<p><strong>ಬಳಿಚಕ್ರ (ಸೈದಾಪುರ)</strong>: ಬಳಿಚಕ್ರ ಗ್ರಾಮದಲ್ಲಿ ಭಕ್ತಿಲಿಂಗೇಶ್ವರ ಜಾತ್ರೆಯ ಅಂಗವಾಗಿ 6 ಗಾಲಿಯ ಭವ್ಯ ರಥೋತ್ಸವ ಕಾರ್ಯಕ್ರಮದಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಸುಮಾರು 10 ಜನ ಗ್ರಾಮಸ್ಥರ ವಿರುದ್ಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸಮೀಪದ ಬಳಿಚಕ್ರ ಗ್ರಾಮದಲ್ಲಿ 15ನೇ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಜರುಗಿದ ಭಕ್ತಿಲಿಂಗೇಶ್ವರ ಜಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಹಾಗೂ ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿ ಗ್ರಾಮಸ್ಥರು ಜಾತ್ರೆ ಕೈಗೊಂಡಿದ್ದರು.</p>.<p>ರಥೋತ್ಸವ ಸಂದರ್ಭದಲ್ಲಿ ಭಕ್ತರು ರಥವನ್ನು ವೇಗವಾಗಿ ಎಳೆದ ಪರಿಣಾಮವಾಗಿ ರಥವು ಎರಡು ತುಂಡಾಗಿ ಮುರಿದು ಬಿದ್ದು ಅವಘಡ ಸಂಭವಿಸಿತ್ತು. ಈ ದುರಂತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ರಾಯಚೂರಿನ ನಂದಿನಿ ಆಸ್ಪತ್ರೆಯಲ್ಲಿ ಒಬ್ಬರು, ಬಾಲಂಕು ಆಸ್ಪತ್ರೆಯಲ್ಲಿ ಮತ್ತೊಬ್ಬರು ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇನ್ನುಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಶನಿವಾರ ಈ ದುರಂತ ಸಂಭವಿಸಿದ್ದರಿಂದ ಭಾನುವಾರ ಸೈದಾಪುರ ಪೊಲೀಸ್ ಠಾಣೆಯ ಪಿಎಸ್ಐ ಭೀಮರಾಯ ಬಂಕ್ಲಿ ಅವರು ಸ್ಥಳಕ್ಕೆ ಭೇಟಿ ನೀಡಿ ದುರಂತದ ಕುರಿತಾಗಿ ಸಂಪೂರ್ಣವಾದ ಮಾಹಿತಿಯನ್ನು ಪಡೆದಿದ್ದಾರೆ.</p>.<p>‘ಗ್ರಾಮದ ಪ್ರಮುಖ 10 ಜನರ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳಿಚಕ್ರ (ಸೈದಾಪುರ)</strong>: ಬಳಿಚಕ್ರ ಗ್ರಾಮದಲ್ಲಿ ಭಕ್ತಿಲಿಂಗೇಶ್ವರ ಜಾತ್ರೆಯ ಅಂಗವಾಗಿ 6 ಗಾಲಿಯ ಭವ್ಯ ರಥೋತ್ಸವ ಕಾರ್ಯಕ್ರಮದಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಸುಮಾರು 10 ಜನ ಗ್ರಾಮಸ್ಥರ ವಿರುದ್ಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸಮೀಪದ ಬಳಿಚಕ್ರ ಗ್ರಾಮದಲ್ಲಿ 15ನೇ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಜರುಗಿದ ಭಕ್ತಿಲಿಂಗೇಶ್ವರ ಜಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಹಾಗೂ ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿ ಗ್ರಾಮಸ್ಥರು ಜಾತ್ರೆ ಕೈಗೊಂಡಿದ್ದರು.</p>.<p>ರಥೋತ್ಸವ ಸಂದರ್ಭದಲ್ಲಿ ಭಕ್ತರು ರಥವನ್ನು ವೇಗವಾಗಿ ಎಳೆದ ಪರಿಣಾಮವಾಗಿ ರಥವು ಎರಡು ತುಂಡಾಗಿ ಮುರಿದು ಬಿದ್ದು ಅವಘಡ ಸಂಭವಿಸಿತ್ತು. ಈ ದುರಂತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ರಾಯಚೂರಿನ ನಂದಿನಿ ಆಸ್ಪತ್ರೆಯಲ್ಲಿ ಒಬ್ಬರು, ಬಾಲಂಕು ಆಸ್ಪತ್ರೆಯಲ್ಲಿ ಮತ್ತೊಬ್ಬರು ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇನ್ನುಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಶನಿವಾರ ಈ ದುರಂತ ಸಂಭವಿಸಿದ್ದರಿಂದ ಭಾನುವಾರ ಸೈದಾಪುರ ಪೊಲೀಸ್ ಠಾಣೆಯ ಪಿಎಸ್ಐ ಭೀಮರಾಯ ಬಂಕ್ಲಿ ಅವರು ಸ್ಥಳಕ್ಕೆ ಭೇಟಿ ನೀಡಿ ದುರಂತದ ಕುರಿತಾಗಿ ಸಂಪೂರ್ಣವಾದ ಮಾಹಿತಿಯನ್ನು ಪಡೆದಿದ್ದಾರೆ.</p>.<p>‘ಗ್ರಾಮದ ಪ್ರಮುಖ 10 ಜನರ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>