<p>ಯಾದಗಿರಿ: ಸುರಪುರ ತಾಲ್ಲೂಕಿನ ಕನ್ನೆಳ್ಳಿ ಗ್ರಾಮದಲ್ಲಿ ನೀರು ಎತ್ತಿ ಹಾಕಿದ ಪ್ರಕರಣ ಸಂಬಂಧ ಹೋಟೆಲ್ ಮಾಲೀಕ ಗಫೂರ್ ಸಾಬ್ ಮತ್ತು ಇತರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ದಲಿತ ಸಮುದಾಯದ ವ್ಯಕ್ತಿಗೆ ಅಸ್ಪೃಶ್ಯತೆ ಆಚರಣೆ ಮಾಡಿದ ಗಫೂರ್ ಸಾಬ್ ಮತ್ತು ಅದಕ್ಕೆ ಸಹಕರಿಸಿದ ಸುಭಾಷ್ ವಿರುದ್ಧ ಸುರಪುರ ಪೊಲೀಸ್ ಠಾಣೆಯಲ್ಲಿ ಎಸ್ ಸಿ/ಎಸ್ ಟಿಪಿಎ (ಅಟ್ರಾಸಿಟಿ) ಸೆಕ್ಷನ್ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.</p>.<p>ಈಚೆಗೆ ಮೇಲಿನಿಂದ ವ್ಯಕ್ತಿಯೊಬ್ಬರಿಗೆ ಬೊಗಸೆಯಲ್ಲಿ ನೀರು ಹಾಕಿ ಕೆಳಗಡೆ ಕೂಡಿಸಿ ಉಪಾಹಾರ ನೀಡಿ, ಹೋಟೆಲ್ನಲ್ಲಿ ಅಸ್ಪೃಶ್ಯತೆ ಆಚರಣೆ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.</p>.<p class="Subhead">ಎಸ್ಪಿ ಭೇಟಿ: ಶನಿವಾರ ಗ್ರಾಮಕ್ಕೆ ತೆರಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ‘ಅಸ್ಪೃಶ್ಯತೆ ಆಚರಿಸದಂತೆ ಎಚ್ಚರಿಕೆ’ ನೀಡಿದ್ದಾರೆ.</p>.<p>ಜತೆಗೆ ದೇವಸ್ಥಾನದ ಅರ್ಚಕರು ಮತ್ತು ಹೋಟೆಲ್ ಮಾಲೀಕರ ಸಭೆ ನಡೆಸಿ, ಅಸ್ಪೃಶ್ಯತೆ ಆಚರಣೆ ಮಾಡದಂತೆ ಸೂಚಿಸಿದರು.</p>.<p>'ಪ್ರಜಾವಾಣಿ'ಯಲ್ಲಿ 2021ರ ಡಿ.31ರಂದು ‘ನೀರು ಎತ್ತಿಹಾಕುವ ವಿಡಿಯೊ ವೈರಲ್’ ಎನ್ನುವ ಶೀರ್ಷಿಕೆಯಡಿ ಸುದ್ದಿ ಪ್ರಕಟವಾಗಿತ್ತು. ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಕನ್ನೆಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಅಸ್ಪೃಶ್ಯತೆ ಆಚರಿಸಿದಂತೆ ತಾಕೀತು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ಸುರಪುರ ತಾಲ್ಲೂಕಿನ ಕನ್ನೆಳ್ಳಿ ಗ್ರಾಮದಲ್ಲಿ ನೀರು ಎತ್ತಿ ಹಾಕಿದ ಪ್ರಕರಣ ಸಂಬಂಧ ಹೋಟೆಲ್ ಮಾಲೀಕ ಗಫೂರ್ ಸಾಬ್ ಮತ್ತು ಇತರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ದಲಿತ ಸಮುದಾಯದ ವ್ಯಕ್ತಿಗೆ ಅಸ್ಪೃಶ್ಯತೆ ಆಚರಣೆ ಮಾಡಿದ ಗಫೂರ್ ಸಾಬ್ ಮತ್ತು ಅದಕ್ಕೆ ಸಹಕರಿಸಿದ ಸುಭಾಷ್ ವಿರುದ್ಧ ಸುರಪುರ ಪೊಲೀಸ್ ಠಾಣೆಯಲ್ಲಿ ಎಸ್ ಸಿ/ಎಸ್ ಟಿಪಿಎ (ಅಟ್ರಾಸಿಟಿ) ಸೆಕ್ಷನ್ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.</p>.<p>ಈಚೆಗೆ ಮೇಲಿನಿಂದ ವ್ಯಕ್ತಿಯೊಬ್ಬರಿಗೆ ಬೊಗಸೆಯಲ್ಲಿ ನೀರು ಹಾಕಿ ಕೆಳಗಡೆ ಕೂಡಿಸಿ ಉಪಾಹಾರ ನೀಡಿ, ಹೋಟೆಲ್ನಲ್ಲಿ ಅಸ್ಪೃಶ್ಯತೆ ಆಚರಣೆ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.</p>.<p class="Subhead">ಎಸ್ಪಿ ಭೇಟಿ: ಶನಿವಾರ ಗ್ರಾಮಕ್ಕೆ ತೆರಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ‘ಅಸ್ಪೃಶ್ಯತೆ ಆಚರಿಸದಂತೆ ಎಚ್ಚರಿಕೆ’ ನೀಡಿದ್ದಾರೆ.</p>.<p>ಜತೆಗೆ ದೇವಸ್ಥಾನದ ಅರ್ಚಕರು ಮತ್ತು ಹೋಟೆಲ್ ಮಾಲೀಕರ ಸಭೆ ನಡೆಸಿ, ಅಸ್ಪೃಶ್ಯತೆ ಆಚರಣೆ ಮಾಡದಂತೆ ಸೂಚಿಸಿದರು.</p>.<p>'ಪ್ರಜಾವಾಣಿ'ಯಲ್ಲಿ 2021ರ ಡಿ.31ರಂದು ‘ನೀರು ಎತ್ತಿಹಾಕುವ ವಿಡಿಯೊ ವೈರಲ್’ ಎನ್ನುವ ಶೀರ್ಷಿಕೆಯಡಿ ಸುದ್ದಿ ಪ್ರಕಟವಾಗಿತ್ತು. ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಕನ್ನೆಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಅಸ್ಪೃಶ್ಯತೆ ಆಚರಿಸಿದಂತೆ ತಾಕೀತು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>