<p><strong>ಯಾದಗಿರಿ</strong>: ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾದ ಸುರಪುರ ಮತಕ್ಷೇತ್ರಕ್ಕೆ ಮೇ 7ರಂದು ಉಪಚುನಾವಣೆ ನಿಗದಿಯಾಗಿದ್ದು, ಈಗ ‘ಶಾಲು’ ರಾಜಕೀಯ ಗಮನ ಸೆಳೆಯುತ್ತಿದೆ.</p>.<p>ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲನಾಯಕ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ನರಸಿಂಹ ನಾಯಕ (ರಾಜೂಗೌಡ) ಅದೃಷ್ಟ ಪರೀಕ್ಷೆಗೆ ಇಳಿದ್ದಾರೆ.</p>.<p><strong>ನಾಮಪತ್ರ ಸಲ್ಲಿಸುವಾಗಲು ಶಾಲ</strong>ು:</p>.<p>ಸುರಪುರ ಮತಕ್ಷೇತ್ರದಲ್ಲಿ ನಾಯಕ ಮತ್ತು ಕುರುಬ ಸಮುದಾಯದವರು ಹೆಚ್ಚಿದ್ದು, ನಿರ್ಣಾಯಕ ಮತದಾರರಾಗಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸುವಾಗ ಕಂಬಳಿ, ಹಸಿರು ಶಾಲು ಹಾಕಿಕೊಳ್ಳುವ ಮೂಲಕ ಮತದಾರರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಕ್ಷೇತ್ರದ ಜನತೆ ಮಾತನಾಡಿಕೊಳ್ಳುತ್ತಿದ್ದಾರೆ.</p>.<p>ಬಿಜೆಪಿಯವರು ಕೇಸರಿ ಶಾಲು ಹಾಕಿಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮಾತ್ರ ಕುರುಬ ಸಮುದಾಯವನ್ನು ಪ್ರತಿನಿಧಿಸುವ ಶಾಲು ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ.</p>.<p><strong>‘ಕೈ’ಗೆ ಎಎಪಿ ಬೆಂಬಲ:</strong><br> ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರಿಗೆ ಸುರಪುರ ಎಎಪಿ ಮುಖಂಡರು ಬೆಂಬಲ ನೀಡುವ ಮೂಲಕ ಪ್ರಚಾರಗಳಲ್ಲಿ ಭಾಗಿಯಾಗಿದ್ದಾರೆ.</p>.<p>ಕೇಂದ್ರದ ಇಂಡಿಯಾ ಒಕ್ಕೂಟದ ಹೊಂದಾಣಿಕೆಯಂತೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಹಾಗೂ ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಜತೆಗೆ ಹೊಂದಾಣಿಕೆ ಇರುವುದರಿಂದ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್ ಗುತ್ತೇದಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಲಾಗಿದೆ.</p>.<p>ಶತ್ರುಗಳ ಒಂದಾಗಿಸಿದ ಚುನಾವಣೆ ಸುರಪುರ ಉಪ ಚುನಾವಣೆ ಶತ್ರುಗಳು ಒಂದಾಗುವಂತೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಲ್ಲಿದ್ದ ಹಲವು ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ನಲ್ಲಿದ್ದ ಮುಖಂಡರು ಬಿಜೆಪಿ ಸೇರಿದ್ದಾರೆ. ಈ ಮೂಲಕ ಚುನಾವಣೆಗಾಗಿ ಶತ್ರುಗಳು ಒಂದಾಗಿದ್ದಾರೆ. ಒಂದೇ ಕಾರಿನಲ್ಲಿ ಪ್ರಯಾಣ ಮಾಡಿ ಗ್ರಾಮಗಳಲ್ಲಿ ಪ್ರಚಾರ ಕಾರ್ಯಗಳಲ್ಲಿ ಮುಖಂಡರು ತೊಡಗಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾದ ಸುರಪುರ ಮತಕ್ಷೇತ್ರಕ್ಕೆ ಮೇ 7ರಂದು ಉಪಚುನಾವಣೆ ನಿಗದಿಯಾಗಿದ್ದು, ಈಗ ‘ಶಾಲು’ ರಾಜಕೀಯ ಗಮನ ಸೆಳೆಯುತ್ತಿದೆ.</p>.<p>ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲನಾಯಕ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ನರಸಿಂಹ ನಾಯಕ (ರಾಜೂಗೌಡ) ಅದೃಷ್ಟ ಪರೀಕ್ಷೆಗೆ ಇಳಿದ್ದಾರೆ.</p>.<p><strong>ನಾಮಪತ್ರ ಸಲ್ಲಿಸುವಾಗಲು ಶಾಲ</strong>ು:</p>.<p>ಸುರಪುರ ಮತಕ್ಷೇತ್ರದಲ್ಲಿ ನಾಯಕ ಮತ್ತು ಕುರುಬ ಸಮುದಾಯದವರು ಹೆಚ್ಚಿದ್ದು, ನಿರ್ಣಾಯಕ ಮತದಾರರಾಗಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸುವಾಗ ಕಂಬಳಿ, ಹಸಿರು ಶಾಲು ಹಾಕಿಕೊಳ್ಳುವ ಮೂಲಕ ಮತದಾರರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಕ್ಷೇತ್ರದ ಜನತೆ ಮಾತನಾಡಿಕೊಳ್ಳುತ್ತಿದ್ದಾರೆ.</p>.<p>ಬಿಜೆಪಿಯವರು ಕೇಸರಿ ಶಾಲು ಹಾಕಿಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮಾತ್ರ ಕುರುಬ ಸಮುದಾಯವನ್ನು ಪ್ರತಿನಿಧಿಸುವ ಶಾಲು ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ.</p>.<p><strong>‘ಕೈ’ಗೆ ಎಎಪಿ ಬೆಂಬಲ:</strong><br> ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರಿಗೆ ಸುರಪುರ ಎಎಪಿ ಮುಖಂಡರು ಬೆಂಬಲ ನೀಡುವ ಮೂಲಕ ಪ್ರಚಾರಗಳಲ್ಲಿ ಭಾಗಿಯಾಗಿದ್ದಾರೆ.</p>.<p>ಕೇಂದ್ರದ ಇಂಡಿಯಾ ಒಕ್ಕೂಟದ ಹೊಂದಾಣಿಕೆಯಂತೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಹಾಗೂ ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಜತೆಗೆ ಹೊಂದಾಣಿಕೆ ಇರುವುದರಿಂದ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್ ಗುತ್ತೇದಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಲಾಗಿದೆ.</p>.<p>ಶತ್ರುಗಳ ಒಂದಾಗಿಸಿದ ಚುನಾವಣೆ ಸುರಪುರ ಉಪ ಚುನಾವಣೆ ಶತ್ರುಗಳು ಒಂದಾಗುವಂತೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಲ್ಲಿದ್ದ ಹಲವು ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ನಲ್ಲಿದ್ದ ಮುಖಂಡರು ಬಿಜೆಪಿ ಸೇರಿದ್ದಾರೆ. ಈ ಮೂಲಕ ಚುನಾವಣೆಗಾಗಿ ಶತ್ರುಗಳು ಒಂದಾಗಿದ್ದಾರೆ. ಒಂದೇ ಕಾರಿನಲ್ಲಿ ಪ್ರಯಾಣ ಮಾಡಿ ಗ್ರಾಮಗಳಲ್ಲಿ ಪ್ರಚಾರ ಕಾರ್ಯಗಳಲ್ಲಿ ಮುಖಂಡರು ತೊಡಗಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>