ಯಾದಗಿರಿ: ಮಕ್ಕಳ ಹಬ್ಬ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗರಿಮಾ ಪಂವಾರ್ ಹೇಳಿದರು.
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಹಾಗೂ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣಾ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಇತ್ತೀಚಿಗೆ ನಡೆದ ಜಿಲ್ಲಾ ಬಾಲ ಭವನ ಸಭಾಂಗಣ ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಬಣ್ಣಗಳು, ಆಕೃತಿಗಳು, ಮರ ಗಿಡಗಳು ಪರಿಚಯ ಆಟ, ಹಾಡು, ನೃತ್ಯ ಭರತನ್ಯಾಟ, ನೃತ್ಯ, ನಾಟಕ ಕಥೆಗಳ ಮೂಲಕ ಹಬ್ಬದ ವಾತಾವರಣ ಸ್ಫೂರ್ತಿದಾಯಕವಾಗಲಿದೆ. ಮಕ್ಕಳ ಹಬ್ಬ ಕಾರ್ಯಕ್ರಮ ಅಂಗವಾಗಿ ಜಿಲ್ಲೆಯಾದ್ಯಂತ ತಾಲ್ಲೂಕುಗಳಿಂದ ಬಂದು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮತ್ತು ಈ ಒಂದು ಕಾರ್ಯಕ್ರಮ ಮಕ್ಕಳಿಗೆ ಬಣ್ಣಗಳು, ಆಕೃತಿಗಳು, ಮರ ಗಿಡಗಳು ಪರಿಚಯ ಆಟ, ಹಾಡು, ನೃತ್ಯ ಭರತನ್ಯಾಟ ನೃತ್ಯ ನಾಟಕ ಕಥೆಗಳ ಮೂಲಕ ಮಕ್ಕಳಿಗೆ ಹಬ್ಬದ ವಾತಾವರಣ ಮಕ್ಕಳಲ್ಲಿ ಕಾಣುತ್ತಿದೆ ಎಂದರು.
ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರ ಹೊನೋಲೆ ಮಾತನಾಡಿ, ಮಕ್ಕಳಲ್ಲಿ ಪ್ರತಿಯೊಂದು ಮಗುವಿನಲ್ಲಿ ಒಂದು ಒಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವಿದೆ. ಇದರಲ್ಲಿ ಪೋಷಕರ ಶಿಕ್ಷಕರ ಪಾತ್ರ ಬಹುಮುಖ್ಯವಾಗಿರುತ್ತದೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರನಗೌಡ ಮಾತನಾಡಿ, ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಚಿತ್ರಕಲೆ, ಕಥೆ, ಕವನ, ಪ್ರಬಂಧ, ಸಂಗೀತ ವಾದ್ಯಗಳೊಂದಿಗೆ, ಜಾನಪದ ನೃತ್ಯ, ನಾಟಕ ಪ್ರದರ್ಶನದಲ್ಲಿ (ಪ್ರಥಮ, ದ್ವಿತೀಯ, ತೃತೀಯ) ಸ್ಥಾನಗಳಲ್ಲಿ ಆಯ್ಕೆಯಾದ ಮಕ್ಕಳಿಗೆ ನಗದು ಬಹುಮಾನ ನೀಡಲಾಗುತ್ತದೆ. ವಿವಿಧ ತಾಲ್ಲೂಕುಗಳಿಂದ ಶಾಲೆ ಮಕ್ಕಳ ಜಾನಪದ ನೃತ್ಯ ಹಾಗೂ ಡೊಳ್ಳು ಕುಣಿತದೊಂದಿಗೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಯಶ್ವಸಿಗೊಳಿಸಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹಣಮಂತ್ರಾಯ ಕರಡಿ, ಕ್ರೀಡೆ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರೇಮ್ಮೂರ್ತಿ.ಕೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಾಲಸಾಬ್, ಶಿಕ್ಷಣ ಇಲಾಖೆ ಸಿಆರ್ಪಿ ರವಿ, ಜಿಲ್ಲಾ ಸಂಯೋಜಕ ಬಾಲ ಭವನ ಅನಿಲಕುಮಾರ, ಶಿಕ್ಷಕರು,ನಿರ್ಣಾಯಕರು ಶಾಲೆಯ ಮಕ್ಕಳ ಮತ್ತು ಪೋಷಕರಾದ ಯಲ್ಲಪ್ಪ.ಕೆ, ಪ್ರಶಾಂತ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.