<p><strong>ಯಾದಗಿರಿ:</strong> ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಾಲ್ಲೂಕಿನ ಯರಗೋಳ ಗ್ರಾಮದ ದೊಡ್ಡ ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಣೆ ವೇಳೆ ಸ್ವಾರಸ್ಯಕರ ಘಟನೆಗೆ ಸಾಕ್ಷಿಯಾಯಿತು.</p>.<p>ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಣೆ ವೇಳೆ ಅಲ್ಲಿಯ ಕೂಲಿಕಾರರನ್ನು ಸಚಿವರು ಮಾತನಾಡಿಸಿದರು. ಈ ವೇಳೆ ಕೆಲವರು ನಮಗೆ ದಿನಕ್ಕೆ ₹249 ಕೂಲಿ ನೀಡುತ್ತಿದ್ದು, ಬರಗಾಲ ಪರಿಸ್ಥಿತಿ ವಿವರಿಸಿ ಕೂಲಿ ಹೆಚ್ಚಳ ಮಾಡುವಂತೆ ಸಚಿವರಿಗೆ ಮನವಿ ಮಾಡಿದರು. ಈ ವೇಳೆ ಸಚಿವ ದೇಶಪಾಂಡೆ ಮಾತನಾಡಿ, ಇದು ಕೇಂದ್ರ ಸರ್ಕಾರದ ಯೋಜನೆ. ಹೀಗಾಗಿ ಕೂಲಿ ಹೆಚ್ಚಳ ನಾವು (ರಾಜ್ಯ ಸರ್ಕಾರ) ಮಾಡಲು ಆಗುವುದಿಲ್ಲ ಎಂದು ತಿಳಿಸಿದರು. ಇದಕ್ಕೆ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಧ್ವನಿಗೂಡಿಸಿದರು.</p>.<p>ಈ ವೇಳೆ ಮಹಿಳೆಯರು ಭಾರತ ಸರ್ಕಾರ ಗೊತ್ತಿಲ್ಲ ಎಂದು ಹೇಳಿದರು. ಈ ವೇಳೆ ಸಚಿವ ದೇಶಪಾಂಡೆ, ಭಾರತ ಸರ್ಕಾರದ ಎಂದರೆ ಮೋದಿ ಸರ್ಕಾರ ಎಂದು ಹೇಳಿದರು. ಮಹಿಳೆಯರು ಆಗ ಮೋದಿ ಸರ್ಕಾರ ಎಂದು ಹೇಳಿದ್ದರಿಂದ ತಲೆಯಾಡಿಸಿದರು.</p>.<p>ಕೇಂದ್ರ ಸರ್ಕಾರ ಎಂದರೆ ಗೊತ್ತಾಗುವುದಿಲ್ಲ. ಮೋದಿ ಸರ್ಕಾರ ಎಂದರೆ ಗೊತ್ತಾಗುತ್ತದೆ. ನೀವು ಮೋದಿಗೆ ಓಟ್ ಹಾಕಿದ್ದೀರಲ್ಲ ಎಂದು ಪ್ರಶ್ನೆ ಮಾಡಿದರು.</p>.<p>ಗುಳೆ ಹೋಗುವುದನ್ನು ತಡೆಯಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಂಡು ಸ್ಥಳೀಯವಾಗಿ ಕೆಲಸ ನೀಡಲಾಗುತ್ತಿದೆ ಎಂದರು.</p>.<p>ನಂತರ ಕೂಲಿಕಾರರ ಪಡಿತರ ಬಗ್ಗೆ ವಿಚಾರಣೆ ನಡೆಸಿದರು. ಎಷ್ಟು ಕೇಜಿ ಅಕ್ಕಿ ಕೊಡುತ್ತಾರೆ ಎಂದು ಪ್ರಶ್ನಿಸಿದರು. ಈ ವೇಳೆ ಮಹಿಳೆಯರಿ 7 ಕೇಜಿ ಅಕ್ಕಿ, ಉಪ್ಪು, ಎಣ್ಣೆ, ಇನ್ನಿತರ ಆಹಾರ ಪದಾರ್ಥ ವಿತರಿಸುತ್ತಿದ್ದಾರೆ ಎಂದು ತಿಳಿಸಿದರು.</p>.<p>ಶಾಸಕ ನಾಗನಗೌಡ ಕಂದಕೂರ ಮಾತನಾಡಿ, ತಾಲ್ಲೂಕಿನಲ್ಲಿ ಸುಮಾರು 60-70 ತಾಂಡಾಗಳಿವೆ. ಸ್ಥಳೀಯವಾಗಿ ಕೆಲಸ ಸಿಗದಿದ್ದರೆ ಮುಂಬೈ, ಪುಣೆ, ಬೆಂಗಳೂರು ನಗರಗಳಿಗೆ ಗುಳೆ ಹೋಗುತ್ತಾರೆ. ಇನ್ನು ಯರಗೋಳ ಗ್ರಾಮದ ರೈತರು ಕೆರೆ ತುಂಬಿದರೆ ವರ್ಷಕ್ಕೆ ಎರಡು ಬೆಳೆ ಪಡೆಯುತ್ತಾರೆ. ಮಳೆ ಕೊರತೆಯಾಗಿ ಕೆರೆಯಲ್ಲಿ ನೀರು ಇಲ್ಲದಿರುವುದರಿಂದ 4-5 ವರ್ಷಗಳಿಂದ ಒಂದೂ ಬೆಳೆ ಇಲ್ಲ ಎಂದು ಸಚಿವರಿಗೆ ಮನವರಿಕೆ ಮಾಡಿದರು.</p>.<p>ನಂತರ ಸಚಿವ ದೇಶಪಾಂಡೆ ಮಾತನಾಡಿ, ಕೂಲಿ ಕಾರ್ಮಿಕರಿಗೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ. ಕೂಲಿ ಮಾಡುವುದು ನಿಮ್ಮಿಂದಲೆ ಕೊನೆಯಾಗಲಿ. ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಸಲಹೆ ನೀಡಿದರು.</p>.<p>ರಾಜ್ಯ ಸರ್ಕಾರ ಆಯುಷ್ಮಾನ ಕರ್ನಾಟಕ ಯೋಜನೆಯಡಿ ₹5 ಲಕ್ಷ ವರೆಗೆ ಚಿಕಿತ್ಸೆ ಉಚಿತವಾಗಿ ಲಭಿಸಲಿದೆ. ಹೀಗಾಗಿ ಈ ಯೋಜನೆಯನ್ನು ಉಪಯೋಗಿಸಿಕೊಳ್ಳಿ ಎಂದರು.</p>.<p>ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಪ್ರಭಾರ ಉಪ ಕಾರ್ಯದರ್ಶಿ ದೇವಿಕಾ ಆರ್., ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಾಲ್ಲೂಕಿನ ಯರಗೋಳ ಗ್ರಾಮದ ದೊಡ್ಡ ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಣೆ ವೇಳೆ ಸ್ವಾರಸ್ಯಕರ ಘಟನೆಗೆ ಸಾಕ್ಷಿಯಾಯಿತು.</p>.<p>ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಣೆ ವೇಳೆ ಅಲ್ಲಿಯ ಕೂಲಿಕಾರರನ್ನು ಸಚಿವರು ಮಾತನಾಡಿಸಿದರು. ಈ ವೇಳೆ ಕೆಲವರು ನಮಗೆ ದಿನಕ್ಕೆ ₹249 ಕೂಲಿ ನೀಡುತ್ತಿದ್ದು, ಬರಗಾಲ ಪರಿಸ್ಥಿತಿ ವಿವರಿಸಿ ಕೂಲಿ ಹೆಚ್ಚಳ ಮಾಡುವಂತೆ ಸಚಿವರಿಗೆ ಮನವಿ ಮಾಡಿದರು. ಈ ವೇಳೆ ಸಚಿವ ದೇಶಪಾಂಡೆ ಮಾತನಾಡಿ, ಇದು ಕೇಂದ್ರ ಸರ್ಕಾರದ ಯೋಜನೆ. ಹೀಗಾಗಿ ಕೂಲಿ ಹೆಚ್ಚಳ ನಾವು (ರಾಜ್ಯ ಸರ್ಕಾರ) ಮಾಡಲು ಆಗುವುದಿಲ್ಲ ಎಂದು ತಿಳಿಸಿದರು. ಇದಕ್ಕೆ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಧ್ವನಿಗೂಡಿಸಿದರು.</p>.<p>ಈ ವೇಳೆ ಮಹಿಳೆಯರು ಭಾರತ ಸರ್ಕಾರ ಗೊತ್ತಿಲ್ಲ ಎಂದು ಹೇಳಿದರು. ಈ ವೇಳೆ ಸಚಿವ ದೇಶಪಾಂಡೆ, ಭಾರತ ಸರ್ಕಾರದ ಎಂದರೆ ಮೋದಿ ಸರ್ಕಾರ ಎಂದು ಹೇಳಿದರು. ಮಹಿಳೆಯರು ಆಗ ಮೋದಿ ಸರ್ಕಾರ ಎಂದು ಹೇಳಿದ್ದರಿಂದ ತಲೆಯಾಡಿಸಿದರು.</p>.<p>ಕೇಂದ್ರ ಸರ್ಕಾರ ಎಂದರೆ ಗೊತ್ತಾಗುವುದಿಲ್ಲ. ಮೋದಿ ಸರ್ಕಾರ ಎಂದರೆ ಗೊತ್ತಾಗುತ್ತದೆ. ನೀವು ಮೋದಿಗೆ ಓಟ್ ಹಾಕಿದ್ದೀರಲ್ಲ ಎಂದು ಪ್ರಶ್ನೆ ಮಾಡಿದರು.</p>.<p>ಗುಳೆ ಹೋಗುವುದನ್ನು ತಡೆಯಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಂಡು ಸ್ಥಳೀಯವಾಗಿ ಕೆಲಸ ನೀಡಲಾಗುತ್ತಿದೆ ಎಂದರು.</p>.<p>ನಂತರ ಕೂಲಿಕಾರರ ಪಡಿತರ ಬಗ್ಗೆ ವಿಚಾರಣೆ ನಡೆಸಿದರು. ಎಷ್ಟು ಕೇಜಿ ಅಕ್ಕಿ ಕೊಡುತ್ತಾರೆ ಎಂದು ಪ್ರಶ್ನಿಸಿದರು. ಈ ವೇಳೆ ಮಹಿಳೆಯರಿ 7 ಕೇಜಿ ಅಕ್ಕಿ, ಉಪ್ಪು, ಎಣ್ಣೆ, ಇನ್ನಿತರ ಆಹಾರ ಪದಾರ್ಥ ವಿತರಿಸುತ್ತಿದ್ದಾರೆ ಎಂದು ತಿಳಿಸಿದರು.</p>.<p>ಶಾಸಕ ನಾಗನಗೌಡ ಕಂದಕೂರ ಮಾತನಾಡಿ, ತಾಲ್ಲೂಕಿನಲ್ಲಿ ಸುಮಾರು 60-70 ತಾಂಡಾಗಳಿವೆ. ಸ್ಥಳೀಯವಾಗಿ ಕೆಲಸ ಸಿಗದಿದ್ದರೆ ಮುಂಬೈ, ಪುಣೆ, ಬೆಂಗಳೂರು ನಗರಗಳಿಗೆ ಗುಳೆ ಹೋಗುತ್ತಾರೆ. ಇನ್ನು ಯರಗೋಳ ಗ್ರಾಮದ ರೈತರು ಕೆರೆ ತುಂಬಿದರೆ ವರ್ಷಕ್ಕೆ ಎರಡು ಬೆಳೆ ಪಡೆಯುತ್ತಾರೆ. ಮಳೆ ಕೊರತೆಯಾಗಿ ಕೆರೆಯಲ್ಲಿ ನೀರು ಇಲ್ಲದಿರುವುದರಿಂದ 4-5 ವರ್ಷಗಳಿಂದ ಒಂದೂ ಬೆಳೆ ಇಲ್ಲ ಎಂದು ಸಚಿವರಿಗೆ ಮನವರಿಕೆ ಮಾಡಿದರು.</p>.<p>ನಂತರ ಸಚಿವ ದೇಶಪಾಂಡೆ ಮಾತನಾಡಿ, ಕೂಲಿ ಕಾರ್ಮಿಕರಿಗೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ. ಕೂಲಿ ಮಾಡುವುದು ನಿಮ್ಮಿಂದಲೆ ಕೊನೆಯಾಗಲಿ. ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಸಲಹೆ ನೀಡಿದರು.</p>.<p>ರಾಜ್ಯ ಸರ್ಕಾರ ಆಯುಷ್ಮಾನ ಕರ್ನಾಟಕ ಯೋಜನೆಯಡಿ ₹5 ಲಕ್ಷ ವರೆಗೆ ಚಿಕಿತ್ಸೆ ಉಚಿತವಾಗಿ ಲಭಿಸಲಿದೆ. ಹೀಗಾಗಿ ಈ ಯೋಜನೆಯನ್ನು ಉಪಯೋಗಿಸಿಕೊಳ್ಳಿ ಎಂದರು.</p>.<p>ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಪ್ರಭಾರ ಉಪ ಕಾರ್ಯದರ್ಶಿ ದೇವಿಕಾ ಆರ್., ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>