ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಬಿಜೆಎನ್‌ಎಲ್‌ನಲ್ಲಿ ಕಮಿಷನ್‌: ಆರೋಪ

Last Updated 17 ಏಪ್ರಿಲ್ 2022, 5:41 IST
ಅಕ್ಷರ ಗಾತ್ರ

ಭೀಮರಾಯನಗುಡಿ(ಶಹಾಪುರ): ಕೃಷ್ಣಾ ಭಾಗ್ಯ ಜಲ ನಿಗಮದ ನಾರಾಯಣಪುರ, ಆಲಮಟ್ಟಿ ವಲಯದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದ್ದು, ನಿಗಮದಲ್ಲಿ ಕೆಲ ನಿರ್ವಹಿಸುತ್ತಿರುವ ಎಂಜಿನಿಯರ್‌ಗಳಿಗೆ ಪರ್ಸೆಂಟೇಜ್ ನೀಡಬೇಕು ಎಂಬ ಅಲಿಖಿತ ಬೇಡಿಕೆಯನ್ನು ಮುಂದೆ ಇಟ್ಟು ಕಳಪೆ ಕಾಮಗಾರಿಗೆ ಪ್ರೇರಣೆ ನೀಡುತ್ತಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಶನಿವಾರ ಭೀಮರಾಯನಗುಡಿ ಆಡಳಿತ ಕಚೇರಿ ಎದುರು ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟದ ಸಂಚಾಲಕ ವೆಂಕೋಬ ದೊರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬೇಸಿಗೆ ಆರಂಭವಾಗುತ್ತಿದ್ದಂತೆ ಕಾಲುವೆ ಜಾಲದ ದುರಸ್ತಿಗಾಗಿ ಟೆಂಡರ್ ಕರೆಯುವುದು ಸಾಮಾನ್ಯ. ಆಗ ಗುತ್ತಿಗೆದಾರರು ಅತ್ಯಂತ ಕಡಿಮೆ ಬೆಲೆಗೆ ಟೆಂಡರ್ ಪಡೆದು ಎಂಜಿನಿಯರ್ ಹಾಗೂ ಗುತ್ತಿಗೆದಾರರು ಶಾಮೀಲಾಗಿ ಅಕ್ರಮ ಎಸಗುವುದು ಸಾಮಾನ್ಯವಾಗಿದೆ. ಪ್ರಸಕ್ತ ಬಾರಿ ಇದಕ್ಕೆ ಕಡಿವಾಣ ಹಾಕಬೇಕು. ಈಗಾಗಲೇ ಕೆಲವು ಕಡೆ ಹಳೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿವೆ. ಅದರ ಗುಣಮಟ್ಟ ಪರಿಶೀಲಿಸಬೇಕು. ಅಕ್ರಮ ಕಂಡು ಬಂದರೆ ಸೂಕ್ತ ತನಿಖೆ ನಡೆಸಬೇಕು ಎಂದು ಮುಖಂಡರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT