<p><strong>ಸುರಪುರ:</strong> ‘ನಮ್ಮ ಸರ್ಕಾರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದೆ. ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸಮರೋಪಾದಿಯಲ್ಲಿ ನಡೆದಿವೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ’ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.</p>.<p>ತಾಲ್ಲೂಕಿನ ದೇವಪುರ ಗ್ರಾಮದಲ್ಲಿ ಭಾನುವಾರ ವಿವಿಧ ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಇಂದು ₹ 15 ಲಕ್ಷ ವೆಚ್ಚದ ಬ್ರಾಹ್ಮಣ ಸಮುದಾಯ ಭವನ, ₹ 10 ಲಕ್ಷ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ಈರಣ್ಣ ಗುಡಿಯನ್ನು ಉದ್ಘಾಟಿಸಿದ್ದೇನೆ’ ಎಂದರು.</p>.<p>‘₹ 30 ಲಕ್ಷ ವೆಚ್ಚದಲ್ಲಿ ಮೈಲಾರಲಿಂಗೇಶ್ವರ ದೇವಸ್ಥಾನದ ಹತ್ತಿರ ಕಲ್ಯಾಣ ಮಂಟಪ, ₹ 83 ಲಕ್ಷದ ಎಎನ್ಎಂ ಕ್ವಾಟರ್ಸ್, ₹ 50 ಲಕ್ಷ ವೆಚ್ಚದ ಸಿಸಿ ರಸ್ತೆ, ₹ 24 ಲಕ್ಷ ವೆಚ್ಚದ ಸಮುದಾಯ ಶೌಚಾಲಯ ಕಾಮಗಾರಿಗೆ ಪೂಜೆ ನೆರವೇರಿಸಿದ್ದೇನೆ’ ಎಂದರು.</p>.<p>‘ಒಟ್ಟು ₹ 1.12 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ನಡೆದಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ತಂದು ಅಭಿವೃದ್ಧಿ ಪಡಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ನೀರಾವರಿ ಸಲಹಾ ಸಮಿತಿಯಲ್ಲಿ ನಾನೂ ಸೇರಿದಂತೆ ಈ ಭಾಗದ ಜನಪ್ರತಿನಿಧಿಗಳು ಚರ್ಚೆ ನಡೆಸಿ ಏ. 3 ರವರೆಗೂ ಕಾಲುವೆಗೆ ನೀರು ಹರಿಸುವಂತೆ ಮಾಡಲು ಪ್ರಯತ್ನಿಸಿದ್ದೇವೆ. ರೈತರು ನೀರನ್ನು ಪೋಲು ಮಾಡದೆ ಸಮರ್ಪಕವಾಗಿ ಬಳಸಿ ಎರಡನೇ ಬೆಳೆ ಪಡೆದುಕೊಳ್ಳಿ’ ಎಂದು ವಿನಂತಿಸಿದರು.</p>.<p>ಕೆವೈಡಿಸಿಸಿ ಬ್ಯಾಂಕ್ ನೂತನ ನಿರ್ದೇಶಕ ವಿಠಲ ಯಾದವ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಸನಗೌಡ ಪಾಟೀಲ, ಹಿರಿಯ ಮುಖಂಡ ಮಲ್ಲಣ್ಣ ಸಾಹುಕಾರ ಮುಧೋಳ, ಗಚ್ಚಪ್ಪ ಪುಜಾರಿ, ಬಸವರಾಜ ಬಾಕಲಿ ಇತರ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ನಮ್ಮ ಸರ್ಕಾರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದೆ. ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸಮರೋಪಾದಿಯಲ್ಲಿ ನಡೆದಿವೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ’ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.</p>.<p>ತಾಲ್ಲೂಕಿನ ದೇವಪುರ ಗ್ರಾಮದಲ್ಲಿ ಭಾನುವಾರ ವಿವಿಧ ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಇಂದು ₹ 15 ಲಕ್ಷ ವೆಚ್ಚದ ಬ್ರಾಹ್ಮಣ ಸಮುದಾಯ ಭವನ, ₹ 10 ಲಕ್ಷ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ಈರಣ್ಣ ಗುಡಿಯನ್ನು ಉದ್ಘಾಟಿಸಿದ್ದೇನೆ’ ಎಂದರು.</p>.<p>‘₹ 30 ಲಕ್ಷ ವೆಚ್ಚದಲ್ಲಿ ಮೈಲಾರಲಿಂಗೇಶ್ವರ ದೇವಸ್ಥಾನದ ಹತ್ತಿರ ಕಲ್ಯಾಣ ಮಂಟಪ, ₹ 83 ಲಕ್ಷದ ಎಎನ್ಎಂ ಕ್ವಾಟರ್ಸ್, ₹ 50 ಲಕ್ಷ ವೆಚ್ಚದ ಸಿಸಿ ರಸ್ತೆ, ₹ 24 ಲಕ್ಷ ವೆಚ್ಚದ ಸಮುದಾಯ ಶೌಚಾಲಯ ಕಾಮಗಾರಿಗೆ ಪೂಜೆ ನೆರವೇರಿಸಿದ್ದೇನೆ’ ಎಂದರು.</p>.<p>‘ಒಟ್ಟು ₹ 1.12 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ನಡೆದಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ತಂದು ಅಭಿವೃದ್ಧಿ ಪಡಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ನೀರಾವರಿ ಸಲಹಾ ಸಮಿತಿಯಲ್ಲಿ ನಾನೂ ಸೇರಿದಂತೆ ಈ ಭಾಗದ ಜನಪ್ರತಿನಿಧಿಗಳು ಚರ್ಚೆ ನಡೆಸಿ ಏ. 3 ರವರೆಗೂ ಕಾಲುವೆಗೆ ನೀರು ಹರಿಸುವಂತೆ ಮಾಡಲು ಪ್ರಯತ್ನಿಸಿದ್ದೇವೆ. ರೈತರು ನೀರನ್ನು ಪೋಲು ಮಾಡದೆ ಸಮರ್ಪಕವಾಗಿ ಬಳಸಿ ಎರಡನೇ ಬೆಳೆ ಪಡೆದುಕೊಳ್ಳಿ’ ಎಂದು ವಿನಂತಿಸಿದರು.</p>.<p>ಕೆವೈಡಿಸಿಸಿ ಬ್ಯಾಂಕ್ ನೂತನ ನಿರ್ದೇಶಕ ವಿಠಲ ಯಾದವ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಸನಗೌಡ ಪಾಟೀಲ, ಹಿರಿಯ ಮುಖಂಡ ಮಲ್ಲಣ್ಣ ಸಾಹುಕಾರ ಮುಧೋಳ, ಗಚ್ಚಪ್ಪ ಪುಜಾರಿ, ಬಸವರಾಜ ಬಾಕಲಿ ಇತರ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>