<p><strong>ಸುರಪುರ: </strong>‘ಮಕ್ಕಳು ನಾಳಿನ ಭವಿಷ್ಯ. ಮಕ್ಕಳೇ ರಾಷ್ಟ್ರದ ನಿಜವಾದ ಸಂಪತ್ತು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪರಿಶ್ರಮದಿಂದ ಅಭ್ಯಾಸ ಮಾಡಿ ಸಾಧನೆ ಮಾಡುವ ಅಗತ್ಯವಿದೆ’ ಎಂದು ಸಗರನಾಡು ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು.</p>.<p>ರಂಗಂಪೇಟೆಯ ಬಸವೇಶ್ವರ ಕಾಲೇಜಿನಲ್ಲಿ ಮಂಗಳವಾರ ಕಲಬುರಗಿಯ ನೆಹರೂ ಯುವ ಕೇಂದ್ರ, ಕನ್ನೆಳ್ಳಿಯ ಸಗರನಾಡು ಯುವಕ ಸಂಘದ ಸಹಯೋಗದಲ್ಲಿ ನಡೆದ ನೆಹರೂ ಯುವ ಕೇಂದ್ರದ ಸಂಸ್ಥಾಪನಾ ದಿನ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲ ಮಕ್ಕಳಲ್ಲಿ ಒಂದಿಲ್ಲೊಂದು ಸುಪ್ತ ಪ್ರತಿಭೆ ಇರುತ್ತದೆ. ಅದು ಕಲೆ, ಸಾಹಿತ್ಯ, ಓದು, ಕ್ರೀಡೆ ಯಾವುದೇ ಆಗಿರಬಹುದು. ಅದನ್ನು ಗುರುತಿಸಿ ಅವರಲ್ಲಿನ ಪ್ರತಿಭೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಇಂಥ ಮಕ್ಕಳು ದೇಶದ ದೊಡ್ಡ ಆಸ್ತಿಯಾಗಬಲ್ಲರು’ ಎಂದು ಅವರು ತಿಳಿಸಿದರು.</p>.<p>ಪ್ರಾಚಾರ್ಯ ವಿರೇಶ ಹಳಿಮನಿ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಸಲೀಂ ಅಡ್ಡೊಡಗಿ ಅವರು ನಿರೂಪಿಸಿದರು. ಅಂಬಿಕಾ ಪ್ರಾರ್ಥಿಸಿದರು.</p>.<p>ಕೃಷ್ಣ ದೇವತ್ಕಲ್ ಸ್ವಾಗತಿಸಿದರು. ಗುರುಸ್ವಾಮಿ ವಂದಿಸಿದರು.</p>.<p>ಶಾಂತು ನಾಯಕ, ಬಲಭೀಮ ಪಾಟೀಲ, ಭಾರತಿ ಪುಜಾರಿ, ರಮೇಶ ನಾಯಕ ಗುರುಗುಂಟಿ ಇದ್ದರು. ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಾದ ಮಕ್ಕಳಿಗೆ ಪಾರಿತೋಷಕ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ: </strong>‘ಮಕ್ಕಳು ನಾಳಿನ ಭವಿಷ್ಯ. ಮಕ್ಕಳೇ ರಾಷ್ಟ್ರದ ನಿಜವಾದ ಸಂಪತ್ತು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪರಿಶ್ರಮದಿಂದ ಅಭ್ಯಾಸ ಮಾಡಿ ಸಾಧನೆ ಮಾಡುವ ಅಗತ್ಯವಿದೆ’ ಎಂದು ಸಗರನಾಡು ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು.</p>.<p>ರಂಗಂಪೇಟೆಯ ಬಸವೇಶ್ವರ ಕಾಲೇಜಿನಲ್ಲಿ ಮಂಗಳವಾರ ಕಲಬುರಗಿಯ ನೆಹರೂ ಯುವ ಕೇಂದ್ರ, ಕನ್ನೆಳ್ಳಿಯ ಸಗರನಾಡು ಯುವಕ ಸಂಘದ ಸಹಯೋಗದಲ್ಲಿ ನಡೆದ ನೆಹರೂ ಯುವ ಕೇಂದ್ರದ ಸಂಸ್ಥಾಪನಾ ದಿನ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲ ಮಕ್ಕಳಲ್ಲಿ ಒಂದಿಲ್ಲೊಂದು ಸುಪ್ತ ಪ್ರತಿಭೆ ಇರುತ್ತದೆ. ಅದು ಕಲೆ, ಸಾಹಿತ್ಯ, ಓದು, ಕ್ರೀಡೆ ಯಾವುದೇ ಆಗಿರಬಹುದು. ಅದನ್ನು ಗುರುತಿಸಿ ಅವರಲ್ಲಿನ ಪ್ರತಿಭೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಇಂಥ ಮಕ್ಕಳು ದೇಶದ ದೊಡ್ಡ ಆಸ್ತಿಯಾಗಬಲ್ಲರು’ ಎಂದು ಅವರು ತಿಳಿಸಿದರು.</p>.<p>ಪ್ರಾಚಾರ್ಯ ವಿರೇಶ ಹಳಿಮನಿ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಸಲೀಂ ಅಡ್ಡೊಡಗಿ ಅವರು ನಿರೂಪಿಸಿದರು. ಅಂಬಿಕಾ ಪ್ರಾರ್ಥಿಸಿದರು.</p>.<p>ಕೃಷ್ಣ ದೇವತ್ಕಲ್ ಸ್ವಾಗತಿಸಿದರು. ಗುರುಸ್ವಾಮಿ ವಂದಿಸಿದರು.</p>.<p>ಶಾಂತು ನಾಯಕ, ಬಲಭೀಮ ಪಾಟೀಲ, ಭಾರತಿ ಪುಜಾರಿ, ರಮೇಶ ನಾಯಕ ಗುರುಗುಂಟಿ ಇದ್ದರು. ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಾದ ಮಕ್ಕಳಿಗೆ ಪಾರಿತೋಷಕ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>