<p><strong>ವಡಗೇರಾ: ತಾ</strong>ಲ್ಲೂಕು ಕೇಂದ್ರವಾಗಿ 8 ವರ್ಷ ಕಳೆದ ನಂತರ ವಡಗೇರಾ ಪಟ್ಟಣದಲ್ಲಿ ಪ್ರಜಾಸೌಧ ( ಮಿನಿ ವಿಧಾನಸೌಧ) ನಿರ್ಮಾಣಕ್ಕೆ ಕಾಲಕೂಡಿ ಬಂದಿದೆ.</p>.<p>2018ರಲ್ಲಿ ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ಜಗದೀಶ್ ಶೆಟ್ಟರ್ ಅವರು ರಾಜ್ಯದಲ್ಲಿ 44 ನೂತನ ತಾಲ್ಲೂಕು ಕೇಂದ್ರಗಳನ್ನು ಘೋಷಣೆ ಮಾಡಿದ್ದರು. ಅದರಲ್ಲಿ ವಡಗೇರಾ ಸಹ ಒಂದು.</p>.<p><strong>ಜಮೀನು</strong> <strong>ಮಂಜೂರು</strong><strong>: </strong>ಈಗಾಗಲೇ ಕಂದಾಯ ಇಲಾಖೆಯವರು ತುಮಕೂರು ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿ ಇರುವ ಮೊರಾರ್ಜಿ ವಸತಿ ಶಾಲೆಯ ಪಕ್ಕದಲ್ಲಿ ಸ.ನಂ.581 ರಲ್ಲಿ 9 ಎಕರೆ ಜಮೀನನ್ನು 2021 ರಲ್ಲಿ ಕಂದಾಯ ಇಲಾಖೆಯಿಂದ ಮಂಜೂರು ಆಗಿದೆ. ಪಹಣಿಯಲ್ಲಿಯು ಸಹ ಮಿನಿ ವಿಧಾನಸೌಧ ( ತಾಲ್ಲೂಕು ಸಂಕೀರ್ಣ) ನಿರ್ಮಾಣಕ್ಕೆ ಮಂಜೂರು ಎಂದು ನಮೂದಿಸಲಾಗಿದೆ.</p>.<p>ಈ ಹಿಂದೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಮಾಜಿ ಶಾಸಕರಾದ ವೆಂಕಟರಡ್ಡಿ ಮುದ್ನಾಳ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮೇಲೆ ಒತ್ತಡ ಹಾಕಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ₹10 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದರು. ಆದರೆ ಈ ಹಣ ಸಾಕಾಗುವುದಿಲ್ಲ ಎಂದು ವಡಗೇರಾದಲ್ಲಿ ವಿಭಿನ್ನ ಹಾಗೂ ವಿಶಿಷ್ಟವಾದ ಮಿನಿವಿಧಾನ ಸೌಧ ನಿರ್ಮಿಸಲಾಗುವುದು. ಅದಕ್ಕಾಗಿ ಇನ್ನೂ ₹10 ಕೋಟಿ ಮಂಜೂರು ಮಾಡಿ‘ ಎಂದು ಆಗಿನ ಶಾಸಕ ಮುದ್ನಾಳ ಮುಖ್ಯಮಂತ್ರಿಯವರ ಹತ್ತಿರ ಮನವಿ ಮಾಡಿದ್ದರು.</p>.<p>ಇದಕ್ಕೂ ಸಹ ಬೊಮ್ಮಾಯಿ ಸಮ್ಮತಿಸಿದ್ದರು. ಹಾಗೆಯೆ ಭೂಮಿ ಪೂಜೆಯನ್ನು ಮಾಡಲು ಬರುತ್ತೇನೆ ಎಂದು ಭರವಸೆಯನ್ನು ಸಹ ಕೊಟ್ಟಿದ್ದರು. ಆದರೆ ವಿವಿಧ ಕಾರಣಗಳಿಂದಾಗಿ ಮಿನಿ ವಿಧಾನಸೌಧ ನಿರ್ಮಾಣದ ಕಾಮಗಾರಿ ನನೆಗುದಿಗೆ ಬಿದ್ದಿತು. ಬಂದ ಅನುದಾನವು ಸರ್ಕಾರಕ್ಕೆ ಮರಳಿ ಹೋಯಿತು.</p>.<p>ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಶಾಸಕ ತುನ್ನೂರ ಅವರು ಪ್ರಜಾಸೌಧದ ನಿರ್ಮಾಣಕ್ಕೆ ಶೀಘ್ರದಲ್ಲಿಯೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಆ ಭರವಸೆ ಈಡೇರುವ ಕಾಲ ಈಗ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ: ತಾ</strong>ಲ್ಲೂಕು ಕೇಂದ್ರವಾಗಿ 8 ವರ್ಷ ಕಳೆದ ನಂತರ ವಡಗೇರಾ ಪಟ್ಟಣದಲ್ಲಿ ಪ್ರಜಾಸೌಧ ( ಮಿನಿ ವಿಧಾನಸೌಧ) ನಿರ್ಮಾಣಕ್ಕೆ ಕಾಲಕೂಡಿ ಬಂದಿದೆ.</p>.<p>2018ರಲ್ಲಿ ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ಜಗದೀಶ್ ಶೆಟ್ಟರ್ ಅವರು ರಾಜ್ಯದಲ್ಲಿ 44 ನೂತನ ತಾಲ್ಲೂಕು ಕೇಂದ್ರಗಳನ್ನು ಘೋಷಣೆ ಮಾಡಿದ್ದರು. ಅದರಲ್ಲಿ ವಡಗೇರಾ ಸಹ ಒಂದು.</p>.<p><strong>ಜಮೀನು</strong> <strong>ಮಂಜೂರು</strong><strong>: </strong>ಈಗಾಗಲೇ ಕಂದಾಯ ಇಲಾಖೆಯವರು ತುಮಕೂರು ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿ ಇರುವ ಮೊರಾರ್ಜಿ ವಸತಿ ಶಾಲೆಯ ಪಕ್ಕದಲ್ಲಿ ಸ.ನಂ.581 ರಲ್ಲಿ 9 ಎಕರೆ ಜಮೀನನ್ನು 2021 ರಲ್ಲಿ ಕಂದಾಯ ಇಲಾಖೆಯಿಂದ ಮಂಜೂರು ಆಗಿದೆ. ಪಹಣಿಯಲ್ಲಿಯು ಸಹ ಮಿನಿ ವಿಧಾನಸೌಧ ( ತಾಲ್ಲೂಕು ಸಂಕೀರ್ಣ) ನಿರ್ಮಾಣಕ್ಕೆ ಮಂಜೂರು ಎಂದು ನಮೂದಿಸಲಾಗಿದೆ.</p>.<p>ಈ ಹಿಂದೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಮಾಜಿ ಶಾಸಕರಾದ ವೆಂಕಟರಡ್ಡಿ ಮುದ್ನಾಳ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮೇಲೆ ಒತ್ತಡ ಹಾಕಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ₹10 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದರು. ಆದರೆ ಈ ಹಣ ಸಾಕಾಗುವುದಿಲ್ಲ ಎಂದು ವಡಗೇರಾದಲ್ಲಿ ವಿಭಿನ್ನ ಹಾಗೂ ವಿಶಿಷ್ಟವಾದ ಮಿನಿವಿಧಾನ ಸೌಧ ನಿರ್ಮಿಸಲಾಗುವುದು. ಅದಕ್ಕಾಗಿ ಇನ್ನೂ ₹10 ಕೋಟಿ ಮಂಜೂರು ಮಾಡಿ‘ ಎಂದು ಆಗಿನ ಶಾಸಕ ಮುದ್ನಾಳ ಮುಖ್ಯಮಂತ್ರಿಯವರ ಹತ್ತಿರ ಮನವಿ ಮಾಡಿದ್ದರು.</p>.<p>ಇದಕ್ಕೂ ಸಹ ಬೊಮ್ಮಾಯಿ ಸಮ್ಮತಿಸಿದ್ದರು. ಹಾಗೆಯೆ ಭೂಮಿ ಪೂಜೆಯನ್ನು ಮಾಡಲು ಬರುತ್ತೇನೆ ಎಂದು ಭರವಸೆಯನ್ನು ಸಹ ಕೊಟ್ಟಿದ್ದರು. ಆದರೆ ವಿವಿಧ ಕಾರಣಗಳಿಂದಾಗಿ ಮಿನಿ ವಿಧಾನಸೌಧ ನಿರ್ಮಾಣದ ಕಾಮಗಾರಿ ನನೆಗುದಿಗೆ ಬಿದ್ದಿತು. ಬಂದ ಅನುದಾನವು ಸರ್ಕಾರಕ್ಕೆ ಮರಳಿ ಹೋಯಿತು.</p>.<p>ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಶಾಸಕ ತುನ್ನೂರ ಅವರು ಪ್ರಜಾಸೌಧದ ನಿರ್ಮಾಣಕ್ಕೆ ಶೀಘ್ರದಲ್ಲಿಯೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಆ ಭರವಸೆ ಈಡೇರುವ ಕಾಲ ಈಗ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>