<p><strong>ಸುರಪುರ</strong>: ‘ಬಾಲ್ಯ ವಿವಾಹ ಸಂಪೂರ್ಣ ಮುಕ್ತಿಯಿಂದ ಸುಸ್ಥಿರ ಅಭಿವೃದ್ಧಿ ಸಾಧ್ಯವಾಗುತ್ತದೆ. ಇದು ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಕೊಡುಗೆ ನೀಡುತ್ತದೆ’ ಎಂದು ಪ್ಯಾನೆಲ್ ವಕೀಲ ಪರಮಣ್ಣ ಕಕ್ಕೇರಾ ಹೇಳಿದರು.</p>.<p>ನಗರದ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ‘ಬಾಲ್ಯ ವಿವಾಹ ಮುಕ್ತ ಭಾರತ’ ವಿಷಯದ ಕುರಿತು ಅವರು ಮಾತನಾಡಿದರು.</p>.<p>‘ಕೇಂದ್ರ ಮಹಿಳಾ ಮತ್ತು ಅಭಿವೃದ್ಧಿ ಸಚಿವಾಲಯ ನ. 27, 2024 ರಂದು ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ ಆರಂಭಿಸಿದೆ. ಇದರ ಗುರಿ 2030ರ ವೇಳೆಗೆ ದೇಶವನ್ನು ಬಾಲ್ಯ ವಿವಾಹ ಮುಕ್ತಗೊಳಿಸುವುದು ಆಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದರು. </p>.<p>ವಕೀಲೆ ಪೂಜಾ ನಾಯಕ ಮಾತನಾಡಿ, ‘ಕಾನೂನು ಇಲಾಖೆ ಇತರ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯ ವಿವಾಹ ನಿಷೇಧ ಕುರಿತು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ’ ಎಂದರು.</p>.<p>‘ಮಕ್ಕಳು ಪೋಷಕರು ಅಥವಾ ಸಮುದಾಯದ ಒತ್ತಾಯಕ್ಕೆ ಮಣಿದು ಬಾಲ್ಯ ವಿವಾಹಕ್ಕೆ ಒಳಗಾಗಬಾರದು. ಇದರಿಂದ ದುಷ್ಪರಿಣಾಮಗಳು ಹೆಚ್ಚು. ಬಾಲ್ಯ ವಿವಾಹ ಮಾಡಿದ ಇದಕ್ಕೆ ಪ್ರೇರಣೆ ನೀಡಿದ ವ್ಯಕ್ತಿಗಳಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಲಕ್ಷ್ಮಣ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಬಿಆರ್ಪಿ ಖಾದರ್ ಪಟೇಲ ನಿರೂಪಿಸಿದರು. ಶಿಕ್ಷಕ ಜಯರಾಮ ಚವ್ಹಾಣ ವಂದಿಸಿದರು.</p>.<p>ಶಿಕ್ಷಕರಾದ ಮಹೇಶ ಹುಜರತಿ, ಆನಂದಕುಮಾರ, ಮಹ್ಮದ್ ಅಲಿ, ಸರಸ್ವತಿ, ಸಾಬೇರಾ, ನಜಮಾ ತಬಸುಮ, ಫೌಕಿಯಾ, ಮಲ್ಲಮ್ಮ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ಬಾಲ್ಯ ವಿವಾಹ ಸಂಪೂರ್ಣ ಮುಕ್ತಿಯಿಂದ ಸುಸ್ಥಿರ ಅಭಿವೃದ್ಧಿ ಸಾಧ್ಯವಾಗುತ್ತದೆ. ಇದು ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಕೊಡುಗೆ ನೀಡುತ್ತದೆ’ ಎಂದು ಪ್ಯಾನೆಲ್ ವಕೀಲ ಪರಮಣ್ಣ ಕಕ್ಕೇರಾ ಹೇಳಿದರು.</p>.<p>ನಗರದ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ‘ಬಾಲ್ಯ ವಿವಾಹ ಮುಕ್ತ ಭಾರತ’ ವಿಷಯದ ಕುರಿತು ಅವರು ಮಾತನಾಡಿದರು.</p>.<p>‘ಕೇಂದ್ರ ಮಹಿಳಾ ಮತ್ತು ಅಭಿವೃದ್ಧಿ ಸಚಿವಾಲಯ ನ. 27, 2024 ರಂದು ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ ಆರಂಭಿಸಿದೆ. ಇದರ ಗುರಿ 2030ರ ವೇಳೆಗೆ ದೇಶವನ್ನು ಬಾಲ್ಯ ವಿವಾಹ ಮುಕ್ತಗೊಳಿಸುವುದು ಆಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದರು. </p>.<p>ವಕೀಲೆ ಪೂಜಾ ನಾಯಕ ಮಾತನಾಡಿ, ‘ಕಾನೂನು ಇಲಾಖೆ ಇತರ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯ ವಿವಾಹ ನಿಷೇಧ ಕುರಿತು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ’ ಎಂದರು.</p>.<p>‘ಮಕ್ಕಳು ಪೋಷಕರು ಅಥವಾ ಸಮುದಾಯದ ಒತ್ತಾಯಕ್ಕೆ ಮಣಿದು ಬಾಲ್ಯ ವಿವಾಹಕ್ಕೆ ಒಳಗಾಗಬಾರದು. ಇದರಿಂದ ದುಷ್ಪರಿಣಾಮಗಳು ಹೆಚ್ಚು. ಬಾಲ್ಯ ವಿವಾಹ ಮಾಡಿದ ಇದಕ್ಕೆ ಪ್ರೇರಣೆ ನೀಡಿದ ವ್ಯಕ್ತಿಗಳಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಲಕ್ಷ್ಮಣ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಬಿಆರ್ಪಿ ಖಾದರ್ ಪಟೇಲ ನಿರೂಪಿಸಿದರು. ಶಿಕ್ಷಕ ಜಯರಾಮ ಚವ್ಹಾಣ ವಂದಿಸಿದರು.</p>.<p>ಶಿಕ್ಷಕರಾದ ಮಹೇಶ ಹುಜರತಿ, ಆನಂದಕುಮಾರ, ಮಹ್ಮದ್ ಅಲಿ, ಸರಸ್ವತಿ, ಸಾಬೇರಾ, ನಜಮಾ ತಬಸುಮ, ಫೌಕಿಯಾ, ಮಲ್ಲಮ್ಮ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>