ಜನರು ಬೆಳ್ಳ ಬೆಳಿಗ್ಗೆಯೇ ಹಾಲು, ಪತ್ರಿಕೆ ತೆಗೆದುಕೊಂಡು ಮನೆ ಸೇರಿ ಕೊಂಡರು. ಅಗತ್ಯ ವಸ್ತುಗಳ ಮಾರಾಟವಿರಲಿಲ್ಲ. ಸದಾ ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಗಾಂಧಿ ವೃತ, ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ ಸೇರಿದಂತೆ ಇತರೆ ವೃತ್ತ ಮತ್ತು ರಸ್ತೆಗಳು ಜನರಿಲ್ಲದೆ ಬಿಕೋ ಎನುತ್ತಿದ್ದವು. ಅಂಗಡಿ ಮುಂಗಟ್ಟು ಮುಚ್ಚಿದ್ದರಿಂದ ಜನಜಂಗುಳಿ ಕಂಡುಬರಲಿಲ್ಲ.