ರಾಮಸಮುದ್ರ ಗ್ರಾಮದ ಹಿರಿಯ ನಾಗರಿಕ ಸಿದ್ದಲಿಂಗಪ್ಪ ಗುನಕಿ ಧ್ವಜಾರೋಹಣ ಮಾಡಿದರು. ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವೆಂಕಟೇಶ ಬಿ.ಚಟ್ನಳ್ಳಿ, ಯಾದಗಿರಿ ತಾಲೂಕು ಪಂಚಾಯಿತಿ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಖಾಲಿದ್ ಅಹ್ಮದ್, ನರೇಗಾ ವಿಷಯ ನಿರ್ವಾಹಕ ಅನಸರ ಪಟೇಲ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು ಮೇಟಿ, ಜಿಲ್ಲಾ ಪಂಚಾಯಿತಿ ಎಡಿಪಿಸಿ ಬನ್ನಪ್ಪ ಬೈಟಿಪುಲ್ಲಿ, ಡಿಐಇಸಿ ಪರಶುರಾಮ, ಡಿಎನ್ಆರ್ಎಮ್ ಪ್ರಶಾಂತ, ಗ್ರಾಮ ಪಂಚಾಯತಿ ಅಧ್ಯಕ್ಷರ ಬಸಪ್ಪ, ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.