<p><strong>ಯಾದಗಿರಿ:</strong> ರಾಜ್ಯದ 30ನೇ ಜಿಲ್ಲೆಯಾಗಿ 2010 ಏಪ್ರಿಲ್ 10 ರಂದು ಅಸ್ತಿತ್ವಕ್ಕೆ ಬಂದಯಾದಗಿರಿ ಜಿಲ್ಲೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ (ಜ.6) ಆಗಮಿಸಲಿದ್ದಾರೆ. ಅವರೇ ಘೋಷಿಸಿದ ಜಿಲ್ಲೆಗೆ ಬರುತ್ತಿರುವುದರಿಂದ ಅಭಿವೃದ್ಧಿಯ ಕುರಿತ ನಿರೀಕ್ಷೆಗಳು ಗದಿಗೆದರಿವೆ.</p>.<p>ಆಗ ಯಾದಗಿರಿ, ಶಹಾಪುರ ಮತ್ತು ಸುರಪುರ ಮೂರು ತಾಲ್ಲೂಕುಗಳನ್ನು ಸೇರಿಸಿ ಹೊಸ ಜಿಲ್ಲೆ ರಚನೆ ಮಾಡಲಾಗಿತ್ತು. ಈಗ 6 ತಾಲ್ಲೂಕುಗಳಾಗಿದ್ದು, ಗುರುಮಠಕಲ್ ಪುರಸಭೆ, ಹುಣಸಗಿ ಪಟ್ಟಣ ಪಂಚಾಯಿತಿ, ವಡಗೇರಾ ಗ್ರಾಮ ಪಂಚಾಯಿತಿ ಸ್ಥಾನವನ್ನು ಹೊಂದಿವೆ.</p>.<p>ಜಿಲ್ಲೆಯಲ್ಲಿ ಎರಡು ನದಿಗಳು ಹರಿಯುತ್ತಿದ್ದರೂ ಹಿಂದುಳಿದ ಪಟ್ಟ ಅಳಿಯುತ್ತಿಲ್ಲ. ಒಂದುಕಡೆ ಕೃಷ್ಣಾ, ಮತ್ತೊಂದು ಕಡೆ ಭೀಮಾ ನದಿ ಪಾತ್ರವನ್ನು ಹೊಂದಿದೆ. ಗುರುಮಠಕಲ್ ತಾಲ್ಲೂಕು ವ್ಯಾಪ್ತಿಗೆ ಮಾತ್ರ ನದಿಯಿಲ್ಲ. ಉಳಿದ ಐದು ತಾಲ್ಲೂಕುಗಳಲ್ಲಿ ನದಿಗಳಿವೆ. ನೀರಾವರಿ ಸೌಲಭ್ಯವಿದ್ದರೂ ಗುಳೆ ಹೋಗುವುದು ತಪ್ಪಿಲ್ಲ.</p>.<p>ಲಾಕ್ಡೌನ್ ವೇಳೆ ಅತಿ ಹೆಚ್ಚು ವಲಸೆ ಕಾರ್ಮಿಕರು ಜಿಲ್ಲೆಗೆ ಆಗಮಿಸಿದ್ದರು. ಇದರಿಂದ ತಿಳಿಯುತ್ತದೆ ಜಿಲ್ಲೆಯಲ್ಲಿ ಔದ್ಯೋಗಿಕ ವಲಯ ಎಷ್ಟು ಹಿಂದುಳಿದಿದೆ ಎಂಬುದು.</p>.<p class="Subhead"><strong>ಕಾರ್ಯಾರಂಭ ಮಾಡದ ಕಚೇರಿಗಳು</strong></p>.<p>ಜಿಲ್ಲೆಯಲ್ಲಿ ಗುರುಮಠಕಲ್, ವಡಗೇರಾ, ಹುಣಸಗಿ ತಾಲ್ಲೂಕು ಕೇಂದ್ರಗಳಾಗಿ ಘೋಷಿಸಿ ಮೂರು ವರ್ಷ ಕಳೆದರೂ ಪೂರ್ಣ ಪ್ರಮಾಣದ ಕಚೇರಿಗಳುಕಾರ್ಯಾರಂಭ ಮಾಡಿಲ್ಲ. ಇದರಿಂದ ಹಳೆ ತಾಲ್ಲೂಕು ಕೇಂದ್ರಗಳಿಗೆ ಸಾರ್ವಜನಿಕರ ಅಲೆದಾಟ ಇನ್ನೂ ತಪ್ಪಿಲ್ಲ. ಕಚೇರಿಗಳೇ ಇಲ್ಲದಿದ್ದರಿಂದ ಅಭಿವೃದ್ಧಿ ಇಲ್ಲಿ ಗೌಣವಾಗಿದೆ ಎನ್ನುವುದು ಈ ತಾಲ್ಲೂಕುಗಳ ಜನರ ಅಭಿಪ್ರಾಯವಾಗಿದೆ.</p>.<p class="Subhead"><strong>ಸ್ಥಾಪನೆಯಾಗದ ಕೈಗಾರಿಕೆಗಳು</strong></p>.<p>ಜಿಲ್ಲೆಯಲ್ಲಿ ಕೈಗಾರಿಕಾ ವಲಯ ಸ್ಥಾಪಿಸಲು ಹಿಂದಿನ ಸರ್ಕಾರಗಳು ಭೂಮಿ ವಶಪಡಿಸಿಕೊಂಡಿರುವುದೇ ದೊಡ್ಡ ಸಾಧನೆಯಾಗಿದೆ. ಇದರಿಂದ ಸ್ಥಳೀಯರಿಗೆ ಯಾವುದೇ ಉಪಯೋಗವಿಲ್ಲದಂತಾಗಿದೆ ಎನ್ನುವುದು ಜಿಲ್ಲೆಯ ಜನರ ಆರೋಪವಾಗಿದೆ.</p>.<p>ತಾಲ್ಲೂಕಿನ ಕಡೇಚೂರು–ಬಾಡಿಯಾಳ ಸೀಮೆಯಲ್ಲಿ ಕೈಗಾರಿಕಾ ವಲಯ ಸ್ಥಾಪನೆಗೆ 3,300 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿದೆ. ಆದರೆ, ಸೂಕ್ತ ಕೈಗಾರಿಕೆಗಳು ಬರದೆ ಇದು ಈಗ ರಾಸಾಯನಿಕ ಔಷಧಿ ಕಂಪನಿಗಳಿಗೆ ಜಾಗ ಮಾಡಿಕೊಟ್ಟಂತೆ ಆಗಿದೆ. ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರವೂ ಬಂದಿಲ್ಲ.</p>.<p class="Subhead"><strong>ಸಿಗದ ಪರಿಹಾರ</strong></p>.<p>ಜಿಲ್ಲೆಯಲ್ಲಿ ಈ ಬಾರಿ ಎರಡು ನದಿ ಮತ್ತು ಅತ್ಯಧಿಕ ಮಳೆಯಿಂದ ಸಾಕಷ್ಟು ಬೆಳೆ ನಷ್ಟವಾಗಿದೆ. ಆದರೆ, ಸಮರ್ಪಕ ಪರಿಹಾರ ವಿತರಣೆಯಲ್ಲಿ ರೈತರಿಗೆ ಪರಿಹಾರ ಸಿಕ್ಕಿಲ್ಲ ಎನ್ನುವುದು ರೈತರ ಆರೋಪವಾಗಿದೆ.</p>.<p>‘ಜಿಲ್ಲೆಯಲ್ಲಿ ಹತ್ತಿ ಮತ್ತು ಭತ್ತದ ಬೆಳೆಗಳು ಸಾಕಷ್ಟು ಹಾನಿಯಾಗಿವೆ. ಎಕರೆಗೆ ಹತ್ತರಿಂದ ಹದಿನೈದು ಕ್ವಿಂಟಲ್ ಇಳುವರಿ ಬರುತ್ತಿತ್ತು. ಆದರೆ, ಈ ಬಾರಿ 1 ರಿಂದ 2 ಕ್ವಿಂಟಲ್ ಮಾತ್ರ ಬಂದಿವೆ. ಇದರಿಂದ ಮುಖ್ಯಮಂತ್ರಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು’ ಎನ್ನುತ್ತಾರೆ ಅರುಣಕುಮಾರ ಗುಂಜಪ್ಪನೊರ.</p>.<p>ಜಿಲ್ಲೆಯು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯ, ಆರೋಗ್ಯ ಕ್ಷೇತ್ರದಲ್ಲಿ ಹಿಂದುಳಿದಿದೆ. ಇದನ್ನು ಯಡಿಯೂರಪ್ಪ ಅಳಿಸಿ ಹಾಕಲಿ ಎನ್ನುವುದು ಜಿಲ್ಲೆಯ ಜನರ ಆಶಯವಾಗಿದೆ.</p>.<p>***</p>.<p><strong>ಬಿಎಸ್ವೈ ಘೋಷಿಸಿದ್ದ ಜಿಲ್ಲೆ</strong></p>.<p>2009ಕ್ಕೂ ಮುಂಚೆ ಯಾದಗಿರಿ ಕಲಬುರ್ಗಿ ಜಿಲ್ಲೆಯ ಒಂದು ತಾಲ್ಲೂಕು ಕೇಂದ್ರವಾಗಿತ್ತು. 2008ರಲ್ಲಿ ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ಆಗಿತ್ತು. ಆಗ ಕಲಬುರ್ಗಿ ಜಿಲ್ಲೆಯನ್ನು ವಿಭಜಿಸಿ ಯಾದಗಿರಿ ಪಟ್ಟಣವನ್ನು ಕೇಂದ್ರವಾಗಿಸಿಕೊಂಡು ಹೊಸ ಜಿಲ್ಲೆ ರಚಿಸಲು ಅಂತಿಮ ನಿರ್ಣಯ ಕೈಗೊಳ್ಳಲಾಗಿತ್ತು. ಈ ನಿರ್ಣಯವನ್ನು ಆಗಿನ ಮುಖ್ಯಮಂತ್ರಿ ಆಗಿದ್ದ ಬಿ.ಎಸ್.ಯಡಿಯೂರಪ್ಪ ಕೈಗೊಂಡಿದ್ದರು. ಈಗ ಅದೇ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ.</p>.<p>2009ರ ಡಿಸೆಂಬರ್ 23ರಂದು ವಿಧಾನಸಭೆಯಲ್ಲಿ ಅಧಿಕೃತ ಜಿಲ್ಲೆಯಾಗಿ ಘೋಷಿಸಲಾಯಿತು. ನಂತರ 2009ರ ಡಿಸೆಂಬರ್ 31ರಂದು ಅಂತಿಮ ಅಧಿಸೂಚನೆ ನಂತರ ಯಾದಗಿರಿ ಜಿಲ್ಲೆ ಅಸ್ತಿತ್ವಕ್ಕೆ ಬಂದಿದೆ.</p>.<p>***</p>.<p>ಸಿಎಂ ಶಂಕುಸ್ಥಾಪನೆ, ಚಾಲನೆ ನೀಡಲಿರುವ ಕಾಮಗಾರಿ ವಿವರ</p>.<p>ಯಾದಗಿರಿ ವೈದ್ಯಕೀಯ ಶಿಕ್ಷಣ ಸಂಸ್ಥೆ (₹325 ಕೋಟಿ)</p>.<p>300 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆ (₹56 ಕೋಟಿ)</p>.<p>ಭೀಮಾ ನದಿ ಹೊಸ ಜಾಕ್ವೆಲ್ ನಿರ್ಮಾಣ (₹19.90 ಕೋಟಿ)</p>.<p>ಕೊಳ್ಳೂರು (ಎಂ)ಗ್ರಾಮದಲ್ಲಿ 110/11 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆ (₹6 ಕೋಟಿ)</p>.<p>ವಡಗೇರಾ–ತುಮಕೂರ–ಸಂಗಮ ರಸ್ತೆ ಅಭಿವೃದ್ಧಿ (₹4.80 ಕೋಟಿ)</p>.<p>ಒಟ್ಟಾರೆ ಅಂದಾಜು ಮೊತ್ತ (₹536.91 ಕೋಟಿ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ರಾಜ್ಯದ 30ನೇ ಜಿಲ್ಲೆಯಾಗಿ 2010 ಏಪ್ರಿಲ್ 10 ರಂದು ಅಸ್ತಿತ್ವಕ್ಕೆ ಬಂದಯಾದಗಿರಿ ಜಿಲ್ಲೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ (ಜ.6) ಆಗಮಿಸಲಿದ್ದಾರೆ. ಅವರೇ ಘೋಷಿಸಿದ ಜಿಲ್ಲೆಗೆ ಬರುತ್ತಿರುವುದರಿಂದ ಅಭಿವೃದ್ಧಿಯ ಕುರಿತ ನಿರೀಕ್ಷೆಗಳು ಗದಿಗೆದರಿವೆ.</p>.<p>ಆಗ ಯಾದಗಿರಿ, ಶಹಾಪುರ ಮತ್ತು ಸುರಪುರ ಮೂರು ತಾಲ್ಲೂಕುಗಳನ್ನು ಸೇರಿಸಿ ಹೊಸ ಜಿಲ್ಲೆ ರಚನೆ ಮಾಡಲಾಗಿತ್ತು. ಈಗ 6 ತಾಲ್ಲೂಕುಗಳಾಗಿದ್ದು, ಗುರುಮಠಕಲ್ ಪುರಸಭೆ, ಹುಣಸಗಿ ಪಟ್ಟಣ ಪಂಚಾಯಿತಿ, ವಡಗೇರಾ ಗ್ರಾಮ ಪಂಚಾಯಿತಿ ಸ್ಥಾನವನ್ನು ಹೊಂದಿವೆ.</p>.<p>ಜಿಲ್ಲೆಯಲ್ಲಿ ಎರಡು ನದಿಗಳು ಹರಿಯುತ್ತಿದ್ದರೂ ಹಿಂದುಳಿದ ಪಟ್ಟ ಅಳಿಯುತ್ತಿಲ್ಲ. ಒಂದುಕಡೆ ಕೃಷ್ಣಾ, ಮತ್ತೊಂದು ಕಡೆ ಭೀಮಾ ನದಿ ಪಾತ್ರವನ್ನು ಹೊಂದಿದೆ. ಗುರುಮಠಕಲ್ ತಾಲ್ಲೂಕು ವ್ಯಾಪ್ತಿಗೆ ಮಾತ್ರ ನದಿಯಿಲ್ಲ. ಉಳಿದ ಐದು ತಾಲ್ಲೂಕುಗಳಲ್ಲಿ ನದಿಗಳಿವೆ. ನೀರಾವರಿ ಸೌಲಭ್ಯವಿದ್ದರೂ ಗುಳೆ ಹೋಗುವುದು ತಪ್ಪಿಲ್ಲ.</p>.<p>ಲಾಕ್ಡೌನ್ ವೇಳೆ ಅತಿ ಹೆಚ್ಚು ವಲಸೆ ಕಾರ್ಮಿಕರು ಜಿಲ್ಲೆಗೆ ಆಗಮಿಸಿದ್ದರು. ಇದರಿಂದ ತಿಳಿಯುತ್ತದೆ ಜಿಲ್ಲೆಯಲ್ಲಿ ಔದ್ಯೋಗಿಕ ವಲಯ ಎಷ್ಟು ಹಿಂದುಳಿದಿದೆ ಎಂಬುದು.</p>.<p class="Subhead"><strong>ಕಾರ್ಯಾರಂಭ ಮಾಡದ ಕಚೇರಿಗಳು</strong></p>.<p>ಜಿಲ್ಲೆಯಲ್ಲಿ ಗುರುಮಠಕಲ್, ವಡಗೇರಾ, ಹುಣಸಗಿ ತಾಲ್ಲೂಕು ಕೇಂದ್ರಗಳಾಗಿ ಘೋಷಿಸಿ ಮೂರು ವರ್ಷ ಕಳೆದರೂ ಪೂರ್ಣ ಪ್ರಮಾಣದ ಕಚೇರಿಗಳುಕಾರ್ಯಾರಂಭ ಮಾಡಿಲ್ಲ. ಇದರಿಂದ ಹಳೆ ತಾಲ್ಲೂಕು ಕೇಂದ್ರಗಳಿಗೆ ಸಾರ್ವಜನಿಕರ ಅಲೆದಾಟ ಇನ್ನೂ ತಪ್ಪಿಲ್ಲ. ಕಚೇರಿಗಳೇ ಇಲ್ಲದಿದ್ದರಿಂದ ಅಭಿವೃದ್ಧಿ ಇಲ್ಲಿ ಗೌಣವಾಗಿದೆ ಎನ್ನುವುದು ಈ ತಾಲ್ಲೂಕುಗಳ ಜನರ ಅಭಿಪ್ರಾಯವಾಗಿದೆ.</p>.<p class="Subhead"><strong>ಸ್ಥಾಪನೆಯಾಗದ ಕೈಗಾರಿಕೆಗಳು</strong></p>.<p>ಜಿಲ್ಲೆಯಲ್ಲಿ ಕೈಗಾರಿಕಾ ವಲಯ ಸ್ಥಾಪಿಸಲು ಹಿಂದಿನ ಸರ್ಕಾರಗಳು ಭೂಮಿ ವಶಪಡಿಸಿಕೊಂಡಿರುವುದೇ ದೊಡ್ಡ ಸಾಧನೆಯಾಗಿದೆ. ಇದರಿಂದ ಸ್ಥಳೀಯರಿಗೆ ಯಾವುದೇ ಉಪಯೋಗವಿಲ್ಲದಂತಾಗಿದೆ ಎನ್ನುವುದು ಜಿಲ್ಲೆಯ ಜನರ ಆರೋಪವಾಗಿದೆ.</p>.<p>ತಾಲ್ಲೂಕಿನ ಕಡೇಚೂರು–ಬಾಡಿಯಾಳ ಸೀಮೆಯಲ್ಲಿ ಕೈಗಾರಿಕಾ ವಲಯ ಸ್ಥಾಪನೆಗೆ 3,300 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿದೆ. ಆದರೆ, ಸೂಕ್ತ ಕೈಗಾರಿಕೆಗಳು ಬರದೆ ಇದು ಈಗ ರಾಸಾಯನಿಕ ಔಷಧಿ ಕಂಪನಿಗಳಿಗೆ ಜಾಗ ಮಾಡಿಕೊಟ್ಟಂತೆ ಆಗಿದೆ. ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರವೂ ಬಂದಿಲ್ಲ.</p>.<p class="Subhead"><strong>ಸಿಗದ ಪರಿಹಾರ</strong></p>.<p>ಜಿಲ್ಲೆಯಲ್ಲಿ ಈ ಬಾರಿ ಎರಡು ನದಿ ಮತ್ತು ಅತ್ಯಧಿಕ ಮಳೆಯಿಂದ ಸಾಕಷ್ಟು ಬೆಳೆ ನಷ್ಟವಾಗಿದೆ. ಆದರೆ, ಸಮರ್ಪಕ ಪರಿಹಾರ ವಿತರಣೆಯಲ್ಲಿ ರೈತರಿಗೆ ಪರಿಹಾರ ಸಿಕ್ಕಿಲ್ಲ ಎನ್ನುವುದು ರೈತರ ಆರೋಪವಾಗಿದೆ.</p>.<p>‘ಜಿಲ್ಲೆಯಲ್ಲಿ ಹತ್ತಿ ಮತ್ತು ಭತ್ತದ ಬೆಳೆಗಳು ಸಾಕಷ್ಟು ಹಾನಿಯಾಗಿವೆ. ಎಕರೆಗೆ ಹತ್ತರಿಂದ ಹದಿನೈದು ಕ್ವಿಂಟಲ್ ಇಳುವರಿ ಬರುತ್ತಿತ್ತು. ಆದರೆ, ಈ ಬಾರಿ 1 ರಿಂದ 2 ಕ್ವಿಂಟಲ್ ಮಾತ್ರ ಬಂದಿವೆ. ಇದರಿಂದ ಮುಖ್ಯಮಂತ್ರಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು’ ಎನ್ನುತ್ತಾರೆ ಅರುಣಕುಮಾರ ಗುಂಜಪ್ಪನೊರ.</p>.<p>ಜಿಲ್ಲೆಯು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯ, ಆರೋಗ್ಯ ಕ್ಷೇತ್ರದಲ್ಲಿ ಹಿಂದುಳಿದಿದೆ. ಇದನ್ನು ಯಡಿಯೂರಪ್ಪ ಅಳಿಸಿ ಹಾಕಲಿ ಎನ್ನುವುದು ಜಿಲ್ಲೆಯ ಜನರ ಆಶಯವಾಗಿದೆ.</p>.<p>***</p>.<p><strong>ಬಿಎಸ್ವೈ ಘೋಷಿಸಿದ್ದ ಜಿಲ್ಲೆ</strong></p>.<p>2009ಕ್ಕೂ ಮುಂಚೆ ಯಾದಗಿರಿ ಕಲಬುರ್ಗಿ ಜಿಲ್ಲೆಯ ಒಂದು ತಾಲ್ಲೂಕು ಕೇಂದ್ರವಾಗಿತ್ತು. 2008ರಲ್ಲಿ ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ಆಗಿತ್ತು. ಆಗ ಕಲಬುರ್ಗಿ ಜಿಲ್ಲೆಯನ್ನು ವಿಭಜಿಸಿ ಯಾದಗಿರಿ ಪಟ್ಟಣವನ್ನು ಕೇಂದ್ರವಾಗಿಸಿಕೊಂಡು ಹೊಸ ಜಿಲ್ಲೆ ರಚಿಸಲು ಅಂತಿಮ ನಿರ್ಣಯ ಕೈಗೊಳ್ಳಲಾಗಿತ್ತು. ಈ ನಿರ್ಣಯವನ್ನು ಆಗಿನ ಮುಖ್ಯಮಂತ್ರಿ ಆಗಿದ್ದ ಬಿ.ಎಸ್.ಯಡಿಯೂರಪ್ಪ ಕೈಗೊಂಡಿದ್ದರು. ಈಗ ಅದೇ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ.</p>.<p>2009ರ ಡಿಸೆಂಬರ್ 23ರಂದು ವಿಧಾನಸಭೆಯಲ್ಲಿ ಅಧಿಕೃತ ಜಿಲ್ಲೆಯಾಗಿ ಘೋಷಿಸಲಾಯಿತು. ನಂತರ 2009ರ ಡಿಸೆಂಬರ್ 31ರಂದು ಅಂತಿಮ ಅಧಿಸೂಚನೆ ನಂತರ ಯಾದಗಿರಿ ಜಿಲ್ಲೆ ಅಸ್ತಿತ್ವಕ್ಕೆ ಬಂದಿದೆ.</p>.<p>***</p>.<p>ಸಿಎಂ ಶಂಕುಸ್ಥಾಪನೆ, ಚಾಲನೆ ನೀಡಲಿರುವ ಕಾಮಗಾರಿ ವಿವರ</p>.<p>ಯಾದಗಿರಿ ವೈದ್ಯಕೀಯ ಶಿಕ್ಷಣ ಸಂಸ್ಥೆ (₹325 ಕೋಟಿ)</p>.<p>300 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆ (₹56 ಕೋಟಿ)</p>.<p>ಭೀಮಾ ನದಿ ಹೊಸ ಜಾಕ್ವೆಲ್ ನಿರ್ಮಾಣ (₹19.90 ಕೋಟಿ)</p>.<p>ಕೊಳ್ಳೂರು (ಎಂ)ಗ್ರಾಮದಲ್ಲಿ 110/11 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆ (₹6 ಕೋಟಿ)</p>.<p>ವಡಗೇರಾ–ತುಮಕೂರ–ಸಂಗಮ ರಸ್ತೆ ಅಭಿವೃದ್ಧಿ (₹4.80 ಕೋಟಿ)</p>.<p>ಒಟ್ಟಾರೆ ಅಂದಾಜು ಮೊತ್ತ (₹536.91 ಕೋಟಿ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>