ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಜಿಲ್ಲೆಯ ಎಲ್ಲಾ 21 ವರದಿ ನೆಗೆಟಿವ್

ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆ ಇಲ್ಲ
Last Updated 6 ಏಪ್ರಿಲ್ 2020, 15:01 IST
ಅಕ್ಷರ ಗಾತ್ರ

ಯಾದಗಿರಿ: 'ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇಲ್ಲಿಯವರೆಗೆ ಕಳುಹಿಸಿದ್ದ ಒಟ್ಟು 21 ಮಾದರಿಗಳ ಪೈಕಿ ಬಾಕಿಯಿದ್ದ 5 ಮಾದರಿಗಳ ವರದಿ ಕೂಡ ಸೋಮವಾರ ನೆಗೆಟಿವ್ ಬಂದಿವೆ' ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ತಿಳಿಸಿದ್ದಾರೆ.

'ಜಿಲ್ಲೆಯಿಂದ ಕಳುಹಿಸಿದ್ದ 21 ಮಾದರಿಗಳ ಪೈಕಿ ನಿಜಾಮುದ್ದೀನ್ ತಬ್ಲೀಗಿ ಮರ್ಕಜ್ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಗೆ ವಾಪಸ್ಸಾದ 5 ಜನರ ಗಂಟಲಿನ ದ್ರಾವಣವನ್ನು ಎರಡು ಬಾರಿ ಕೋವಿಡ್-19 ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಎರಡು ಬಾರಿಯೂ ಕಲಬುರ್ಗಿ ಜಿಮ್ಸ್ ಆಸ್ಪತ್ರೆಯಿಂದ ನೆಗೆಟಿವ್ ವರದಿ ಬಂದಿವೆ' ಎಂದು ಮಾಹಿತಿ ನೀಡಿದ್ದಾರೆ.

'ಅರಕೇರಾ (ಕೆ) ಹಾಸ್ಟೆಲ್‍ನ ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ 24 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ' ಎಂದು ತಿಳಿಸಿದ್ದಾರೆ.

ಹೋಮ್ ಕ್ವಾರಂಟೈನ್ ನಲ್ಲಿ 44 ಜನ: ಯಾದಗಿರಿ ತಾಲ್ಲೂಕಿನಲ್ಲಿ 30 ಜನ, ಶಹಾಪುರ ತಾಲ್ಲೂಕಿನಲ್ಲಿ 19 ಹಾಗೂ ಸುರಪುರ ತಾಲ್ಲೂಕಿನಲ್ಲಿ 22 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 71 ಜನ ವಿದೇಶಗಳಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ. ಇವರಿಗೆ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. 71 ಜನರ ಪೈಕಿ ಒಟ್ಟು 27 ಜನ 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದು, ಬಾಕಿ 44 ಜನರನ್ನು ಅವರ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸೇವೆ ನೀಡಿ ಇಲ್ಲದಿದ್ದರೆ ಲೈಸೆನ್ಸ್ ರದ್ದು: ಎಡಿಸಿ ಎಚ್ಚರಿಕೆ
ಯಾದಗಿರಿ: ಕೋವಿಡ್-19 ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಗೃಹ ಸಚಿವಾಲಯ ಖಾಸಗಿ ಆಸ್ಪತ್ರೆಗಳು, ಅವುಗಳ ಉತ್ಪಾದನೆ ಸೇರಿದಂತೆ ಎಲ್ಲಾ ಸಂಬಂಧಿತ ವೈದ್ಯಕೀಯ ಸಂಸ್ಥೆಗಳು ಮತ್ತು ಸಾರ್ವಜನಿಕ ಹಾಗೂ ಖಾಸಗಿ ವಲಯದ ವಿತರಣಾ ಘಟಕಗಳಾದ ಔಷಧಾಲಯಗಳು, ರಾಸಾಯನ ಶಾಸ್ತ್ರಜ್ಞ ಮತ್ತು ವೈದ್ಯಕೀಯ ಸಲಕರಣೆಗಳ ಅಂಗಡಿಗಳು, ಪ್ರಯೋಗಾಲಯಗಳು, ಚಿಕಿತ್ಸಾಲಯಗಳು, ನರ್ಸಿಂಗ್ ಹೋಂಗಳು, ಆಂಬುಲೆನ್ಸ್ ಸೇರಿದಂತೆ ಇತ್ಯಾದಿಗಳು ಕಾರ್ಯನಿರ್ವಹಿಸಬೇಕು ಎಂದು ಆದೇಶಿಸಿದೆ.

ಆದರೆ, ಕೆಲವು ಖಾಸಗಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಾರ್ವಜನಿಕರು ದೂರುಗಳನ್ನು ನೀಡಿರುತ್ತಾರೆ. ಆದ ಕಾರಣ ಸಾರ್ವಜನಿಕರ ಹಿತದೃಷ್ಟಿಯಿಂದ, ಅವರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳು ಹಾಗೂ ಔಷಧಾಲಯಗಳು ತೆರೆದು ಕಾರ್ಯನಿರ್ವಹಿಸುವಂತೆ ತಿಳಿಸಲಾಗಿದೆ. ಒಂದು ವೇಳೆ ಬಾಗಿಲು ತೆರೆದು ಕಾರ್ಯನಿರ್ವಹಿಸದೇ ಇದ್ದಲ್ಲಿ ಆ ಆಸ್ಪತ್ರೆಗಳ ಲೈಸೆನ್ಸ್ ರದ್ದು ಪಡಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT