<p><strong>ಯಾದಗಿರಿ: </strong>ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದುವರಮಹಾಲಕ್ಷ್ಮಿ ಪೂಜೆಗೆ ಕರಿನೆರಳು ಬಿದ್ದಿದೆ. ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಬಂದಿದೆ.ರೈತಾಪಿ ವರ್ಗ ವಿವಿಧ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದು, ಗುರುವಾರ ನಗರದ ಗಾಂಧಿ ವೃತ್ತದ ಮಾರುಕಟ್ಟೆಯಲ್ಲಿ ಜನ ಜಂಗುಳಿ ಕಂಡು ಬರಲಿಲ್ಲ.</p>.<p>ಪೂಜೆಗೆ ಬೇಕಾಗಿರುವ ಅಗತ್ಯ ವಸ್ತುಗಳ ಖರೀದಿಯಲ್ಲಿ ಹೆಚ್ಚಿನ ಜನಸಂಖ್ಯೆ ಕಂಡು ಬರಲಿಲ್ಲ. ಈ ಬಾರಿ ಲಾಕ್ಡೌನ್ ವೇಳೆ ಹೂವಿನ ವ್ಯಾಪಾರಿಗಳು ನಷ್ಟ ಉಂಟಾಗಿದ್ದರಿಂದ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಆದರೆ, ಗ್ರಾಹಕರಿಗಾಗಿಕಾದು ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಒಂದು ತೆಂಗಿನ ಕಾಯಿ ₹15ರಿಂದ 20 ಮಾರಾಟವಾಗುತ್ತಿತ್ತು. ಒಂದು ಮೊಳ ಹೂ ₹50ರಿಂದ 200 ರ ತನಕ ಬೆಲೆ ಇದೆ. ಹಲವಾರು ಅಂಗಡಿಗಳ ಮಾಲೀಕರು ಗ್ರಾಹಕರಿಲ್ಲದೆ ಖಾಲಿ ಕುಳಿತ್ತಿದ್ದರು. ಈ ಬಗ್ಗೆ ಹೂವಿನ ವ್ಯಾಪಾರಿ ಮಹಮದ್ ಪ್ರತಿಕ್ರಿಯಿಸಿ, ಈ ಬಾರಿ ಹಬ್ಬದ ಸಂಭ್ರಮ ಕೊರೊನಾ ಕಸಿದುಕೊಂಡಿದೆ. ಹಳ್ಳಿಗಳಿಂದ ಜನರು ಖರೀದಿಗೆ ಬಂದಿಲ್ಲ. ನಗರದ ಪ್ರದೇಶದಲ್ಲಿಯೂ ಹೆಚ್ಚಿನ ಜನಸಂಖ್ಯೆ ಬಂದಿಲ್ಲ. ಇದರಿಂದ ವ್ಯಾಪಾರವೇ ಇಲ್ಲ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದುವರಮಹಾಲಕ್ಷ್ಮಿ ಪೂಜೆಗೆ ಕರಿನೆರಳು ಬಿದ್ದಿದೆ. ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಬಂದಿದೆ.ರೈತಾಪಿ ವರ್ಗ ವಿವಿಧ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದು, ಗುರುವಾರ ನಗರದ ಗಾಂಧಿ ವೃತ್ತದ ಮಾರುಕಟ್ಟೆಯಲ್ಲಿ ಜನ ಜಂಗುಳಿ ಕಂಡು ಬರಲಿಲ್ಲ.</p>.<p>ಪೂಜೆಗೆ ಬೇಕಾಗಿರುವ ಅಗತ್ಯ ವಸ್ತುಗಳ ಖರೀದಿಯಲ್ಲಿ ಹೆಚ್ಚಿನ ಜನಸಂಖ್ಯೆ ಕಂಡು ಬರಲಿಲ್ಲ. ಈ ಬಾರಿ ಲಾಕ್ಡೌನ್ ವೇಳೆ ಹೂವಿನ ವ್ಯಾಪಾರಿಗಳು ನಷ್ಟ ಉಂಟಾಗಿದ್ದರಿಂದ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಆದರೆ, ಗ್ರಾಹಕರಿಗಾಗಿಕಾದು ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಒಂದು ತೆಂಗಿನ ಕಾಯಿ ₹15ರಿಂದ 20 ಮಾರಾಟವಾಗುತ್ತಿತ್ತು. ಒಂದು ಮೊಳ ಹೂ ₹50ರಿಂದ 200 ರ ತನಕ ಬೆಲೆ ಇದೆ. ಹಲವಾರು ಅಂಗಡಿಗಳ ಮಾಲೀಕರು ಗ್ರಾಹಕರಿಲ್ಲದೆ ಖಾಲಿ ಕುಳಿತ್ತಿದ್ದರು. ಈ ಬಗ್ಗೆ ಹೂವಿನ ವ್ಯಾಪಾರಿ ಮಹಮದ್ ಪ್ರತಿಕ್ರಿಯಿಸಿ, ಈ ಬಾರಿ ಹಬ್ಬದ ಸಂಭ್ರಮ ಕೊರೊನಾ ಕಸಿದುಕೊಂಡಿದೆ. ಹಳ್ಳಿಗಳಿಂದ ಜನರು ಖರೀದಿಗೆ ಬಂದಿಲ್ಲ. ನಗರದ ಪ್ರದೇಶದಲ್ಲಿಯೂ ಹೆಚ್ಚಿನ ಜನಸಂಖ್ಯೆ ಬಂದಿಲ್ಲ. ಇದರಿಂದ ವ್ಯಾಪಾರವೇ ಇಲ್ಲ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>