<p><strong>ಸುರಪುರ: </strong>ಕೃಷ್ಣಾ ಭಾಗ್ಯ ಜಲ ನಿಗಮದ ವಿವಿಧ ಯೋಜನೆಗಳಡಿ ₹1,136 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಒಕ್ಕೂಟದ ಮುಖಂಡರು ಗುರುವಾರ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.</p>.<p>ಒಕ್ಕೂಟದ ರಾಜ್ಯ ಘಟಕ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ‘2017-18 ಮತ್ತು 19-20ನೇ ಸಾಲಿನ ಎಎಸ್ಪಿ, ಟಿಎಸ್ಪಿ ಯೋಜನೆಯಡಿ ಮೀಸಲಿಟ್ಟ ₹300 ಕೋಟಿ ಅನುದಾನವನ್ನು ಕರ್ತವ್ಯದಲ್ಲಿದ್ದ ಅಧಿಕಾರಿಗಳು ಯಾವುದೇ ಕಾಮಗಾರಿ ಮಾಡದೆ ಲೂಟಿ ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<p>‘ಇಲಾಖೆ ವ್ಯಾಪ್ತಿಯ ಉಪ ವಿಭಾಗಗಳಲ್ಲಿ ಚೆಕ್ ಡ್ಯಾಂ ನಿರ್ಮಿಸದೆ ಬೋಗಸ್ ಬಿಲ್ ಎತ್ತಲಾಗಿದೆ. 2019-20 ಸಾಲಿನಲ್ಲಿ ಬಳಕೆ ಆಗದೆ ಉಳಿದಿದ್ದ ₹401.77 ಕೋಟಿ ಹಾಗೂ 2020-21 ಸಾಲಿನಲ್ಲಿ ಬಿಡುಗಡೆಯಾಗಿದ್ದ ₹384.86 ಕೋಟಿ ಅನುದಾನವನ್ನು ಎಸ್ಸಿ ಮತ್ತು ಎಸ್ಟಿ ಸಂಬಂಧಪಡದ ಇತರೆ ಕಾಮಗಾರಿಗಳ ಹೆಸರಿನಲ್ಲಿ ವರ್ಗಾಯಿಸಿಕೊಂಡಿದ್ದಾರೆ’ ಎಂದು ದೂರಿದರು.</p>.<p>ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ, ಪುನರ್ ವಸತಿ ಹಾಗೂ ಪುನರ್ ನಿರ್ಮಾಣದ ಹೆಸರಲ್ಲಿ ಸಂಪೂರ್ಣ ಬೋಗಸ್ ಮಾಡಿದ್ದಾರೆ. ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ಮತ್ತು ಇತರೆ ಹೆಡ್ಗಳಲ್ಲಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಕುರಿತ ತನಿಖೆಗೆ ಜಲಸಂಪನ್ಮೂಲ ಇಲಾಖೆ ವೀಕ್ಷಣ ದಳಕ್ಕೆ ಆದೇಶಿಸಿದೆ. ಇದುವರಿಗೂ ತನಿಖೆಯೇ ನಡೆದಿಲ್ಲ ಎಂದು ಆಪಾದಿಸಿದರು.</p>.<p>‘ವೀಕ್ಷಣಾ ದಳಕ್ಕೆ ವಹಿಸಿರುವ ತನಿಖೆಯನ್ನು ಕೈ ಬಿಟ್ಟು ಲೋಕಾಯುಕ್ತರಿಗೆ ವಹಿಸಬೇಕು. ಸೇವೆಯಿಂದ ನಿವೃತ್ತಗೊಂಡ ಅಂದಿನ ವ್ಯವಸ್ಥಾಪಕ ನಿರ್ದೇಶಕರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದರು.</p>.<p>ತಹಶೀಲ್ದಾರ್ ಸಿಬ್ಬಂದಿಗೆ ಮನವಿ ಸಲ್ಲಿಸಿದರು.</p>.<p>ಧರ್ಮಣ್ಣ ಹುಲಿಮನಿ, ಕೃಷ್ಣಾ ಕಕ್ಕೇರಾ, ಗೋಣೇಶ, ಕೇಶವ ನಾಯಕ, ಹಣಮಂತ್ರಾಯ, ದೇವಪ್ಪ ರತ್ತಾಳ, ದೇವಿಂದ್ರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ: </strong>ಕೃಷ್ಣಾ ಭಾಗ್ಯ ಜಲ ನಿಗಮದ ವಿವಿಧ ಯೋಜನೆಗಳಡಿ ₹1,136 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಒಕ್ಕೂಟದ ಮುಖಂಡರು ಗುರುವಾರ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.</p>.<p>ಒಕ್ಕೂಟದ ರಾಜ್ಯ ಘಟಕ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ‘2017-18 ಮತ್ತು 19-20ನೇ ಸಾಲಿನ ಎಎಸ್ಪಿ, ಟಿಎಸ್ಪಿ ಯೋಜನೆಯಡಿ ಮೀಸಲಿಟ್ಟ ₹300 ಕೋಟಿ ಅನುದಾನವನ್ನು ಕರ್ತವ್ಯದಲ್ಲಿದ್ದ ಅಧಿಕಾರಿಗಳು ಯಾವುದೇ ಕಾಮಗಾರಿ ಮಾಡದೆ ಲೂಟಿ ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<p>‘ಇಲಾಖೆ ವ್ಯಾಪ್ತಿಯ ಉಪ ವಿಭಾಗಗಳಲ್ಲಿ ಚೆಕ್ ಡ್ಯಾಂ ನಿರ್ಮಿಸದೆ ಬೋಗಸ್ ಬಿಲ್ ಎತ್ತಲಾಗಿದೆ. 2019-20 ಸಾಲಿನಲ್ಲಿ ಬಳಕೆ ಆಗದೆ ಉಳಿದಿದ್ದ ₹401.77 ಕೋಟಿ ಹಾಗೂ 2020-21 ಸಾಲಿನಲ್ಲಿ ಬಿಡುಗಡೆಯಾಗಿದ್ದ ₹384.86 ಕೋಟಿ ಅನುದಾನವನ್ನು ಎಸ್ಸಿ ಮತ್ತು ಎಸ್ಟಿ ಸಂಬಂಧಪಡದ ಇತರೆ ಕಾಮಗಾರಿಗಳ ಹೆಸರಿನಲ್ಲಿ ವರ್ಗಾಯಿಸಿಕೊಂಡಿದ್ದಾರೆ’ ಎಂದು ದೂರಿದರು.</p>.<p>ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ, ಪುನರ್ ವಸತಿ ಹಾಗೂ ಪುನರ್ ನಿರ್ಮಾಣದ ಹೆಸರಲ್ಲಿ ಸಂಪೂರ್ಣ ಬೋಗಸ್ ಮಾಡಿದ್ದಾರೆ. ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ಮತ್ತು ಇತರೆ ಹೆಡ್ಗಳಲ್ಲಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಕುರಿತ ತನಿಖೆಗೆ ಜಲಸಂಪನ್ಮೂಲ ಇಲಾಖೆ ವೀಕ್ಷಣ ದಳಕ್ಕೆ ಆದೇಶಿಸಿದೆ. ಇದುವರಿಗೂ ತನಿಖೆಯೇ ನಡೆದಿಲ್ಲ ಎಂದು ಆಪಾದಿಸಿದರು.</p>.<p>‘ವೀಕ್ಷಣಾ ದಳಕ್ಕೆ ವಹಿಸಿರುವ ತನಿಖೆಯನ್ನು ಕೈ ಬಿಟ್ಟು ಲೋಕಾಯುಕ್ತರಿಗೆ ವಹಿಸಬೇಕು. ಸೇವೆಯಿಂದ ನಿವೃತ್ತಗೊಂಡ ಅಂದಿನ ವ್ಯವಸ್ಥಾಪಕ ನಿರ್ದೇಶಕರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದರು.</p>.<p>ತಹಶೀಲ್ದಾರ್ ಸಿಬ್ಬಂದಿಗೆ ಮನವಿ ಸಲ್ಲಿಸಿದರು.</p>.<p>ಧರ್ಮಣ್ಣ ಹುಲಿಮನಿ, ಕೃಷ್ಣಾ ಕಕ್ಕೇರಾ, ಗೋಣೇಶ, ಕೇಶವ ನಾಯಕ, ಹಣಮಂತ್ರಾಯ, ದೇವಪ್ಪ ರತ್ತಾಳ, ದೇವಿಂದ್ರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>