<p><strong>ಯಾದಗಿರಿ</strong>: ಜಿಲ್ಲೆಯ ನಾಲ್ಕು ಕ್ಷೇತ್ರಗಳ ಪೈಕಿ ಶಹಾಪುರ, ಸುರಪುರ ಮತಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿದೆ.</p>.<p>ಶಹಾಪುರದ ಹಾಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಸುರಪುರದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಹೆಸರು ಇದೆ.</p>.<p>ಎರಡು ಕ್ಷೇತ್ರಗಳಲ್ಲಿ ಹಾಲಿ, ಮಾಜಿ ಶಾಸಕರು ತಲಾ ಒಬ್ಬೊಬ್ಬರು ಮಾತ್ರ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಇದರಿಂದ ಇದು ನಿರೀಕ್ಷಿತವೂ<br />ಆಗಿತ್ತು.</p>.<p class="Subhead">ಯಾದಗಿರಿ, ಗುರುಮಠಕಲ್ಗೆ ಘೋಷಿಸಿಲ್ಲ: ಜಿಲ್ಲೆಯಲ್ಲಿ ನಾಲ್ಕು ಮತಕ್ಷೇತ್ರಗಳಿವೆ. ಇದರಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಎರಡು ಮತಕ್ಷೇತ್ರಗಳಿಗೆ ಮಾತ್ರ ಟಿಕೆಟ್ ಘೋಷಣೆ ಮಾಡಲಾಗಿದೆ. ಯಾದಗಿರಿ ಮತಕ್ಷೇತ್ರದಲ್ಲಿ 18 ಜನ, ಗುರುಮಠಕಲ್ ಮತಕ್ಷೇತ್ರದಲ್ಲಿ 8 ಜನ ಟಿಕೆಟ್ ಆಕಾಂಕ್ಷಿಗಳು ಇದ್ದಾರೆ. </p>.<p>ಇನ್ನುಳಿದ ಎರಡು ಮತಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದರಿಂದ ಯಾದಗಿರಿ, ಗುರುಮಠಕಲ್ ಮತಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿಲ್ಲ.</p>.<p>ಈಚೆಗೆ ಮಾಜಿ ಸಚಿವ ಬಾಬುರಾವ ಚಿಂಚನಸೂರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರಿಂದಲೂ ಟಿಕೆಟ್ ಘೋಷಣೆಗೆ ತೊಡಕು ಆಗಬಾರದು ಎಂದು ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಮಾಡಿ ಉಳಿದ ಕ್ಷೇತ್ರಗಳಲ್ಲಿ ಕಾದು ನೋಡುವ ತಂತ್ರಕ್ಕೆ ಮೊರೆ<br />ಹೋಗಿದ್ದಾರೆ. </p>.<p>ಈಗಾಗಲೇ ವಿವಿಧ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು ಪ್ರಚಾರ ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜಿಲ್ಲೆಯ ನಾಲ್ಕು ಕ್ಷೇತ್ರಗಳ ಪೈಕಿ ಶಹಾಪುರ, ಸುರಪುರ ಮತಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿದೆ.</p>.<p>ಶಹಾಪುರದ ಹಾಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಸುರಪುರದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಹೆಸರು ಇದೆ.</p>.<p>ಎರಡು ಕ್ಷೇತ್ರಗಳಲ್ಲಿ ಹಾಲಿ, ಮಾಜಿ ಶಾಸಕರು ತಲಾ ಒಬ್ಬೊಬ್ಬರು ಮಾತ್ರ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಇದರಿಂದ ಇದು ನಿರೀಕ್ಷಿತವೂ<br />ಆಗಿತ್ತು.</p>.<p class="Subhead">ಯಾದಗಿರಿ, ಗುರುಮಠಕಲ್ಗೆ ಘೋಷಿಸಿಲ್ಲ: ಜಿಲ್ಲೆಯಲ್ಲಿ ನಾಲ್ಕು ಮತಕ್ಷೇತ್ರಗಳಿವೆ. ಇದರಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಎರಡು ಮತಕ್ಷೇತ್ರಗಳಿಗೆ ಮಾತ್ರ ಟಿಕೆಟ್ ಘೋಷಣೆ ಮಾಡಲಾಗಿದೆ. ಯಾದಗಿರಿ ಮತಕ್ಷೇತ್ರದಲ್ಲಿ 18 ಜನ, ಗುರುಮಠಕಲ್ ಮತಕ್ಷೇತ್ರದಲ್ಲಿ 8 ಜನ ಟಿಕೆಟ್ ಆಕಾಂಕ್ಷಿಗಳು ಇದ್ದಾರೆ. </p>.<p>ಇನ್ನುಳಿದ ಎರಡು ಮತಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದರಿಂದ ಯಾದಗಿರಿ, ಗುರುಮಠಕಲ್ ಮತಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿಲ್ಲ.</p>.<p>ಈಚೆಗೆ ಮಾಜಿ ಸಚಿವ ಬಾಬುರಾವ ಚಿಂಚನಸೂರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರಿಂದಲೂ ಟಿಕೆಟ್ ಘೋಷಣೆಗೆ ತೊಡಕು ಆಗಬಾರದು ಎಂದು ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಮಾಡಿ ಉಳಿದ ಕ್ಷೇತ್ರಗಳಲ್ಲಿ ಕಾದು ನೋಡುವ ತಂತ್ರಕ್ಕೆ ಮೊರೆ<br />ಹೋಗಿದ್ದಾರೆ. </p>.<p>ಈಗಾಗಲೇ ವಿವಿಧ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು ಪ್ರಚಾರ ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>