ಜಿಲ್ಲಾ ಪಂಚಾಯಿತಿಯ ತಾಂತ್ರಿಕ ಸಿಬ್ಬಂದಿ ಪರಿಶೀಲಿಸಿ, ‘ಕಟ್ಟಡ ಸದೃಢವಾಗಿದೆ. ಸಧ್ಯಕ್ಕೆ ದುರಸ್ತಿಯ ಅವಶ್ಯಕತೆಯಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಕಿಶನ ರಾಠೋಡ್ ಅವರು ಕಾನೂನು ಬಾಹಿರವಾಗಿ ಕಟ್ಟಡ ಧ್ವಂಸಗೊಳಿಸಿದ್ದಾರೆ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸಂಜೀವ ಕುಮಾರ ಅಲೆಗಾರ ಆರೋಪಿಸಿದ್ದಾರೆ.