ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಿಂತನಹಳ್ಳಿ ಗ್ರಾಮದಲ್ಲಿ ಶನಿವಾರ ಕಲುಷಿತ ನೀರು ಸೇವಿಸಿ 95 ಜನ ಅಸ್ವಸ್ಥರಾಗಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದ ಪುರುಷರು, ಮಹಿಳೆಯರು, ಚಿಕ್ಕಮಕ್ಕಳು ಸೇರಿ 95 ಜನರು ಜನರು ಅಸ್ವಸ್ಥರಾಗಿದ್ದಾರೆ. ಈಗಾಗಲೇ 39 ಜನ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 14, ಕಂದಕೂರ ಆಸ್ಪತ್ರೆಯಲ್ಲಿ 7, ಚಿಂತನಹಳ್ಳಿ ಶಾಲೆಯಲ್ಲಿ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ.
‘ಕಲುಷಿತ ನೀರು ಸೇವಿಸಿ ವಾಂತಿ ಬೇಧಿಯಿಂದ ಬಳಲುತ್ತಿದ್ದು, ಗ್ರಾಮಕ್ಕೆ ಭೇಟಿ ನೀಡಿ ನೀರು ಪರಿಶೀಲನೆ ಮಾಡಲಾಗಿದೆ. ಗ್ರಾಮ ಪಂಚಾಯಿತಿಅಧಿಕಾರಿಗಳಿಗೆಸ್ವಚ್ಛತೆ ಕಾಪಾಡಿಕೊಳ್ಳಿ’ ಎಂದು ನಿರ್ದೇಶನ ನೀಡಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.