<p class="rtejustify"><strong>ಯಾದಗಿರಿ:</strong> ಜಿಲ್ಲೆಯ ವಡಗೇರಾ ತಾಲ್ಲೂಕಿನ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರಿಗೆ ₹ 36.39 ಕೋಟಿ ಬಾಕಿ ಇದ್ದು, ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಪಾಟೀಲ ಮದ್ದರಕಿ ಆಗ್ರಹಿಸಿದರು.</p>.<p class="rtejustify">ಕಳೆದ 8 ತಿಂಗಳಿಂದ ಯಾದಗಿರಿ, ಕಲಬುರ್ಗಿ, ಬೀದರ್, ವಿಜಯಪುರ ಜಿಲ್ಲೆಯ ನೂರಾರು ರೈತರಿಗೆ ಕಬ್ಬಿನ ಬಾಕಿ ವಾವತಿಸಿಲ್ಲ. ಬಾಕಿ ಬಿಲ್ಗಾಗಿ ಅಧಿಕಾರಿಗಳು ಅಲೆದಾಡಿಸಿ ರೈತರಿಗೆ ನಷ್ಟವನ್ನುಂಟು ಮಾಡಿದ್ದಾರೆ ಎಂದು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p class="rtejustify">2020–21ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಯವರು 34.28 ಟನ್ ಕಬ್ಬು ನುರಿಸಿದ್ದಾರೆ. ಎಫ್ಆರ್ಪಿ ದರದಂತೆ ₹ 2,734 ಒಟ್ಟು ₹ 93.74 ಕೋಟಿ ಹಣ ಪಾವತಿಸಬೇಕಾಗಿತ್ತು. ₹ 57.35 ಕೋಟಿ ಮಾತ್ರ ಪಾವತಿಸಿದ್ದಾರೆ. ಇನ್ನೂಳಿದ ₹ 36.39 ಕೋಟಿ ಬಾಕಿ ಇದೆ. ಈ ಬಗ್ಗೆ ಕಾರ್ಖಾನೆಯ ಆಡಳಿತ ಮಂಡಳಿಯವರಿಗೆ ಕೇಳಿದರೆ ಸೂಕ್ತ ಉತ್ತರ ನೀಡುತ್ತಿಲ್ಲ. ಜಿಲ್ಲಾಡಳಿತದ ಮಾತಿಗೂ ಜಗ್ಗುತ್ತಿಲ್ಲ ಎಂದರು.</p>.<p class="rtejustify">ಎಫ್ಐಆರ್ ದಾಖಲು: ಸೋಮವಾರ ಜಿಲ್ಲಾಧಿಕಾರಿ ಬಳಿ ಬಾಕಿ ಪಾವತಿಸುವಂತೆ ಆಗ್ರಹ ಮಾಡಲಾಯಿತು. ಆದರೆ, ಕಾರ್ಖಾನೆಯವರು ಜಿಲ್ಲಾಧಿಕಾರಿ ಮಾತಿಗೆ ಬೆಲೆ ಕೊಡದ ಕಾರಣ ನಾವು ವಡಗೇರಾ ಪೊಲೀಸ್ ಠಾಣೆಯಲ್ಲಿ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲು ಮಾಡಿದ್ದೇವೆ ಎಂದು ತಿಳಿಸಿದರು.</p>.<p class="rtejustify">ಈ ಹಿಂದೆ ಹಲವಾರು ಬಾರಿ ಕಾರ್ಖಾನೆ ವಿರುದ್ಧ ಪ್ರತಿಭಟನೆ ಮಾಡಿದ್ದರೂ ಯಾವುದೇ ಬೆಲೆ ಕೊಟ್ಟಿಲ್ಲ. ಹೀಗಾಗಿ ಕೊನೆಯ ಅಸ್ತ್ರವಾಗಿ ಎಫ್ಐಆರ್ ದಾಖಲಿಸಿದ್ದೇವೆ. ಇದರ ಮೂಲಕವಾಗಿಯಾದರೂ ಕೋರ್ಟ್ ಮಧ್ಯೆ ಪ್ರವೇಶಿಸಿ ನಮಗೆ ನ್ಯಾಯ ಒದಗಿಸಿಕೊಡಲಿ ಎಂದರು.</p>.<p class="rtejustify">ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಜಿಲ್ಲಾಧ್ಯಕ್ಷ ಮಹಾವೀರ ಲಿಂಗೇರಿ, ಮಾರುತಿ ಚೂರಿ ಸೇರಿದಂತೆ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ಯಾದಗಿರಿ:</strong> ಜಿಲ್ಲೆಯ ವಡಗೇರಾ ತಾಲ್ಲೂಕಿನ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರಿಗೆ ₹ 36.39 ಕೋಟಿ ಬಾಕಿ ಇದ್ದು, ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಪಾಟೀಲ ಮದ್ದರಕಿ ಆಗ್ರಹಿಸಿದರು.</p>.<p class="rtejustify">ಕಳೆದ 8 ತಿಂಗಳಿಂದ ಯಾದಗಿರಿ, ಕಲಬುರ್ಗಿ, ಬೀದರ್, ವಿಜಯಪುರ ಜಿಲ್ಲೆಯ ನೂರಾರು ರೈತರಿಗೆ ಕಬ್ಬಿನ ಬಾಕಿ ವಾವತಿಸಿಲ್ಲ. ಬಾಕಿ ಬಿಲ್ಗಾಗಿ ಅಧಿಕಾರಿಗಳು ಅಲೆದಾಡಿಸಿ ರೈತರಿಗೆ ನಷ್ಟವನ್ನುಂಟು ಮಾಡಿದ್ದಾರೆ ಎಂದು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p class="rtejustify">2020–21ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಯವರು 34.28 ಟನ್ ಕಬ್ಬು ನುರಿಸಿದ್ದಾರೆ. ಎಫ್ಆರ್ಪಿ ದರದಂತೆ ₹ 2,734 ಒಟ್ಟು ₹ 93.74 ಕೋಟಿ ಹಣ ಪಾವತಿಸಬೇಕಾಗಿತ್ತು. ₹ 57.35 ಕೋಟಿ ಮಾತ್ರ ಪಾವತಿಸಿದ್ದಾರೆ. ಇನ್ನೂಳಿದ ₹ 36.39 ಕೋಟಿ ಬಾಕಿ ಇದೆ. ಈ ಬಗ್ಗೆ ಕಾರ್ಖಾನೆಯ ಆಡಳಿತ ಮಂಡಳಿಯವರಿಗೆ ಕೇಳಿದರೆ ಸೂಕ್ತ ಉತ್ತರ ನೀಡುತ್ತಿಲ್ಲ. ಜಿಲ್ಲಾಡಳಿತದ ಮಾತಿಗೂ ಜಗ್ಗುತ್ತಿಲ್ಲ ಎಂದರು.</p>.<p class="rtejustify">ಎಫ್ಐಆರ್ ದಾಖಲು: ಸೋಮವಾರ ಜಿಲ್ಲಾಧಿಕಾರಿ ಬಳಿ ಬಾಕಿ ಪಾವತಿಸುವಂತೆ ಆಗ್ರಹ ಮಾಡಲಾಯಿತು. ಆದರೆ, ಕಾರ್ಖಾನೆಯವರು ಜಿಲ್ಲಾಧಿಕಾರಿ ಮಾತಿಗೆ ಬೆಲೆ ಕೊಡದ ಕಾರಣ ನಾವು ವಡಗೇರಾ ಪೊಲೀಸ್ ಠಾಣೆಯಲ್ಲಿ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲು ಮಾಡಿದ್ದೇವೆ ಎಂದು ತಿಳಿಸಿದರು.</p>.<p class="rtejustify">ಈ ಹಿಂದೆ ಹಲವಾರು ಬಾರಿ ಕಾರ್ಖಾನೆ ವಿರುದ್ಧ ಪ್ರತಿಭಟನೆ ಮಾಡಿದ್ದರೂ ಯಾವುದೇ ಬೆಲೆ ಕೊಟ್ಟಿಲ್ಲ. ಹೀಗಾಗಿ ಕೊನೆಯ ಅಸ್ತ್ರವಾಗಿ ಎಫ್ಐಆರ್ ದಾಖಲಿಸಿದ್ದೇವೆ. ಇದರ ಮೂಲಕವಾಗಿಯಾದರೂ ಕೋರ್ಟ್ ಮಧ್ಯೆ ಪ್ರವೇಶಿಸಿ ನಮಗೆ ನ್ಯಾಯ ಒದಗಿಸಿಕೊಡಲಿ ಎಂದರು.</p>.<p class="rtejustify">ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಜಿಲ್ಲಾಧ್ಯಕ್ಷ ಮಹಾವೀರ ಲಿಂಗೇರಿ, ಮಾರುತಿ ಚೂರಿ ಸೇರಿದಂತೆ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>