಾಗಬಹುದು. ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುವುದರ ಮುಖಾಂತರ ಗ್ರಾಮೀಣ ಕ್ರೀಡಾಪಟುಗಳನ್ನು ಗುರುತಿಸಿ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆಯಾಗಿ ಅಲ್ಲಿಂದ ರಾಜ್ಯ, ರಾಷ್ಟ್ರಮಟ್ಟದ ವರೆಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಶುಭ ಹಾರೈಸಿದರು.