ಸಾಹಿತ್ಯ ಪರಿಷತ್ತು ಮತ್ತು ವೀರಶೈವ ಸಮಾಜದವರು ಪೌರಕಾರ್ಮಿಕರ ಸೇವೆ ಗಮನಿಸಿ ಸಹಕಾರ ನೀಡುತ್ತಿರುವುದು ಪ್ರಶಂಸನೀಯ. ಇದರಂತೆ ಎಲ್ಲರೂ ಸ್ವ ಇಚ್ಛೆಯಿಂದ ಮುಂದೆ ಬಂದು ಕೊರೊನಾ ತಡೆಗಟ್ಟಲು ಹೋರಾಡುತ್ತಿರುವ ಸರ್ವರಿಗೂ ಸಹಕರಿಸುವಂತೆ ಕರೆ ನೀಡಿದರು.
ಇದೇ ವೇಳೆ ಸುಮಾರು 80 ಜನ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಪೌರಾಯುಕ್ತ ರಮೇಶ ಸುಣಗಾರ, ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ನಗರ ವೀರಶೈವ ಸಮಾಜ ಅಧ್ಯಕ್ಷ ಅಯ್ಯಣ್ಣ ಹುಂಡೇಕಾರ್, ಡಾ.ಸುಭಾಶ್ಚಂದ್ರ ಕೌಲಗಿ, ಸುಭಾಷ ಆಯಾರಕರ್, ಬಸವರಾಜ ಮೋಟ್ನಳ್ಳಿ, ಡಾ.ಭೀಮರಾಯ ಲಿಂಗೇರಿ, ಡಾ. ಎಸ್.ಎಸ್. ನಾಯಕ, ನಗರಸಭೆ ಸದಸ್ಯರಾದ ಹಣಮಂತ ಇಟಗಿ, ವಿಲಾಸ ಪಾಟೀಲ, ಸ್ವಾಮಿದೇವ ದಾಸನಕೇರಿ, ಮಾರುತಿ ಕಲಾಲ್, ಖಂಡಪ್ಪ ದಾಸನ್, ಭೀಮಣ್ಣಗೌಡ ಕ್ಯಾತನಾಳ, ಶರಣಗೌಡ ಬಾಡಿಯಾಳ, ಬಸಣ್ಣಗೌಡ ಕನ್ಯೆಕೌಳೂರು, ನಾಗೇಂದ್ರ ಜಾಜಿ, ದೇವಿಂದ್ರ ಸೇಡಂಕರ್, ಬಸವರಾಜ ದೇವದುರ್ಗ, ಮಲ್ಲಪ್ಪ ಹಳ್ಳಿಕಟ್ಟಿ ಇದ್ದರು.