ಈಗಾಗಲೇ ಪಿಎಸ್ ಐ ಹಗರಣದಲ್ಲಿ ಸಿಐಡಿಯವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿಗೆ ಧಮ್ ಇದ್ದರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಲಿನ ಆರೋಪಗಳನ್ನು ತನಿಖೆ ಮಾಡಿಸಲಿ ಎನ್ನುವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಣ್ಣು ತೆರೆದು ನೋಡಲಿ ಎಂದು ಅವರಿಗೆ ಫೈಲ್ ಕೊಡುತ್ತೇವೆ. ಸಿದ್ದರಾಮಯ್ಯ ಸರ್ಕಾರದ ಹಗರಣಗಳು ಅವರಿಗೂ ಗೊತ್ತಾಗಲಿ ಎಂದರು.
ಪೇ ಸಿಎಂ ಸೇ ಸಿಎಂ ಅಭಿಯಾನ ವಿಚಾರವಾಗಿ ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸ್ ನವರಿಗೆ ಮಾಡಲು ಉದ್ಯೋಗ ಇಲ್ಲ. ಅವರು ಮಾತನಾಡುತ್ತಾರೆ ಮಾತನಾಡಲಿ. ನಮಗೆ ಜವಾಬ್ದಾರಿ ಇದೆ, ಜನಪರ ಕಾಳಜಿ ಇದೆ. ನಾವು ಮಾತನಾಡುವುದಕ್ಕಿಂತ ಕೆಲಸ ಮಾಡುತ್ತಿದ್ದೇವೆ ಎಂದರು.