ಸೈದಾಪುರ (ಯಾದಗಿರಿ ಜಿಲ್ಲೆ): ಸಮೀಪದ ನೀಲಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದ ಜನರ ಬಲವಂತದ ಮತಾಂತರಕ್ಕೆ ಯತ್ನಿಸಿದ ಆರೋಪದಡಿ ನಾಲ್ವರನ್ನು ಸೈದಾಪುರ ಪೊಲೀಸರು ಬಂಧಿಸಿದ್ದಾರೆ.
‘ಕ್ರೈಸ್ತ ಪಾದ್ರಿ ಜೇಮ್ಸ್ ಡೇವಿಡ್ ದಾಸ್ ಮಾಧ್ವಾರ, ಶಾಂತರಾಜ ಜೇಮ್ಸ್ ದಾಸ್, ನೀಲಮ್ಮ ಜೇಮ್ಸ್ದಾಸ್, ಮಾಳಮ್ಮ ರಾಘವೇಂದ್ರ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಸಿಪಿಐ ವಿಜಯ ಕುಮಾರ ತಿಳಿಸಿದ್ದಾರೆ.
ಆರೋಪಿಗಳು ಭಾನುವಾರ (ಸೆ.26)ರಂದು ನೀಲಹಳ್ಳಿ ಗ್ರಾಮದಲ್ಲಿ ಮತಾಂತರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ನರಸಪ್ಪ ಭೀಮರಾಯ ಜೇಗರ ದೂರು ನೀಡಿದ್ದರು ಎಂದು ಪಿಎಸ್ಐ ಭೀಮರಾಯ ಬಂಕ್ಲಿ ತಿಳಿಸಿದ್ದಾರೆ.