ಟ್ರಸ್ಟ್ನ ಉದ್ದೇಶವು ಜಿಲ್ಲಾ ಖನಿಜ ಪ್ರತಿಷ್ಠಾನ ಫಂಡ್ನಿಂದ ಗಣಿಬಾಧಿತ ಪ್ರದೇಶಗಳಿಗೆ ಗಣಿಗುತ್ತಿಗೆದಾರರಿಂದ ಪ್ರತ್ಯೇಕವಾಗಿ ಸಂಗ್ರಹಣೆ ಮಾಡಿದ ಹಣದಿಂದ ಮೂಲಸೌಕರ್ಯಗಳಾದ ಶಿಕ್ಷಣ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ನಿರ್ಮಾಣ, ಆರೋಗ್ಯ ತಪಾಸಣೆ, ಮಾಲಿನ್ಯ ನಿಯಂತ್ರಣ ಪರೀಕ್ಷೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರ ಕಲ್ಯಾಣಕ್ಕಾಗಿ ಮೀಸಲಿಡುವುದಾಗಿದೆ. ಆದರೆ, ಈ ಬಾರಿ ಕೊರೊನಾ ನಿಯಂತ್ರಣಕ್ಕೆ ಅನುದಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.