ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಹಿಂದೂ ಮುಸ್ಲಿಂ ಸೌಹಾರ್ದದ ಪ್ರತೀಕವಾದ ತಿಂಥಣಿ ಮೌನೇಶ್ವರ ಜಾತ್ರೆ 5 ದಿನಗಳ ಕಾಲ ನಡೆಯಿತು. ಯಾದಗಿರಿ ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಗಳು, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರಗಳಿಂದಲೂ ಲಕ್ಷಾಂತರ ಭಕ್ತರು ಜಾತ್ರೆಗೆ ಆಗಮಿಸಿದ್ದು, ಭಕ್ತರ ಸಮ್ಮುಖದಲ್ಲಿ ಶನಿವಾರ ಸಂಜೆ ರಥೋತ್ಸವ ನಡೆಯಿತು.