<p><strong>ವಡಗೇರಾ (ಯಾದಗಿರಿ ಜಿಲ್ಲೆ):</strong> ಜಾತಿನಿಂದನೆ ಪ್ರಕರಣ ದಾಖಲಿಸುತ್ತೇವೆ ಎಂದು ಪರಿಶಿಷ್ಟ ಜಾರಿ ಕುಟುಂಬ ಎಚ್ಚರಿಸಿದ್ದರಿಂದ ಬೆದರಿದ ಯುವಕ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ವಿಷಯ ತಿಳಿದು ತಂದೆಯೂ ಹೃದಯಾಘಾತದಿಂದ ಇಲ್ಲಿ ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ಕೋನಹಳ್ಳಿ ಗ್ರಾಮದ ಮಾರ್ಗದಲ್ಲಿ ಮಹೆಬೂಬ್ (21) ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಷಯ ಕೇಳಿ ತಂದೆ ಸೈಯದ್ ಮೀರಸಾಬ್ ಮುಲ್ಲಾ (50) ಅವರಿಗೆ ಹೃದಯಾಘಾತವಾಗಿದೆ. ಚಿಕಿತ್ಸೆಗಾಗಿ ಕಲಬುರಗಿಗೆ ಒಯ್ದಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.</p>.<p>ಜಮೀನಿಗೆ ತೆರಳುವ ರಸ್ತೆ ಕುರಿತು ಪರಿಶಿಷ್ಟ ಜಾತಿ ಕುಟುಂಬದೊಂದಿಗೆ ಜಗಳವಾಗಿತ್ತು. ಜಾತಿ ನಿಂದನೆ ಪ್ರಕರಣ ಕುರಿತು ಕುಟುಂಬದವರು ಬೆದರಿಕೆ ಹಾಕುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p>.<p>‘ಈ ಸಂಬಂಧ 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದು, ಈಶಪ್ಪ ನಾಯ್ಕಲ್ ಎಂಬುವರನ್ನು ಬಂಧಿಸಲಾಗಿದೆ’ ಎಂದು ವಡಗೇರಾ ಠಾಣೆ ಪಿಎಸ್ಐ ಮಹೆಬೂಬ್ ಅಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ (ಯಾದಗಿರಿ ಜಿಲ್ಲೆ):</strong> ಜಾತಿನಿಂದನೆ ಪ್ರಕರಣ ದಾಖಲಿಸುತ್ತೇವೆ ಎಂದು ಪರಿಶಿಷ್ಟ ಜಾರಿ ಕುಟುಂಬ ಎಚ್ಚರಿಸಿದ್ದರಿಂದ ಬೆದರಿದ ಯುವಕ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ವಿಷಯ ತಿಳಿದು ತಂದೆಯೂ ಹೃದಯಾಘಾತದಿಂದ ಇಲ್ಲಿ ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ಕೋನಹಳ್ಳಿ ಗ್ರಾಮದ ಮಾರ್ಗದಲ್ಲಿ ಮಹೆಬೂಬ್ (21) ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಷಯ ಕೇಳಿ ತಂದೆ ಸೈಯದ್ ಮೀರಸಾಬ್ ಮುಲ್ಲಾ (50) ಅವರಿಗೆ ಹೃದಯಾಘಾತವಾಗಿದೆ. ಚಿಕಿತ್ಸೆಗಾಗಿ ಕಲಬುರಗಿಗೆ ಒಯ್ದಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.</p>.<p>ಜಮೀನಿಗೆ ತೆರಳುವ ರಸ್ತೆ ಕುರಿತು ಪರಿಶಿಷ್ಟ ಜಾತಿ ಕುಟುಂಬದೊಂದಿಗೆ ಜಗಳವಾಗಿತ್ತು. ಜಾತಿ ನಿಂದನೆ ಪ್ರಕರಣ ಕುರಿತು ಕುಟುಂಬದವರು ಬೆದರಿಕೆ ಹಾಕುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p>.<p>‘ಈ ಸಂಬಂಧ 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದು, ಈಶಪ್ಪ ನಾಯ್ಕಲ್ ಎಂಬುವರನ್ನು ಬಂಧಿಸಲಾಗಿದೆ’ ಎಂದು ವಡಗೇರಾ ಠಾಣೆ ಪಿಎಸ್ಐ ಮಹೆಬೂಬ್ ಅಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>