ದೂರವಾಣಿಯಲ್ಲಿ ಶನಿವಾರ ‘ಪ್ರಜಾವಾಣಿ’ ಜತೆ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆ ಹೈದರಾಬಾದ್ ಕರ್ನಾಟಕದಲ್ಲಿನ ಕಾಂಗ್ರೆಸ್ ನಾಯಕರನ್ನು ರಾಜಕೀಯವಾಗಿ ಮುಗಿಸುತ್ತಿದ್ದಾರೆ. ಐದು ಬಾರಿ ಗೆದ್ದು ಬಂದ ನನ್ನನ್ನು ಮೂಲೆಗುಂಪು ಮಾಡಿ ತಮ್ಮ ಪುತ್ರನನ್ನು ಸಚಿವನನ್ನಾಗಿ ಮಾಡಿದರು. ಅವರಿಂದ ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚೌವ್ಹಾಣ್, ಖಮರುಲ್ ಇಸ್ಲಾಂ, ಚಿತ್ತಾಪುರದ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಅವರಿಗೆ ಬಹಳ ಅನ್ಯಾಯ ಆಗಿದೆ. ಈಗ ನಾವೆಲ್ಲ ಒಂದಾಗಿದ್ದೇವೆ. ಖರ್ಗೆ ಅವರನ್ನು ಸೋಲಿಸುವುದೇ ನಮ್ಮ ಧ್ಯೇಯವಾಗಿದೆ’ ಎಂದು ಪುನರುಚ್ಚರಿಸಿದರು.