<p><strong>ಕನಕಪುರ: </strong>ಮುಂಗಾರು ಪ್ರಾರಂಭವಾಗಿರುವುದರಿಂದ ರಾಗಿ ಬಿತ್ತನೆ ಮಾಡುವವರಿಗೆ ಸೂಕ್ತ ಸಮಯವಾಗಿದೆ. ಇಲಾಖೆಯಿಂದ ಉಚಿತವಾಗಿ ಬಿತ್ತನೆ ರಾಗಿ ನೀಡಲಾಗುತ್ತಿದ್ದು, ರೈತರು ಬಳಕೆ ಮಾಡಿಕೊಳ್ಳಬೇಕು ಎಂದು ಕೃಷಿ ಅಧಿಕಾರಿ ಸಿಂಧು ಮನವಿ ಮಾಡಿದರು.</p>.<p>ತಾಲ್ಲೂಕಿನ ಹಾರೋಹಳ್ಳಿ ಹೋಬಳಿಯ ಕಗ್ಗಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 2019-20, 2020-21ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಆಗಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಶನಿವಾರ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆಯಲ್ಲಿ ಮಾತನಾಡಿದರು.</p>.<p>ಮಳೆಗಾಲವಾಗಿರುವುದರಿಂದ ಜಮೀನಿನಲ್ಲಿ ಬಿದ್ದ ಮಳೆ ನೀರು ಹೊರಗೆ ಹರಿದು ವ್ಯರ್ಥವಾಗುತ್ತದೆ. ಜಮೀನಿನ ಮೇಲ್ಮೈ ಮಣ್ಣು ಸವಕಳಿಯಾಗುತ್ತದೆ. ಆ ಕಾರಣದಿಂದ ರೈತರು ನರೇಗಾ ಯೋಜನೆಯಡಿ ತಮ್ಮ ಜಮೀನುಗಳಲ್ಲಿ ಕಂದಕ ಬದು ನಿರ್ಮಾಣ ಮಾಡಿಕೊಳ್ಳಬೇಕು. ಇದರಿಂದ ಭೂಮಿಯಲ್ಲಿ ಅಂತರ್ಜಲ ಹೆಚ್ಚಳವಾಗುತ್ತದೆ. ನರೇಗಾದಲ್ಲಿ ಕೂಲಿ ಹಣವೂ ಸಿಗಲಿದೆ ಎಂದು ತಿಳಿಸಿದರು.</p>.<p>ರೈತರಿಗೆ ಅನುಕೂಲವಾಗುವಂತೆ ಇಲಾಖೆಯಿಂದ ಕೃಷಿ ಯಂತ್ರಧಾರೆಯಡಿ ಕೃಷಿ ಯಂತ್ರೋಪಕರಣಗಳನ್ನು ಕಡಿಮೆ ದರದಲ್ಲಿ ಬಾಡಿಗೆಗೆ ನೀಡಲಾಗುತ್ತದೆ. ಹೋಬಳಿ ವ್ಯಾಪ್ತಿಯಲ್ಲೇ ಕೃಷಿ ಯಂತ್ರಧಾರೆಯಿದ್ದು ನೋಂದಾಯಿಸಿಕೊಳ್ಳುವ ಮೂಲಕ ನಿಮಗೆ ಬೇಕಾದ ಕೃಷಿ ಯಂತ್ರಗಳನ್ನು ಪಡೆಯಬಹುದಾಗಿದೆ ಎಂದು ಹೇಳಿದರು.</p>.<p>ಸಾಮಾಜಿಕ ಲೆಕ್ಕ ಪರಿಶೋಧನೆಯ ತಾಲ್ಲೂಕು ಸಂಯೋಜಕಿ ಕಮಲಮ್ಮ, 2019ರಿಂದ 2021 ರವರೆಗೆ ನರೇಗಾ ಯೋಜನೆಯಡಿ ನಡೆದಿದ್ದ ಕಾಮಗಾರಿಗಳ ಕಡತದ ಲೆಕ್ಕ ಪರಿಶೋಧನೆ ನಡೆಸಿ ಸಭೆಯಲ್ಲಿ ವರದಿ ಮಂಡಿಸಿದರು. ಸಿಡಿಪಿಒ ದಿನೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದಮುಗಲೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಮುಂಗಾರು ಪ್ರಾರಂಭವಾಗಿರುವುದರಿಂದ ರಾಗಿ ಬಿತ್ತನೆ ಮಾಡುವವರಿಗೆ ಸೂಕ್ತ ಸಮಯವಾಗಿದೆ. ಇಲಾಖೆಯಿಂದ ಉಚಿತವಾಗಿ ಬಿತ್ತನೆ ರಾಗಿ ನೀಡಲಾಗುತ್ತಿದ್ದು, ರೈತರು ಬಳಕೆ ಮಾಡಿಕೊಳ್ಳಬೇಕು ಎಂದು ಕೃಷಿ ಅಧಿಕಾರಿ ಸಿಂಧು ಮನವಿ ಮಾಡಿದರು.</p>.<p>ತಾಲ್ಲೂಕಿನ ಹಾರೋಹಳ್ಳಿ ಹೋಬಳಿಯ ಕಗ್ಗಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 2019-20, 2020-21ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಆಗಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಶನಿವಾರ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆಯಲ್ಲಿ ಮಾತನಾಡಿದರು.</p>.<p>ಮಳೆಗಾಲವಾಗಿರುವುದರಿಂದ ಜಮೀನಿನಲ್ಲಿ ಬಿದ್ದ ಮಳೆ ನೀರು ಹೊರಗೆ ಹರಿದು ವ್ಯರ್ಥವಾಗುತ್ತದೆ. ಜಮೀನಿನ ಮೇಲ್ಮೈ ಮಣ್ಣು ಸವಕಳಿಯಾಗುತ್ತದೆ. ಆ ಕಾರಣದಿಂದ ರೈತರು ನರೇಗಾ ಯೋಜನೆಯಡಿ ತಮ್ಮ ಜಮೀನುಗಳಲ್ಲಿ ಕಂದಕ ಬದು ನಿರ್ಮಾಣ ಮಾಡಿಕೊಳ್ಳಬೇಕು. ಇದರಿಂದ ಭೂಮಿಯಲ್ಲಿ ಅಂತರ್ಜಲ ಹೆಚ್ಚಳವಾಗುತ್ತದೆ. ನರೇಗಾದಲ್ಲಿ ಕೂಲಿ ಹಣವೂ ಸಿಗಲಿದೆ ಎಂದು ತಿಳಿಸಿದರು.</p>.<p>ರೈತರಿಗೆ ಅನುಕೂಲವಾಗುವಂತೆ ಇಲಾಖೆಯಿಂದ ಕೃಷಿ ಯಂತ್ರಧಾರೆಯಡಿ ಕೃಷಿ ಯಂತ್ರೋಪಕರಣಗಳನ್ನು ಕಡಿಮೆ ದರದಲ್ಲಿ ಬಾಡಿಗೆಗೆ ನೀಡಲಾಗುತ್ತದೆ. ಹೋಬಳಿ ವ್ಯಾಪ್ತಿಯಲ್ಲೇ ಕೃಷಿ ಯಂತ್ರಧಾರೆಯಿದ್ದು ನೋಂದಾಯಿಸಿಕೊಳ್ಳುವ ಮೂಲಕ ನಿಮಗೆ ಬೇಕಾದ ಕೃಷಿ ಯಂತ್ರಗಳನ್ನು ಪಡೆಯಬಹುದಾಗಿದೆ ಎಂದು ಹೇಳಿದರು.</p>.<p>ಸಾಮಾಜಿಕ ಲೆಕ್ಕ ಪರಿಶೋಧನೆಯ ತಾಲ್ಲೂಕು ಸಂಯೋಜಕಿ ಕಮಲಮ್ಮ, 2019ರಿಂದ 2021 ರವರೆಗೆ ನರೇಗಾ ಯೋಜನೆಯಡಿ ನಡೆದಿದ್ದ ಕಾಮಗಾರಿಗಳ ಕಡತದ ಲೆಕ್ಕ ಪರಿಶೋಧನೆ ನಡೆಸಿ ಸಭೆಯಲ್ಲಿ ವರದಿ ಮಂಡಿಸಿದರು. ಸಿಡಿಪಿಒ ದಿನೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದಮುಗಲೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>