<p><strong>ಯಾದಗಿರಿ</strong>: ‘ರಾಸಾಯನಿಕ ಬಣ್ಣಗಳಿಂದ ಮುಕ್ತವಾದ, ಮಣ್ಣಿನಲ್ಲಿ ಸುಲಭವಾಗಿ ಕರಗಬಲ್ಲ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರವನ್ನು ಶುದ್ಧವಾಗಿ ಇರಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು.</p>.<p>ನಗರದ ಹಿಂದಿ ಪ್ರಚಾರ ಸಭಾ ಆವರಣದಲ್ಲಿ ಸೋಮವಾರ ವಿಜಯ ವಿಠಲ ಸೇವಾ ಸಂಸ್ಥೆ ಮತ್ತು ಶಶಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಣ್ಣಿನ ಗಣಪ ಮೂರ್ತಿಗಳನ್ನು ಉಚಿತವಾಗಿ ವಿತರಿಸಿ ಅವರು ಮಾತನಾಡಿದರು.</p>.<p>‘ಹಬ್ಬಗಳು ಮನುಕುಲದ ಒಳಿತಿಗಾಗಿ ಆಚರಿಸಲಾಗುವುದು. ವಾತಾವರಣಕ್ಕೆ ಹಾನಿ ಆಗದಂತೆ ಆಚರಿಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಧಾರ್ಮಿಕ ಆಚರಣೆಗಳು ಪರಿಸರ ರಕ್ಷಣೆಯ ಕಾರ್ಯಕ್ಕೆ ಮುನ್ನುಡಿ ಆಗಬೇಕು. ಬದಲಾವಣೆಯ ಪರ್ವ ನಮ್ಮ ಮನೆಗಳಿಂದಲೇ ಆರಂಭವಾಗಲಿ’ ಎಂದರು.</p>.<p>ಸಹಾಯಕ ಆಯುಕ್ತ ಶ್ರೀಧರ ಗೋಟೂರ ಮಾತನಾಡಿ, ‘ಪಿಒಪಿ, ರಾಸಾಯನಿಕ ಬಣ್ಣಗಳಿರುವ ಗಣೇಶ ಮೂರ್ತಿಗಳು ಜಲಮೂಲಗಳಿಗೆ ಸೇರಿದರೆ ಜೀವಸಂಕುಲಕ್ಕೆ ಅಪಾಯ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚೆತ್ತುಕೊಂಡು ಪರ್ಯಾಯ ಮಾರ್ಗ ಕಂಡುಕೊಳ್ಳಬೇಕು’ ಎಂದು ಹೇಳಿದರು.</p>.<p>ಸಿದ್ಧಸಂಪದ ಚಾರಿಟಬಲ್ ಟ್ರಸ್ಟ್ ನಿರ್ದೇಶಕ ಸಿದ್ಧರಾಜರೆಡ್ಡಿ ಮಾತನಾಡಿ, ‘ನಮ್ಮ ಧಾರ್ಮಿಕ ಆಚರಣೆಗಳು ಮುಂದಿನ ಪೀಳಿಗೆಗೂ ಒಳಿತು ಮಾಡುವಂತಾದರೆ ಅರ್ಥಪೂರ್ಣ ಆಗುತ್ತವೆ. ಆಡಂಬರಕ್ಕೆ ಮಾರುಹೋಗಿ ಶುದ್ಧ ಭಕ್ತಿಯನ್ನು ಮರೆಯುತ್ತಿದ್ದೇವೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಲವೀಶ ಒರಾಡಿಯಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಶಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಹಣಮಂತಪ್ಪ ಶಿರಗೋಳ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.</p>.<p>ಪತಂಜಲಿ ಯೋಗಪೀಠದ ಅನಿಲ್ ಗುರೂಜಿ, ವಿಜಯ ವಿಠಲ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನಾಗೇಶ್ವರರಾವ ಕುಲಕರ್ಣಿ, ಮೀನುಗಾರಿಕೆ ಇಲಾಖೆ ನಿರ್ದೇಶಕ ಶರಣಬಸವ, ಶ್ರೀಹರಿ ಕಾಲೇಜಿನ ಪ್ರಾಂಶುಪಾಲ ಸುಭಾಶ್ಚಂದ್ರ ಮಾನೇಗಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ‘ರಾಸಾಯನಿಕ ಬಣ್ಣಗಳಿಂದ ಮುಕ್ತವಾದ, ಮಣ್ಣಿನಲ್ಲಿ ಸುಲಭವಾಗಿ ಕರಗಬಲ್ಲ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರವನ್ನು ಶುದ್ಧವಾಗಿ ಇರಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು.</p>.<p>ನಗರದ ಹಿಂದಿ ಪ್ರಚಾರ ಸಭಾ ಆವರಣದಲ್ಲಿ ಸೋಮವಾರ ವಿಜಯ ವಿಠಲ ಸೇವಾ ಸಂಸ್ಥೆ ಮತ್ತು ಶಶಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಣ್ಣಿನ ಗಣಪ ಮೂರ್ತಿಗಳನ್ನು ಉಚಿತವಾಗಿ ವಿತರಿಸಿ ಅವರು ಮಾತನಾಡಿದರು.</p>.<p>‘ಹಬ್ಬಗಳು ಮನುಕುಲದ ಒಳಿತಿಗಾಗಿ ಆಚರಿಸಲಾಗುವುದು. ವಾತಾವರಣಕ್ಕೆ ಹಾನಿ ಆಗದಂತೆ ಆಚರಿಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಧಾರ್ಮಿಕ ಆಚರಣೆಗಳು ಪರಿಸರ ರಕ್ಷಣೆಯ ಕಾರ್ಯಕ್ಕೆ ಮುನ್ನುಡಿ ಆಗಬೇಕು. ಬದಲಾವಣೆಯ ಪರ್ವ ನಮ್ಮ ಮನೆಗಳಿಂದಲೇ ಆರಂಭವಾಗಲಿ’ ಎಂದರು.</p>.<p>ಸಹಾಯಕ ಆಯುಕ್ತ ಶ್ರೀಧರ ಗೋಟೂರ ಮಾತನಾಡಿ, ‘ಪಿಒಪಿ, ರಾಸಾಯನಿಕ ಬಣ್ಣಗಳಿರುವ ಗಣೇಶ ಮೂರ್ತಿಗಳು ಜಲಮೂಲಗಳಿಗೆ ಸೇರಿದರೆ ಜೀವಸಂಕುಲಕ್ಕೆ ಅಪಾಯ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚೆತ್ತುಕೊಂಡು ಪರ್ಯಾಯ ಮಾರ್ಗ ಕಂಡುಕೊಳ್ಳಬೇಕು’ ಎಂದು ಹೇಳಿದರು.</p>.<p>ಸಿದ್ಧಸಂಪದ ಚಾರಿಟಬಲ್ ಟ್ರಸ್ಟ್ ನಿರ್ದೇಶಕ ಸಿದ್ಧರಾಜರೆಡ್ಡಿ ಮಾತನಾಡಿ, ‘ನಮ್ಮ ಧಾರ್ಮಿಕ ಆಚರಣೆಗಳು ಮುಂದಿನ ಪೀಳಿಗೆಗೂ ಒಳಿತು ಮಾಡುವಂತಾದರೆ ಅರ್ಥಪೂರ್ಣ ಆಗುತ್ತವೆ. ಆಡಂಬರಕ್ಕೆ ಮಾರುಹೋಗಿ ಶುದ್ಧ ಭಕ್ತಿಯನ್ನು ಮರೆಯುತ್ತಿದ್ದೇವೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಲವೀಶ ಒರಾಡಿಯಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಶಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಹಣಮಂತಪ್ಪ ಶಿರಗೋಳ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.</p>.<p>ಪತಂಜಲಿ ಯೋಗಪೀಠದ ಅನಿಲ್ ಗುರೂಜಿ, ವಿಜಯ ವಿಠಲ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನಾಗೇಶ್ವರರಾವ ಕುಲಕರ್ಣಿ, ಮೀನುಗಾರಿಕೆ ಇಲಾಖೆ ನಿರ್ದೇಶಕ ಶರಣಬಸವ, ಶ್ರೀಹರಿ ಕಾಲೇಜಿನ ಪ್ರಾಂಶುಪಾಲ ಸುಭಾಶ್ಚಂದ್ರ ಮಾನೇಗಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>