<p><strong>ಗುರುಮಠಕಲ್</strong>: ‘ಮುಂದಿನ ಕೆಲವು ದಿನಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭಗೊಳ್ಳಲಿವೆ. ಹೀಗಾಗಿ ನಿಮಗೆ ಕಠಿಣವೆನ್ನಿಸಿದ ವಿಷಯಗಳ ಅಭ್ಯಾಸವನ್ನು ಪುನರಾವರ್ತಿಸಿ ಮತ್ತು ಮನನ ಮಾಡುತ್ತಿರಿ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲವೀಶ್ ಒರಾಡಿಯಾ ಅವರು ವಿದ್ಯಾರ್ಥಿಗಳಿಗ ಸಲಹೆ ನೀಡಿದರು.</p>.<p>ತಾಲ್ಲೂಕಿನ ಯಲ್ಸತ್ತಿ ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ್ದ ಅವರು ವಿದ್ಯಾರ್ಥಿಗಳೊಡನೆ ಚರ್ಚಿಸಿ, ಉತ್ತಮ ತಯಾರಿಯೊಡನೆ ಪರೀಕ್ಷೆ ಎದುರಿಸಿ ಅತ್ಯುತ್ತಮ ಫಲಿತಾಂಶ ಪಡೆಯುವಂತೆ ಹೇಳಿದರು.</p>.<p>ಅಂಗನವಾಡಿ ಮತ್ತು ಶಾಲಾ ಕಟ್ಟಡಗಳು, ಶಾಲೆಯಲ್ಲಿ ನರೇಗಾ ಯೋಜನೆಯಡಿ ನಿರ್ಮಾಣ ಹಂತದ ಶೌಚಾಲಯಗಳನ್ನು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ದಾಖಲೆಗಳನ್ನು ಪರಿಶೀಲಿಸಿದರು.</p>.<p>ಕೂಲಿ ಕಾರ್ಮಿಕರಿಗೆ ಶೀಘ್ರವೇ ಎನ್ಎಂಆರ್ ಮಾಡುವ ಮೂಲಕ ಕೆಲಸ ಕಲ್ಪಿಸುವುದು, ಸ್ವಚ್ಛವಾಹಿನಿ ಮೂಲಕ ಗ್ರಾಮದ ಸ್ವಚ್ಛತೆಗೆ ಕ್ರಮ, ಕರವಸೂಲಿ, ಎನ್ಆರ್ಎಲ್ಎಂ ಮೂಲಕ ಮಹಿಳಾ ಒಕ್ಕೂಟಗಳಿಗೆ ಸಾಲ ಸೌಲಭ್ಯ ಕಲ್ಪಿಸುವ ಕುರಿತು ಮಾಹಿತಿ ಪಡೆದು, ಅಗತ್ಯ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗ್ರಾಮದ ನೀರು ಶುದ್ಧೀಕರಣ ಘಟಕವನ್ನು ಸಂಪೂರ್ಣ ದುರಸ್ಥಿಗೊಳಿಸಿ,ಶೀಘ್ರವೇ ಜನರ ಬಳಕೆಗೆ ಅನುಕೂಲಕ ಮಾಡುವಂತೆ ತಾಕೀತು ಮಾಡಿದರು.</p>.<p>ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪುಸ್ತಕಗಳು ಮತ್ತು ಅಧ್ಯಯನ ಸಾಮಾಗ್ರಿಗಳು, ಕಾದಂಬರಿ ಸೇರಿದಂತೆ ಇತರೆ ಪ್ರಕಾರದ ಪುಸ್ತಕಗಳನ್ನು ಪ್ರತ್ಯೇಕವಾಗಿರಿಸಿದರೆ ಓದುಗರಿಗೆ ಮತ್ತು ನಿರ್ವಹಣೆಗೂ ಅನುಕೂಲವಾಗಲಿದೆ. ಆದ್ದರಿಂದ ಪುಸ್ತಕಗಳ ವರ್ಗೀಕರಣಕ್ಕೆ ತಕ್ಕಂತೆ ವ್ಯವಸ್ಥಿತವಾಗಿರಿಸಲು ಗ್ರಂಥಪಾಲಕರಿಗೆ ಸಲಹೆ ನೀಡಿದರು.</p>.<p>ಗ್ರಾಮದಲ್ಲಿನ ಕೋತಿಗಳ ಕಾಟದ ಸಮಸ್ಯೆ ಪರಿಹಾರಕ್ಕೆ ಅರಣ್ಯ ಇಲಾಖೆಗೆ ಮಾತನಾಡಿ, ಕೋತಿಗಳನ್ನು ಹಿಡಿದು, ಸ್ಥಳಾಂತರಿಸುವ ಕುರಿತು ಚರ್ಚಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.</p>.<p>ಪಂಚಾಯಿತಿಯ ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ, ತಾಲ್ಲೂಕು ಪಂಚಾಯಿತಿ ಇಒ ಅಂಬರೀಶ ಪಾಟೀಲ, ಸಹಾಯಕ ನಿರ್ದೇಶಕ ರಾಮಚಂದ್ರ ಬಸೂದೆ, ಸಹಾಯಕ ಕೃಷಿ ನಿರ್ದೇಶಕ ಸುರೇಶ, ಪಿಡಿಒ ಸೈಯದ್ ಅಲಿ ಸೇರಿದಂತೆ ವಿಎಒ, ಪಂಚಾಯಿತಿ ಮತ್ತು ನರೇಗಾ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಮಠಕಲ್</strong>: ‘ಮುಂದಿನ ಕೆಲವು ದಿನಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭಗೊಳ್ಳಲಿವೆ. ಹೀಗಾಗಿ ನಿಮಗೆ ಕಠಿಣವೆನ್ನಿಸಿದ ವಿಷಯಗಳ ಅಭ್ಯಾಸವನ್ನು ಪುನರಾವರ್ತಿಸಿ ಮತ್ತು ಮನನ ಮಾಡುತ್ತಿರಿ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲವೀಶ್ ಒರಾಡಿಯಾ ಅವರು ವಿದ್ಯಾರ್ಥಿಗಳಿಗ ಸಲಹೆ ನೀಡಿದರು.</p>.<p>ತಾಲ್ಲೂಕಿನ ಯಲ್ಸತ್ತಿ ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ್ದ ಅವರು ವಿದ್ಯಾರ್ಥಿಗಳೊಡನೆ ಚರ್ಚಿಸಿ, ಉತ್ತಮ ತಯಾರಿಯೊಡನೆ ಪರೀಕ್ಷೆ ಎದುರಿಸಿ ಅತ್ಯುತ್ತಮ ಫಲಿತಾಂಶ ಪಡೆಯುವಂತೆ ಹೇಳಿದರು.</p>.<p>ಅಂಗನವಾಡಿ ಮತ್ತು ಶಾಲಾ ಕಟ್ಟಡಗಳು, ಶಾಲೆಯಲ್ಲಿ ನರೇಗಾ ಯೋಜನೆಯಡಿ ನಿರ್ಮಾಣ ಹಂತದ ಶೌಚಾಲಯಗಳನ್ನು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ದಾಖಲೆಗಳನ್ನು ಪರಿಶೀಲಿಸಿದರು.</p>.<p>ಕೂಲಿ ಕಾರ್ಮಿಕರಿಗೆ ಶೀಘ್ರವೇ ಎನ್ಎಂಆರ್ ಮಾಡುವ ಮೂಲಕ ಕೆಲಸ ಕಲ್ಪಿಸುವುದು, ಸ್ವಚ್ಛವಾಹಿನಿ ಮೂಲಕ ಗ್ರಾಮದ ಸ್ವಚ್ಛತೆಗೆ ಕ್ರಮ, ಕರವಸೂಲಿ, ಎನ್ಆರ್ಎಲ್ಎಂ ಮೂಲಕ ಮಹಿಳಾ ಒಕ್ಕೂಟಗಳಿಗೆ ಸಾಲ ಸೌಲಭ್ಯ ಕಲ್ಪಿಸುವ ಕುರಿತು ಮಾಹಿತಿ ಪಡೆದು, ಅಗತ್ಯ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗ್ರಾಮದ ನೀರು ಶುದ್ಧೀಕರಣ ಘಟಕವನ್ನು ಸಂಪೂರ್ಣ ದುರಸ್ಥಿಗೊಳಿಸಿ,ಶೀಘ್ರವೇ ಜನರ ಬಳಕೆಗೆ ಅನುಕೂಲಕ ಮಾಡುವಂತೆ ತಾಕೀತು ಮಾಡಿದರು.</p>.<p>ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪುಸ್ತಕಗಳು ಮತ್ತು ಅಧ್ಯಯನ ಸಾಮಾಗ್ರಿಗಳು, ಕಾದಂಬರಿ ಸೇರಿದಂತೆ ಇತರೆ ಪ್ರಕಾರದ ಪುಸ್ತಕಗಳನ್ನು ಪ್ರತ್ಯೇಕವಾಗಿರಿಸಿದರೆ ಓದುಗರಿಗೆ ಮತ್ತು ನಿರ್ವಹಣೆಗೂ ಅನುಕೂಲವಾಗಲಿದೆ. ಆದ್ದರಿಂದ ಪುಸ್ತಕಗಳ ವರ್ಗೀಕರಣಕ್ಕೆ ತಕ್ಕಂತೆ ವ್ಯವಸ್ಥಿತವಾಗಿರಿಸಲು ಗ್ರಂಥಪಾಲಕರಿಗೆ ಸಲಹೆ ನೀಡಿದರು.</p>.<p>ಗ್ರಾಮದಲ್ಲಿನ ಕೋತಿಗಳ ಕಾಟದ ಸಮಸ್ಯೆ ಪರಿಹಾರಕ್ಕೆ ಅರಣ್ಯ ಇಲಾಖೆಗೆ ಮಾತನಾಡಿ, ಕೋತಿಗಳನ್ನು ಹಿಡಿದು, ಸ್ಥಳಾಂತರಿಸುವ ಕುರಿತು ಚರ್ಚಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.</p>.<p>ಪಂಚಾಯಿತಿಯ ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ, ತಾಲ್ಲೂಕು ಪಂಚಾಯಿತಿ ಇಒ ಅಂಬರೀಶ ಪಾಟೀಲ, ಸಹಾಯಕ ನಿರ್ದೇಶಕ ರಾಮಚಂದ್ರ ಬಸೂದೆ, ಸಹಾಯಕ ಕೃಷಿ ನಿರ್ದೇಶಕ ಸುರೇಶ, ಪಿಡಿಒ ಸೈಯದ್ ಅಲಿ ಸೇರಿದಂತೆ ವಿಎಒ, ಪಂಚಾಯಿತಿ ಮತ್ತು ನರೇಗಾ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>