<p><strong>ಸುರಪುರ</strong>: ನಗರಸಭೆ ವ್ಯಾಪ್ತಿಯ ಹಸನಾಪುರದಲ್ಲಿರುವ ಹೊಲಗಾಲುವೆ (ಕಾಡಾ) ವಿಭಾಗೀಯ ಕಚೇರಿ ಸಂಖ್ಯೆ 2ರ ಸ್ಥಳಾಂತರ ರದ್ದುಪಡಿಸುವಂತೆ ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ವೇದಿಕೆಯ ಮುಖಂಡರು ಗುರುವಾರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಮುಖಂಡ ನಿಂಗಣ್ಣ ಗೋನಾಲ ಮಾತನಾಡಿ, ಈ ಕಚೇರಿಯನ್ನು 35ವರ್ಷಗಳ ಹಿಂದೆ ಆರಂಭಿಸಲಾಗಿತ್ತು. ಇದರ ವ್ಯಾಪ್ತಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗೆ ಒಳಪಡುತ್ತದೆ. ಏಕಾಏಕಿ ಕಚೇರಿಯನ್ನು ಬಾಗಲಕೋಟೆಗೆ ಸ್ಥಳಾಂತರಿಸಿ ಇಲ್ಲಿನ ರೈತರಿಗೆ ಅನ್ಯಾಯ ಮಾಡಲಾಗಿದೆ ಎಂದು ದೂರಿದರು.</p>.<p>ಮುಖಂಡ ಹಣಮಂತ್ರಾಯ ಚಂದಲಾಪುರ ಮಾತನಾಡಿ, ವಿತರಣಾ ಕಾಲುವೆಯ ಮುಖಾಂತರ ಹೊಲಗಳಿಗೆ ನೀರು ಮುಟ್ಟಿಸಲು ಕಾಡಾ ಕಾಲುವೆ ನಿರ್ಮಾಣ, ನಿರ್ವಹಣೆ, ಪರಿಶಿಷ್ಟ ಸಮೂದಾಯದ ಜನರ ಯೋಜನೆಗಳ ಅನುಷ್ಠಾನ, ರಸ್ತೆಗಳ ನಿರ್ಮಾಣ ಈ ಕಚೇರಿಯ ಜವಾಬ್ದಾರಿಯಾಗಿತ್ತು. ಇದಕ್ಕೆ ಹೆಚ್ಚಿನ ಅನುದಾನವೂ ಬರುತ್ತಿತ್ತು. ಕಚೇರಿ ಸ್ಥಳಾಂತರದಿಂದ ಈ ಎಲ್ಲ ಕಾರ್ಯಗಳು ಸ್ಥಗಿತಗೊಳ್ಳಲಿವೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಚುನಾವಣಾ ನೀತಿ ಸಂಹಿತೆ ಜಾರಿಯಾಗುವುದರಲ್ಲಿದೆ. ಅಷ್ಟರಲ್ಲಿಯೇ ಸ್ಥಳಾಂತರ ರದ್ದುಪಡಿಸಿ ಯಥಾಸ್ಥಿತಿ ಮುಂದುವರಿಸಬೇಕು. ಇಲ್ಲದಿದ್ದರೆ ಸ್ಥಳಾಂತರ ಆದೇಶ ರದ್ದು ಪಡಿಸಲು ಸಮಸ್ಯೆಯಾಗುತ್ತದೆ. ಈ ಬಗ್ಗೆ ಶಾಸಕರು ಗಮನಹರಿಸಬೇಕು ಎಂದು ಮುಖಂಡ ರಾಹುಲ ಹಲಿಮನಿ ಒತ್ತಾಯಿಸಿದರು.</p>.<p>ರಮೇಶ ದೊರೆ ಆಲ್ದಾಳ, ವೆಂಕಟೇಶ ಬೇಟೆಗಾರ, ಮಾಳಪ್ಪ ಕಿರದಳ್ಳಿ, ಭೀಮರಾಯ ಸಿಂಧಗಿರಿ ಸೇರಿದಂತೆ ರೈತರು, ಮುಖಂಡರು<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ನಗರಸಭೆ ವ್ಯಾಪ್ತಿಯ ಹಸನಾಪುರದಲ್ಲಿರುವ ಹೊಲಗಾಲುವೆ (ಕಾಡಾ) ವಿಭಾಗೀಯ ಕಚೇರಿ ಸಂಖ್ಯೆ 2ರ ಸ್ಥಳಾಂತರ ರದ್ದುಪಡಿಸುವಂತೆ ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ವೇದಿಕೆಯ ಮುಖಂಡರು ಗುರುವಾರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಮುಖಂಡ ನಿಂಗಣ್ಣ ಗೋನಾಲ ಮಾತನಾಡಿ, ಈ ಕಚೇರಿಯನ್ನು 35ವರ್ಷಗಳ ಹಿಂದೆ ಆರಂಭಿಸಲಾಗಿತ್ತು. ಇದರ ವ್ಯಾಪ್ತಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗೆ ಒಳಪಡುತ್ತದೆ. ಏಕಾಏಕಿ ಕಚೇರಿಯನ್ನು ಬಾಗಲಕೋಟೆಗೆ ಸ್ಥಳಾಂತರಿಸಿ ಇಲ್ಲಿನ ರೈತರಿಗೆ ಅನ್ಯಾಯ ಮಾಡಲಾಗಿದೆ ಎಂದು ದೂರಿದರು.</p>.<p>ಮುಖಂಡ ಹಣಮಂತ್ರಾಯ ಚಂದಲಾಪುರ ಮಾತನಾಡಿ, ವಿತರಣಾ ಕಾಲುವೆಯ ಮುಖಾಂತರ ಹೊಲಗಳಿಗೆ ನೀರು ಮುಟ್ಟಿಸಲು ಕಾಡಾ ಕಾಲುವೆ ನಿರ್ಮಾಣ, ನಿರ್ವಹಣೆ, ಪರಿಶಿಷ್ಟ ಸಮೂದಾಯದ ಜನರ ಯೋಜನೆಗಳ ಅನುಷ್ಠಾನ, ರಸ್ತೆಗಳ ನಿರ್ಮಾಣ ಈ ಕಚೇರಿಯ ಜವಾಬ್ದಾರಿಯಾಗಿತ್ತು. ಇದಕ್ಕೆ ಹೆಚ್ಚಿನ ಅನುದಾನವೂ ಬರುತ್ತಿತ್ತು. ಕಚೇರಿ ಸ್ಥಳಾಂತರದಿಂದ ಈ ಎಲ್ಲ ಕಾರ್ಯಗಳು ಸ್ಥಗಿತಗೊಳ್ಳಲಿವೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಚುನಾವಣಾ ನೀತಿ ಸಂಹಿತೆ ಜಾರಿಯಾಗುವುದರಲ್ಲಿದೆ. ಅಷ್ಟರಲ್ಲಿಯೇ ಸ್ಥಳಾಂತರ ರದ್ದುಪಡಿಸಿ ಯಥಾಸ್ಥಿತಿ ಮುಂದುವರಿಸಬೇಕು. ಇಲ್ಲದಿದ್ದರೆ ಸ್ಥಳಾಂತರ ಆದೇಶ ರದ್ದು ಪಡಿಸಲು ಸಮಸ್ಯೆಯಾಗುತ್ತದೆ. ಈ ಬಗ್ಗೆ ಶಾಸಕರು ಗಮನಹರಿಸಬೇಕು ಎಂದು ಮುಖಂಡ ರಾಹುಲ ಹಲಿಮನಿ ಒತ್ತಾಯಿಸಿದರು.</p>.<p>ರಮೇಶ ದೊರೆ ಆಲ್ದಾಳ, ವೆಂಕಟೇಶ ಬೇಟೆಗಾರ, ಮಾಳಪ್ಪ ಕಿರದಳ್ಳಿ, ಭೀಮರಾಯ ಸಿಂಧಗಿರಿ ಸೇರಿದಂತೆ ರೈತರು, ಮುಖಂಡರು<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>