<p><strong>ಯಾದಗಿರಿ:</strong> ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂವಿಧಾನ ಸಮರ್ಪಣಾ ದಿನಾಚರಣೆ ಆಚರಿಸಲಾಯಿತು.</p>.<p>ಜಗತ್ತಿನಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ನಮ್ಮ ಸಂವಿಧಾನವು ನಮ್ಮ ಹೆಮ್ಮೆ. 1949ರ ನವೆಂಬರ್ 26 ರಂದು ಭಾರತೀಯರು ತಮ್ಮನ್ನು ತಾವು ಸಂವಿಧಾನಕ್ಕೆ ಶ್ರದ್ಧೆ, ನಿಷ್ಠೆಗಳಿಂದ ಸಮರ್ಪಿಸಿಕೊಂಡ ದಿನ ಎಂದು ಗಣ್ಯರು ಸ್ಮರಿಸಿದರು.</p>.<p class="Briefhead"><strong>ಜಿಲ್ಲಾ ಪಂಚಾಯಿತಿ ಸಭಾಂಗಣ:</strong></p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾಶರ್ಮಾ ಅವರು ಜಿ.ಪಂ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಸಂವಿಧಾನದ ಪ್ರಸ್ತಾವನೆ ಬೋಧಿಸಿದರು.</p>.<p>ಬಳಿಕ ಸಂವಿಧಾನದ ಪ್ರಸ್ತಾವನೆಯನ್ನು ವಿವರಿಸುತ್ತ ಮಾತನಾಡಿದ ಸಿಇಒ ಶಿಲ್ಪಾ ಶರ್ಮಾ, ಜನವರಿ 26, 1950 ರಂದು ನಮ್ಮ ಸಂವಿಧಾನವು ಅಧಿಕೃತವಾಗಿ ಜಾರಿಗೆ ಬಂದಿದ್ದು, ಅಂದಿನಿಂದ ಇಂದಿನವರೆಗೂ ಸದೃಢವಾಗಿ ನಿಂತಿರುವುದು ಅದರ ಸಶಕ್ತತೆಗೆ, ಜೀವಂತಿಕೆಗೆ ಸಾಕ್ಷಿಯಾಗಿದೆ<br />ಎಂದರು.</p>.<p>ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಮುಖ್ಯ ಯೋಜನಾಧಿಕಾರಿ ಸುನಿಲ್ ಬಿಸ್ವಾಸ್ ಅವರು ಮಾತನಾಡಿದರು. ಯೋಜನಾ ನಿರ್ದೇಶಕ ಗುರುನಾಥ ಗೌಡಪ್ಪನವರ್, ಲೆಕ್ಕಾಧಿಕಾರಿ ವೆಂಕಟೇಶ, ಜಿ.ಪಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p class="Briefhead"><strong>ಪದವಿ ಮಹಾವಿದ್ಯಾಲಯ:</strong></p>.<p>ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಗುರುವಾರ ಸಂವಿಧಾನ ಸಮರ್ಪಣ ದಿನಏರ್ಪಡಿಸಲಾಗಿತ್ತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಪ್ರಾಧ್ಯಾಪಕ ಡಾ.ಸರ್ವೋದಯ ಶಿವುಪುತ್ರ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ರಾಜ್ಯಶಾಸ್ತ್ರದ ಪ್ರಾಧ್ಯಾಪಕ ಡಾ. ದೇವೀಂದ್ರಪ್ಪ ಹಳಿಮನಿ ವಿಶೇಷ ಉಪನ್ಯಾಸ<br />ನೀಡಿದರು.</p>.<p>ಈ ವೇಳೆ ಶರಣಬಸಪ್ಪ ರಾಯಿಕೋಟಿ, ಡಾ.ಮೋನಯ್ಯ ಕಲಾಲ, ಬಿ.ಆರ್.ಕೇತನಕರ್, ಡಾ. ಜೆಟ್ಟೆಪ್ಪ ಡಿ., ಡಾ. ಚಂದ್ರಶೇಖರ ಕೊಂಕಲ್, ಡಾ. ಅಶೋಕರೆಡ್ಡಿ ಪಾಟೀಲ, ದವಲಪ್ಪ, ಡಾ. ಮೊಗಲಪ್ಪ, ಚನ್ನಬಸಪ್ಪ ಓಡ್ಕರ್ಇದ್ದರು. ಪ್ರಹ್ಲಾದ ಜೋಶಿ ಪ್ರಾರ್ಥನೆ ಹಾಡಿದರು.ಉಮೇಶ ನಿರೂಪಿಸಿ, ವಂದಿಸಿದರು.ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.</p>.<p class="Briefhead"><strong>ಬಿ️ಜೆಪಿ ಕಾರ್ಯಾಲ️ಯ:</strong></p>.<p>ಸಂವಿಧಾನ ದಿನದ ಅಂಗವಾಗಿ ನಗರದ ಬಿ️ಜೆಪಿ ಜಿಲ್ಲಾ ಕಾರ್ಯಾಲ️ಯದಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಬಿ️ಜೆಪಿ ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲ️ರೆಡ್ಡಿ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ, ಮಾತನಾಡಿದರು.</p>.<p>ಈವೇಳೆನಗರಸಭೆ ಸದಸ್ಯರಾದ ಹನುಮಂತ ಇಟಗಿ, ಮಾರುತಿ ಕಲಾಲ, ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮನೋಹರ್ ಪವರ್, ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಸುರೇಶ್ ಚಾವ್ಹಾಣ, ಶಿವರಾಜ ದಾಸನಕೇರಿ, ಸುನಿತಾ ಚವ್ಹಾಣ್, ಚಂದ್ರ ಮುಂಡರಗಿ ಇದ್ದರು.</p>.<p class="Briefhead">ನ್ಯೂ ಕನ್ನಡ ಪದವಿ ಪೂರ್ವ ಕಾಲೇಜು:</p>.<p>ನಗರದ ನ್ಯೂ ಕನ್ನಡ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಂ.ಕೆ.ಬೀರನೂರು ನುಡಿದರು.</p>.<p>ಉಪನ್ಯಾಸಕ ಮಲ್ಲಿಕಾರ್ಜುನ ಅಂಗಡಿ ಸಂವಿಧಾನದ ಪೀಠಿಕೆ ಓದಿದರು. ಕಾಲೇಜಿನ ಪ್ರಾಚಾರ್ಯ ವೆಂಕಟರಾವ್ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು.<br />ಉಪನ್ಯಾಸಕರಾದ ರಘುನಾಥರೆಡ್ಡಿ ಪಾಟೀಲ, ಪ್ರಕಾಶ ರೆಡ್ಡಿ, ಅಶೋಕ ಅವಂಟಿ, ರೀನಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂವಿಧಾನ ಸಮರ್ಪಣಾ ದಿನಾಚರಣೆ ಆಚರಿಸಲಾಯಿತು.</p>.<p>ಜಗತ್ತಿನಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ನಮ್ಮ ಸಂವಿಧಾನವು ನಮ್ಮ ಹೆಮ್ಮೆ. 1949ರ ನವೆಂಬರ್ 26 ರಂದು ಭಾರತೀಯರು ತಮ್ಮನ್ನು ತಾವು ಸಂವಿಧಾನಕ್ಕೆ ಶ್ರದ್ಧೆ, ನಿಷ್ಠೆಗಳಿಂದ ಸಮರ್ಪಿಸಿಕೊಂಡ ದಿನ ಎಂದು ಗಣ್ಯರು ಸ್ಮರಿಸಿದರು.</p>.<p class="Briefhead"><strong>ಜಿಲ್ಲಾ ಪಂಚಾಯಿತಿ ಸಭಾಂಗಣ:</strong></p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾಶರ್ಮಾ ಅವರು ಜಿ.ಪಂ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಸಂವಿಧಾನದ ಪ್ರಸ್ತಾವನೆ ಬೋಧಿಸಿದರು.</p>.<p>ಬಳಿಕ ಸಂವಿಧಾನದ ಪ್ರಸ್ತಾವನೆಯನ್ನು ವಿವರಿಸುತ್ತ ಮಾತನಾಡಿದ ಸಿಇಒ ಶಿಲ್ಪಾ ಶರ್ಮಾ, ಜನವರಿ 26, 1950 ರಂದು ನಮ್ಮ ಸಂವಿಧಾನವು ಅಧಿಕೃತವಾಗಿ ಜಾರಿಗೆ ಬಂದಿದ್ದು, ಅಂದಿನಿಂದ ಇಂದಿನವರೆಗೂ ಸದೃಢವಾಗಿ ನಿಂತಿರುವುದು ಅದರ ಸಶಕ್ತತೆಗೆ, ಜೀವಂತಿಕೆಗೆ ಸಾಕ್ಷಿಯಾಗಿದೆ<br />ಎಂದರು.</p>.<p>ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಮುಖ್ಯ ಯೋಜನಾಧಿಕಾರಿ ಸುನಿಲ್ ಬಿಸ್ವಾಸ್ ಅವರು ಮಾತನಾಡಿದರು. ಯೋಜನಾ ನಿರ್ದೇಶಕ ಗುರುನಾಥ ಗೌಡಪ್ಪನವರ್, ಲೆಕ್ಕಾಧಿಕಾರಿ ವೆಂಕಟೇಶ, ಜಿ.ಪಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p class="Briefhead"><strong>ಪದವಿ ಮಹಾವಿದ್ಯಾಲಯ:</strong></p>.<p>ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಗುರುವಾರ ಸಂವಿಧಾನ ಸಮರ್ಪಣ ದಿನಏರ್ಪಡಿಸಲಾಗಿತ್ತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಪ್ರಾಧ್ಯಾಪಕ ಡಾ.ಸರ್ವೋದಯ ಶಿವುಪುತ್ರ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ರಾಜ್ಯಶಾಸ್ತ್ರದ ಪ್ರಾಧ್ಯಾಪಕ ಡಾ. ದೇವೀಂದ್ರಪ್ಪ ಹಳಿಮನಿ ವಿಶೇಷ ಉಪನ್ಯಾಸ<br />ನೀಡಿದರು.</p>.<p>ಈ ವೇಳೆ ಶರಣಬಸಪ್ಪ ರಾಯಿಕೋಟಿ, ಡಾ.ಮೋನಯ್ಯ ಕಲಾಲ, ಬಿ.ಆರ್.ಕೇತನಕರ್, ಡಾ. ಜೆಟ್ಟೆಪ್ಪ ಡಿ., ಡಾ. ಚಂದ್ರಶೇಖರ ಕೊಂಕಲ್, ಡಾ. ಅಶೋಕರೆಡ್ಡಿ ಪಾಟೀಲ, ದವಲಪ್ಪ, ಡಾ. ಮೊಗಲಪ್ಪ, ಚನ್ನಬಸಪ್ಪ ಓಡ್ಕರ್ಇದ್ದರು. ಪ್ರಹ್ಲಾದ ಜೋಶಿ ಪ್ರಾರ್ಥನೆ ಹಾಡಿದರು.ಉಮೇಶ ನಿರೂಪಿಸಿ, ವಂದಿಸಿದರು.ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.</p>.<p class="Briefhead"><strong>ಬಿ️ಜೆಪಿ ಕಾರ್ಯಾಲ️ಯ:</strong></p>.<p>ಸಂವಿಧಾನ ದಿನದ ಅಂಗವಾಗಿ ನಗರದ ಬಿ️ಜೆಪಿ ಜಿಲ್ಲಾ ಕಾರ್ಯಾಲ️ಯದಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಬಿ️ಜೆಪಿ ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲ️ರೆಡ್ಡಿ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ, ಮಾತನಾಡಿದರು.</p>.<p>ಈವೇಳೆನಗರಸಭೆ ಸದಸ್ಯರಾದ ಹನುಮಂತ ಇಟಗಿ, ಮಾರುತಿ ಕಲಾಲ, ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮನೋಹರ್ ಪವರ್, ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಸುರೇಶ್ ಚಾವ್ಹಾಣ, ಶಿವರಾಜ ದಾಸನಕೇರಿ, ಸುನಿತಾ ಚವ್ಹಾಣ್, ಚಂದ್ರ ಮುಂಡರಗಿ ಇದ್ದರು.</p>.<p class="Briefhead">ನ್ಯೂ ಕನ್ನಡ ಪದವಿ ಪೂರ್ವ ಕಾಲೇಜು:</p>.<p>ನಗರದ ನ್ಯೂ ಕನ್ನಡ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಂ.ಕೆ.ಬೀರನೂರು ನುಡಿದರು.</p>.<p>ಉಪನ್ಯಾಸಕ ಮಲ್ಲಿಕಾರ್ಜುನ ಅಂಗಡಿ ಸಂವಿಧಾನದ ಪೀಠಿಕೆ ಓದಿದರು. ಕಾಲೇಜಿನ ಪ್ರಾಚಾರ್ಯ ವೆಂಕಟರಾವ್ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು.<br />ಉಪನ್ಯಾಸಕರಾದ ರಘುನಾಥರೆಡ್ಡಿ ಪಾಟೀಲ, ಪ್ರಕಾಶ ರೆಡ್ಡಿ, ಅಶೋಕ ಅವಂಟಿ, ರೀನಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>