ಭೀಮರಾಯನಗುಡಿ(ಶಹಾಪುರ): ಕೃಷ್ಣಾ ಭಾಗ್ಯ ಜಲ ನಿಗಮದ ನಾರಾಯಣಪುರ, ಆಲಮಟ್ಟಿ ವಲಯದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದ್ದು, ನಿಗಮದಲ್ಲಿ ಕೆಲ ನಿರ್ವಹಿಸುತ್ತಿರುವ ಎಂಜಿನಿಯರ್ಗಳಿಗೆ ಪರ್ಸೆಂಟೇಜ್ ನೀಡಬೇಕು ಎಂಬ ಅಲಿಖಿತ ಬೇಡಿಕೆಯನ್ನು ಮುಂದೆ ಇಟ್ಟು ಕಳಪೆ ಕಾಮಗಾರಿಗೆ ಪ್ರೇರಣೆ ನೀಡುತ್ತಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಶನಿವಾರ ಭೀಮರಾಯನಗುಡಿ ಆಡಳಿತ ಕಚೇರಿ ಎದುರು ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟದ ಸಂಚಾಲಕ ವೆಂಕೋಬ ದೊರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.