<p><strong>ವಡಗೇರಾ:</strong> ‘ಮಕ್ಕಳ ಸ್ನೇಹಿ ಶಾಲಾ ವಾತಾವರಣ ನಿರ್ಮಿಸಲು ಸರ್ಕಾರ ನರೇಗಾ ಯೋಜನೆಯಡಿ ಸಮಗ್ರ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ ಹೇಳಿದರು.</p>.<p>ತಾಲ್ಲೂಕಿನ ಉಳ್ಳೆಸೂಗುರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರಟರು ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ‘ನಮ್ಮ ಶಾಲೆ ನಮ್ಮಅಭಿಯಾನ’ದಡಿ ಶಾಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ತಾಲ್ಲೂಕಿನ ಉಳ್ಳೆಸೂಗುರು, ಐಕೂರು, ಹೈಯಾಳಿ (ಬಿ), ಟಿ.ವಡಗೇರಾ, ಗುಂಡಗುರ್ತಿ ಗ್ರಾಮ ಪಂಚಾಯಿತಿ ಸೇರಿದಂತೆ ಇತರೆ 17 ಗ್ರಾಮ ಪಂಚಾಯತಿಗಳಲ್ಲಿ 2025-26ನೇ ಸಾಲಿನ ಶಾಲಾ ಅಭಿವೃದ್ಧಿ ಕಾಮಗಾರಿಗಳಾದ ಶಾಲಾ ಕಟ್ಟಡ, ಕಾಂಪೌಂಡ್, ಅಡುಗೆ ಕೋಣೆ, ಶೌಚಾಲಯ, ಅಂಗನವಾಡಿ, ಆಟದ ಮೈದಾನ ಹಾಗೂ ಇತರೆ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.</p>.<p>ಗ್ರಾಮೀಣ ಭಾಗದ ಮಕ್ಕಳಿಗೆ ಆಟ-ಪಾಠದ ಜತೆಗೆ ಉತ್ತಮ ಪರಿಸರ, ಸ್ವಚ್ಛತೆ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ. ಹೀಗಾಗಿ ನರೇಗಾ ಯೋಜನೆಯಡಿ ಶಾಲಾ ಮಕ್ಕಳಿಗೆ ಕ್ರೀಡೆಗಳಿಗೆ ಪ್ರೋತ್ಸಾಹಿಸಲು ಗುಣಮಟ್ಟದ ಆಟದ ಮೈದಾನಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು.</p>.<p>ಗ್ರಾ.ಪಂ ಅಧ್ಯಕ್ಷ ಶರಣಪ್ಪ, ಎಸ್ಡಿಎಂಸಿ ಅಧ್ಯಕ್ಷ, ಪಿಡಿಒ ಬಿ.ಆರ್ ಪಾಟೀಲ, ರವೀಂದ್ರ ದೇಸಾಯಿ, ದುರ್ಗೇಶ್, ಮಂಜುನಾಥ, ಬಾಸ್ಕರರಾವ್, ಗ್ರಾ.ಪಂ ಸದಸ್ಯ ಹಣಮಂತ್ರಾಯ, ಬಸ್ಸಪ್ಪ ಕಾವಲಿ, ರವಿ ಪಾಟೀಲ, ನಂದಣ್ಣಗೌಡ ಸೇರಿದಂತೆ ಇತರರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ‘ಮಕ್ಕಳ ಸ್ನೇಹಿ ಶಾಲಾ ವಾತಾವರಣ ನಿರ್ಮಿಸಲು ಸರ್ಕಾರ ನರೇಗಾ ಯೋಜನೆಯಡಿ ಸಮಗ್ರ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ ಹೇಳಿದರು.</p>.<p>ತಾಲ್ಲೂಕಿನ ಉಳ್ಳೆಸೂಗುರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರಟರು ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ‘ನಮ್ಮ ಶಾಲೆ ನಮ್ಮಅಭಿಯಾನ’ದಡಿ ಶಾಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ತಾಲ್ಲೂಕಿನ ಉಳ್ಳೆಸೂಗುರು, ಐಕೂರು, ಹೈಯಾಳಿ (ಬಿ), ಟಿ.ವಡಗೇರಾ, ಗುಂಡಗುರ್ತಿ ಗ್ರಾಮ ಪಂಚಾಯಿತಿ ಸೇರಿದಂತೆ ಇತರೆ 17 ಗ್ರಾಮ ಪಂಚಾಯತಿಗಳಲ್ಲಿ 2025-26ನೇ ಸಾಲಿನ ಶಾಲಾ ಅಭಿವೃದ್ಧಿ ಕಾಮಗಾರಿಗಳಾದ ಶಾಲಾ ಕಟ್ಟಡ, ಕಾಂಪೌಂಡ್, ಅಡುಗೆ ಕೋಣೆ, ಶೌಚಾಲಯ, ಅಂಗನವಾಡಿ, ಆಟದ ಮೈದಾನ ಹಾಗೂ ಇತರೆ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.</p>.<p>ಗ್ರಾಮೀಣ ಭಾಗದ ಮಕ್ಕಳಿಗೆ ಆಟ-ಪಾಠದ ಜತೆಗೆ ಉತ್ತಮ ಪರಿಸರ, ಸ್ವಚ್ಛತೆ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ. ಹೀಗಾಗಿ ನರೇಗಾ ಯೋಜನೆಯಡಿ ಶಾಲಾ ಮಕ್ಕಳಿಗೆ ಕ್ರೀಡೆಗಳಿಗೆ ಪ್ರೋತ್ಸಾಹಿಸಲು ಗುಣಮಟ್ಟದ ಆಟದ ಮೈದಾನಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು.</p>.<p>ಗ್ರಾ.ಪಂ ಅಧ್ಯಕ್ಷ ಶರಣಪ್ಪ, ಎಸ್ಡಿಎಂಸಿ ಅಧ್ಯಕ್ಷ, ಪಿಡಿಒ ಬಿ.ಆರ್ ಪಾಟೀಲ, ರವೀಂದ್ರ ದೇಸಾಯಿ, ದುರ್ಗೇಶ್, ಮಂಜುನಾಥ, ಬಾಸ್ಕರರಾವ್, ಗ್ರಾ.ಪಂ ಸದಸ್ಯ ಹಣಮಂತ್ರಾಯ, ಬಸ್ಸಪ್ಪ ಕಾವಲಿ, ರವಿ ಪಾಟೀಲ, ನಂದಣ್ಣಗೌಡ ಸೇರಿದಂತೆ ಇತರರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>