<p><strong>ಹುಣಸಗಿ:</strong> ಮುಂಬರುವ ಎಸ್ಎಸ್ಎಲ್ಸಿ ಪರಿಕ್ಷೆಗೆ ಮಕ್ಕಳನ್ನು ತಯಾರು ಮಾಡುವ ನಿಟ್ಟಿನಲ್ಲಿ ಈಗಿನಿಂದಲೇ ಎಲ್ಲ ಶಿಕ್ಷಕರು ಗುಣಾತ್ಮಕ ಬೊಧನೆಗೆ ಆದ್ಯತೆ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ ಹೇಳಿದರು.</p>.<p>ಹುಣಸಗಿ ತಾಲ್ಲೂಕಿನ ವಜ್ಜಲ ಗ್ರಾಮದ ಆದರ್ಶ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಆಯಾ ಶಾಲೆಗಳಲ್ಲಿ ಲಭ್ಯವಿರುವ ವಸ್ತುಗಳನ್ನೇ ಬಳಕೆ ಮಾಡಿಕೊಂಡು ಮಕ್ಕಳಿಗೆ ಪ್ರಯೋಗಗಳ ಮೂಲಕ ಬೋಧನೆ ಮಾಡಿದಾಗ ಮನಮುಟ್ಟಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಹುಣಸಗಿ ಹಾಗೂ ಸುರಪುರ ತಾಲ್ಲೂಕಿನಲ್ಲಿನ ವಿಜ್ಞಾನ ಶಿಕ್ಷಕರಿಗೆ ಈ ತರಬೇತಿ ಹೆಚ್ಚು ಸಹಕಾರಿಯಾಗಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಶಿಕ್ಷಕ ಎಸ್.ಎಸ್.ಬಾಕಲಿ ಮಾತನಾಡಿ, ನಮ್ಮಲ್ಲಿನ ಮಕ್ಕಳ ಶೈಕ್ಷಣಿಕ ಗುಣಮಟ್ಟ ಚನ್ನಾಗಿದೆ. ಆದರೆ, ನುರಿತ ಶಿಕ್ಷಕರಿಂದ ಬೊಧನೆ ಮಾಡಿದಾಗ ಎಲ್ಲ ವಿಷಯವೂ ಸರಳವಾಗುತ್ತದೆ ಎಂದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿ ಯಲಗೂರೇಶ ಕುಲಕರ್ಣಿ, ದತ್ತಾತ್ರೇಯ ಕುಲಕರ್ಣಿ, ರಘು .ಡಿ, ಶಿವಕುಮಾರ ಹಿರೇಮಠ, ಸಾಹೇಬಗೌಡ ಉಕ್ಕಲಿ ಭಾಗವಹಿಸಿ ವಿಜ್ಞಾನ ವಿಷಯದ ಕುರಿತು ತರಬೇತಿ ನೀಡಿದರು.</p>.<p>ಮುಖ್ಯ ಅತಿಥಿಗಳಾಗಿ ಬಿಆರ್.ಪಿ ಖಾದರ್ ಪಟೇಲ, ಅಗಸ್ತ್ಯ ಫೌಂಡೇಶಷನ್ನ ಸಾಬಣ್ಣ ಬಸ್ಕಿ, ಆಕಾಶ, ಸಿಆರ್.ಪಿ ಬಸವರಾಜ ದಳವಾಯಿ, ಅಗಸ್ತ್ಯ ಪೌಂಡೇಶನ್ನ ಯಮನೂರಪ್ಪ ಸೇರಿದಂತೆ ತಾಲ್ಲೂಕಿನ 46 ಶಾಲೆಗಳ ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ:</strong> ಮುಂಬರುವ ಎಸ್ಎಸ್ಎಲ್ಸಿ ಪರಿಕ್ಷೆಗೆ ಮಕ್ಕಳನ್ನು ತಯಾರು ಮಾಡುವ ನಿಟ್ಟಿನಲ್ಲಿ ಈಗಿನಿಂದಲೇ ಎಲ್ಲ ಶಿಕ್ಷಕರು ಗುಣಾತ್ಮಕ ಬೊಧನೆಗೆ ಆದ್ಯತೆ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ ಹೇಳಿದರು.</p>.<p>ಹುಣಸಗಿ ತಾಲ್ಲೂಕಿನ ವಜ್ಜಲ ಗ್ರಾಮದ ಆದರ್ಶ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಆಯಾ ಶಾಲೆಗಳಲ್ಲಿ ಲಭ್ಯವಿರುವ ವಸ್ತುಗಳನ್ನೇ ಬಳಕೆ ಮಾಡಿಕೊಂಡು ಮಕ್ಕಳಿಗೆ ಪ್ರಯೋಗಗಳ ಮೂಲಕ ಬೋಧನೆ ಮಾಡಿದಾಗ ಮನಮುಟ್ಟಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಹುಣಸಗಿ ಹಾಗೂ ಸುರಪುರ ತಾಲ್ಲೂಕಿನಲ್ಲಿನ ವಿಜ್ಞಾನ ಶಿಕ್ಷಕರಿಗೆ ಈ ತರಬೇತಿ ಹೆಚ್ಚು ಸಹಕಾರಿಯಾಗಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಶಿಕ್ಷಕ ಎಸ್.ಎಸ್.ಬಾಕಲಿ ಮಾತನಾಡಿ, ನಮ್ಮಲ್ಲಿನ ಮಕ್ಕಳ ಶೈಕ್ಷಣಿಕ ಗುಣಮಟ್ಟ ಚನ್ನಾಗಿದೆ. ಆದರೆ, ನುರಿತ ಶಿಕ್ಷಕರಿಂದ ಬೊಧನೆ ಮಾಡಿದಾಗ ಎಲ್ಲ ವಿಷಯವೂ ಸರಳವಾಗುತ್ತದೆ ಎಂದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿ ಯಲಗೂರೇಶ ಕುಲಕರ್ಣಿ, ದತ್ತಾತ್ರೇಯ ಕುಲಕರ್ಣಿ, ರಘು .ಡಿ, ಶಿವಕುಮಾರ ಹಿರೇಮಠ, ಸಾಹೇಬಗೌಡ ಉಕ್ಕಲಿ ಭಾಗವಹಿಸಿ ವಿಜ್ಞಾನ ವಿಷಯದ ಕುರಿತು ತರಬೇತಿ ನೀಡಿದರು.</p>.<p>ಮುಖ್ಯ ಅತಿಥಿಗಳಾಗಿ ಬಿಆರ್.ಪಿ ಖಾದರ್ ಪಟೇಲ, ಅಗಸ್ತ್ಯ ಫೌಂಡೇಶಷನ್ನ ಸಾಬಣ್ಣ ಬಸ್ಕಿ, ಆಕಾಶ, ಸಿಆರ್.ಪಿ ಬಸವರಾಜ ದಳವಾಯಿ, ಅಗಸ್ತ್ಯ ಪೌಂಡೇಶನ್ನ ಯಮನೂರಪ್ಪ ಸೇರಿದಂತೆ ತಾಲ್ಲೂಕಿನ 46 ಶಾಲೆಗಳ ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>