‘ಜೆಡಿಎಸ್ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಅವರ ಒಳಸಂಚಿನಿಂದ ಶಿವ ಕುಮಾರ್ ಹಾಗೂ ಇತರರು ಮುಖ್ಯಮಂತ್ರಿಯವರ ಭದ್ರತೆಗೆ ಅಡ್ಡಿಪಡಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದುನಗರಸಭೆ ಸದಸ್ಯ ಹನಮಂತ್ ಇಟಗಿ ದೂರು ನೀಡಿದ್ದರು. ‘ಶರಣಗೌಡ ಕಂದಕೂರ ಹಾಗೂಶಿವಕುಮಾರ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.