<p><strong>ಹುಣಸಗಿ:</strong> ತಾಲ್ಲೂಕಿನಲ್ಲಿ ಕೈಗೊಳ್ಳಲಾಗುತ್ತಿರುವ ಜೆಜೆಎಂ ಹಾಗೂ ಜಲಧಾರೆ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವಿಶ್ ಓರಡಿಯಾ ಭೇಟಿ ನೀಡಿ ಪರಿಶೀಲಿಸಿದರು.</p>.<p>ತಾಲ್ಲೂಕಿನ ದ್ಯಾಮನಹಾಳ, ರಾಜವಾಳ ಮತ್ತಿತರ ಗ್ರಾಮಗಳಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಕಾಮಗಾರಿ ಪೂರ್ಣಗೊಳ್ಳುವುದಕ್ಕೂ ಮುನ್ನವೇ ನಲ್ಲಿ ಹಾಗೂ ಪೈಪ್ಗಳು ಹಾಳಾಗಿರುವುದನ್ನು ಗಮನಿಸಿ, ಕಾಮಗಾರಿಯ ಗುಣಮಟ್ಟ ಕಾಪಾಡಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಹೇಳಿದರು.</p>.<p>ಶೀಘ್ರ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಎಚ್.ಡಿ ಪಾಟೀಲ ಅವರಿಗೆ ಸೂಚಿಸಿದರು.</p>.<p>ದ್ಯಾಮನಾಳ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರು ಪೊರೈಕೆ ನಲ್ಲಿಗಳ ಜೊತೆಗೆ ವೈಯಕ್ತಿಕ ಶೌಚಾಲಯ ಬಳಸದಿರುವುದನ್ನು ಕಂಡು ಮಹಿಳೆಯರನ್ನು ವಿಚಾರಿಸಿ, ‘ಶೌಚಾಲಯವನ್ನು ಬಳಸಿಕೊಳ್ಳಬೇಕು’ ಎಂದು ತಿಳಿ ಹೇಳಿದರು. ಈ ಕುರಿತು ಜಾಗೃತಿಗಾಗಿ ಮಾಳನೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಬಸವಣ್ಣಯ್ಯ ಉಮಚಿಮಠ ಅವರಿಗೆ ಸೂಚಿಸಿದರು.</p>.<p>ಗ್ರಾಮಸ್ಥರ ಮನವಿ: ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಮಟ್ಟ ಸುಧಾರಿಸಲು ನಮ್ಮೂರಿನಲ್ಲಿ ಗ್ರಂಥಾಲಯ ಕಲ್ಪಿಸಿಕೊಡಬೇಕು. ಶುದ್ಧ ಕುಡಿಯುವ ನೀರಿನ ಘಟಕವಿದ್ದು, ಅದು ಬಹಳ ದಿನಗಳಿಂದ ಕೆಟ್ಟು ನಿಂತಿದೆ. ಅದನ್ನು ರಿಪೇರಿ ಮಾಡಿಸಿ ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಗ್ರಂಥಾಲಯಕ್ಕೆ ಸ್ಥಳಾವಕಾಶ ಇದ್ದರೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಿಇಒ ಭರವಸೆ ನೀಡಿದರು.</p>.<p>ತಾ.ಪಂ. ಇಒ ಬಸಣ್ಣನಾಯಕ, ಎಇಇ ಎಚ್.ಡಿ. ಪಾಟೀಲ ಹಾಗೂ ಮೌನೇಶಗೌಡ ಮೇಟಿ, ಗ್ರಾ.ಪಂ. ಸದಸ್ಯರಾದ ನಾನಗೌಡ ಪೊಲೀಸ್ ಪಾಟೀಲ, ಪ್ರಭುದೇವ ಹಾಗೂ ನಿಂಗಪ್ಪ ದೇವರಮನಿ, ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ:</strong> ತಾಲ್ಲೂಕಿನಲ್ಲಿ ಕೈಗೊಳ್ಳಲಾಗುತ್ತಿರುವ ಜೆಜೆಎಂ ಹಾಗೂ ಜಲಧಾರೆ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವಿಶ್ ಓರಡಿಯಾ ಭೇಟಿ ನೀಡಿ ಪರಿಶೀಲಿಸಿದರು.</p>.<p>ತಾಲ್ಲೂಕಿನ ದ್ಯಾಮನಹಾಳ, ರಾಜವಾಳ ಮತ್ತಿತರ ಗ್ರಾಮಗಳಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಕಾಮಗಾರಿ ಪೂರ್ಣಗೊಳ್ಳುವುದಕ್ಕೂ ಮುನ್ನವೇ ನಲ್ಲಿ ಹಾಗೂ ಪೈಪ್ಗಳು ಹಾಳಾಗಿರುವುದನ್ನು ಗಮನಿಸಿ, ಕಾಮಗಾರಿಯ ಗುಣಮಟ್ಟ ಕಾಪಾಡಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಹೇಳಿದರು.</p>.<p>ಶೀಘ್ರ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಎಚ್.ಡಿ ಪಾಟೀಲ ಅವರಿಗೆ ಸೂಚಿಸಿದರು.</p>.<p>ದ್ಯಾಮನಾಳ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರು ಪೊರೈಕೆ ನಲ್ಲಿಗಳ ಜೊತೆಗೆ ವೈಯಕ್ತಿಕ ಶೌಚಾಲಯ ಬಳಸದಿರುವುದನ್ನು ಕಂಡು ಮಹಿಳೆಯರನ್ನು ವಿಚಾರಿಸಿ, ‘ಶೌಚಾಲಯವನ್ನು ಬಳಸಿಕೊಳ್ಳಬೇಕು’ ಎಂದು ತಿಳಿ ಹೇಳಿದರು. ಈ ಕುರಿತು ಜಾಗೃತಿಗಾಗಿ ಮಾಳನೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಬಸವಣ್ಣಯ್ಯ ಉಮಚಿಮಠ ಅವರಿಗೆ ಸೂಚಿಸಿದರು.</p>.<p>ಗ್ರಾಮಸ್ಥರ ಮನವಿ: ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಮಟ್ಟ ಸುಧಾರಿಸಲು ನಮ್ಮೂರಿನಲ್ಲಿ ಗ್ರಂಥಾಲಯ ಕಲ್ಪಿಸಿಕೊಡಬೇಕು. ಶುದ್ಧ ಕುಡಿಯುವ ನೀರಿನ ಘಟಕವಿದ್ದು, ಅದು ಬಹಳ ದಿನಗಳಿಂದ ಕೆಟ್ಟು ನಿಂತಿದೆ. ಅದನ್ನು ರಿಪೇರಿ ಮಾಡಿಸಿ ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಗ್ರಂಥಾಲಯಕ್ಕೆ ಸ್ಥಳಾವಕಾಶ ಇದ್ದರೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಿಇಒ ಭರವಸೆ ನೀಡಿದರು.</p>.<p>ತಾ.ಪಂ. ಇಒ ಬಸಣ್ಣನಾಯಕ, ಎಇಇ ಎಚ್.ಡಿ. ಪಾಟೀಲ ಹಾಗೂ ಮೌನೇಶಗೌಡ ಮೇಟಿ, ಗ್ರಾ.ಪಂ. ಸದಸ್ಯರಾದ ನಾನಗೌಡ ಪೊಲೀಸ್ ಪಾಟೀಲ, ಪ್ರಭುದೇವ ಹಾಗೂ ನಿಂಗಪ್ಪ ದೇವರಮನಿ, ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>