ಕೆಂಭಾವಿ: ಹತ್ತಿ ಬೆಲೆ ಕುಸಿತದಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಪ್ರಸಕ್ತ ವರ್ಷ ಬರಗಾಲ ಆವರಿಸಿದ್ದರೂ ಮಳೆಯಾಧಾರಿತ ಕೆಲವು ಭಾಗಗಳಲ್ಲಿ ರೈತರು ಅಲ್ಪ ಸ್ವಲ್ಪ ಹತ್ತಿ ಬೆಳೆದಿದ್ದರು. ಆದರೆ ಕಳೆದ ಒಂದು ವಾರದಿಂದ ಧಾರಣೆ ಕಡಿಮೆಯಾಗಿದ್ದು ಅನಿವಾರ್ಯವಾಗಿ ಹತ್ತಿ ಮೂಟೆಗಳನ್ನು ತಮ್ಮ ಜಮೀನುಗಳಲ್ಲಿ ಇಟ್ಟು ಕಾಯುವ ಪರಿಸ್ಥಿತಿ ಎದುರಾಗಿದೆ.