ಒಳ ಚರಂಡಿಗಳಲ್ಲಿ ಕಸ- ಕಡ್ಡಿ, ಮಣ್ಣು ಇತ್ಯಾದಿ ನಿರುಪಯುಕ್ತ ವಸ್ತುಗಳೆಲ್ಲವು ತುಂಬಿಕೊಂಡು ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ರಸ್ತೆಗಳ ಮೇಲೆ ಬಂದು ನಿಲ್ಲುತ್ತಿದೆ. ಇದರಿಂದಾಗಿ ರಸ್ತೆಗಳು ಕೆಸರು ಗದ್ದೆಗಳಾಗಿವೆ.ನಿಯಮಿತವಾಗಿ ಚರಂಡಿಯ ಹೂಳೆತ್ತದೆ ಇರುವುದು ಹಾಗೂ ನೀರು ಹರಿಯಲು ಸೂಕ್ತ ವ್ಯವಸ್ಥೆ ಕಲ್ಪಿಸದ ಕಾರಣ ತಗ್ಗು ಪ್ರದೇಶಗಳಲ್ಲಿ ಮಳೆ ನೀರಿನೊಂದಿಗೆ ಚರಂಡಿ ನೀರು ಸಂಗ್ರಹಗೊಳ್ಳುತ್ತಿರುವುದರಿಂದ ಗ್ರಾಮದಲ್ಲಿ ನೈರ್ಮಲ್ಯ ಮರೀಚಿಕೆಯಾಗಿ ಉಳಿದಿದೆ. ಇದರಿಂದ ಸೊಳ್ಳೆಗಳ ಕಾಟವೂ ಹೆಚ್ಚಾಗಿದ್ದು, ಜನರು ಪರದಾಡುವಂತಾಗಿದೆ.