<p><strong>ಯಾದಗಿರಿ:</strong> ‘ಮಕ್ಕಳನ್ನು ಕೂಲಿಗೆ ಕಳುಹಿಸುವ ಬದಲಿಗೆ ಶಾಲೆಗೆ ಕಳುಹಿಸುವ ಬಗ್ಗೆ ಪೋಷಕರು ಗಮನ ಹರಿಸಬೇಕು’ ಎಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಹೇಳಿದರು.</p>.<p>ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಸೋಮವಾರ ಕಾರ್ಮಿಕ ಇಲಾಖೆಯ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಸಹಯೋಗದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಆಟೋ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ (ಎಸ್ಸಿಎಸ್ಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್ಪಿ)ಯಡಿ, ಪರಿಶಿಷ್ಟ ಸಮುದಾಯಗಳ ವಾಸ ಪ್ರದೇಶಗಳಲ್ಲಿ, ಮಕ್ಕಳನ್ನು ದುಡಿಮೆಗೆ ಕಳುಹಿಸದೆ ಶಾಲೆಗೆ ಕಳುಹಿಸುವ ಬಗ್ಗೆ, ಜಿಲ್ಲೆಯ 6 ತಾಲ್ಲೂಕಿನಲ್ಲಿ ಆಟೋ ಪ್ರಚಾರ ಪ್ರದರ್ಶಿಸಲಾಗಿದೆ’ ಎಂದರು.</p>.<p>ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಮಾತನಾಡಿ, ‘ನಮ್ಮ ಇಲಾಖೆಯಿಂದ ಜನ ಜಾಗೃತಿ, ಕಾನೂನು ಅರಿವು ನೆರವು ಕಾರ್ಯಕ್ರಮ, ಬೀದಿನಾಟಕ, ಆಟೋ ಪ್ರಚಾರ ಕಾರ್ಯಕ್ರಮಗಳನ್ನು ನಿರಂತರ ನಡೆಸಲಾಗುತ್ತಿದೆ. ಅದಾಗಿಯೂ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡರೆ, ಅಂತಹ ಅಂಗಡಿ ಮಾಲೀಕರ ವಿರುದ್ಧ ₹ 20 ಸಾವಿರ ದಿಂದ ₹ 50 ಸಾವಿರದವರೆಗೆ ದಂಡ ಮತ್ತು ಕನಿಷ್ಟ 6 ತಿಂಗಳಿಂದ ಗರಿಷ್ಠ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡೂ ವಿಧಿಸಲಾಗುವುದು’ ಎಂದು ತಿಳಿಸಿದರು.</p>.<p>ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರು ರಿಯಾಜ್ ಪಟೇಲ್ ವರ್ಕನಳ್ಳಿ, ಕಾರ್ಮಿಕ ನಿರೀಕ್ಷಕಿ ಸಂಗೀತಾ ಹೊನ್ನೂರು, ವಕೀಲ ಬಿ.ಜಿ.ಪಾಟೀಲ, ಗುರುಪ್ರಸಾದ ವೈದ್ಯ, ಕಾರ್ಮಿಕ ಇಲಾಖೆ ಸಿಬ್ಬಂದಿಗಳಾದ ಬಾಲು ನಾಯಕ, ಶಿವರಾಜ ಉಪಸ್ಥಿತರಿದ್ದರು.</p>
<p><strong>ಯಾದಗಿರಿ:</strong> ‘ಮಕ್ಕಳನ್ನು ಕೂಲಿಗೆ ಕಳುಹಿಸುವ ಬದಲಿಗೆ ಶಾಲೆಗೆ ಕಳುಹಿಸುವ ಬಗ್ಗೆ ಪೋಷಕರು ಗಮನ ಹರಿಸಬೇಕು’ ಎಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಹೇಳಿದರು.</p>.<p>ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಸೋಮವಾರ ಕಾರ್ಮಿಕ ಇಲಾಖೆಯ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಸಹಯೋಗದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಆಟೋ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ (ಎಸ್ಸಿಎಸ್ಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್ಪಿ)ಯಡಿ, ಪರಿಶಿಷ್ಟ ಸಮುದಾಯಗಳ ವಾಸ ಪ್ರದೇಶಗಳಲ್ಲಿ, ಮಕ್ಕಳನ್ನು ದುಡಿಮೆಗೆ ಕಳುಹಿಸದೆ ಶಾಲೆಗೆ ಕಳುಹಿಸುವ ಬಗ್ಗೆ, ಜಿಲ್ಲೆಯ 6 ತಾಲ್ಲೂಕಿನಲ್ಲಿ ಆಟೋ ಪ್ರಚಾರ ಪ್ರದರ್ಶಿಸಲಾಗಿದೆ’ ಎಂದರು.</p>.<p>ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಮಾತನಾಡಿ, ‘ನಮ್ಮ ಇಲಾಖೆಯಿಂದ ಜನ ಜಾಗೃತಿ, ಕಾನೂನು ಅರಿವು ನೆರವು ಕಾರ್ಯಕ್ರಮ, ಬೀದಿನಾಟಕ, ಆಟೋ ಪ್ರಚಾರ ಕಾರ್ಯಕ್ರಮಗಳನ್ನು ನಿರಂತರ ನಡೆಸಲಾಗುತ್ತಿದೆ. ಅದಾಗಿಯೂ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡರೆ, ಅಂತಹ ಅಂಗಡಿ ಮಾಲೀಕರ ವಿರುದ್ಧ ₹ 20 ಸಾವಿರ ದಿಂದ ₹ 50 ಸಾವಿರದವರೆಗೆ ದಂಡ ಮತ್ತು ಕನಿಷ್ಟ 6 ತಿಂಗಳಿಂದ ಗರಿಷ್ಠ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡೂ ವಿಧಿಸಲಾಗುವುದು’ ಎಂದು ತಿಳಿಸಿದರು.</p>.<p>ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರು ರಿಯಾಜ್ ಪಟೇಲ್ ವರ್ಕನಳ್ಳಿ, ಕಾರ್ಮಿಕ ನಿರೀಕ್ಷಕಿ ಸಂಗೀತಾ ಹೊನ್ನೂರು, ವಕೀಲ ಬಿ.ಜಿ.ಪಾಟೀಲ, ಗುರುಪ್ರಸಾದ ವೈದ್ಯ, ಕಾರ್ಮಿಕ ಇಲಾಖೆ ಸಿಬ್ಬಂದಿಗಳಾದ ಬಾಲು ನಾಯಕ, ಶಿವರಾಜ ಉಪಸ್ಥಿತರಿದ್ದರು.</p>