ಯಾದಗಿರಿ: ವ್ಯಕ್ತಿಯ ಮೇಲೆ ಗಂಭೀರ ಹಲ್ಲೆ ನಡೆಸಿ ಗಾಯಗೊಳಿಸಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣವನ್ನು ವಿಚಾರಣೆ ನಡೆಸಿ ಹೆಚ್ಚುವರಿ ನ್ಯಾಯಾಧೀಶ ಕಾಡಪ್ಪ ಹುಕ್ಕೇರಿ ಆರೋಪಿಗೆ ಆರು ತಿಂಗಳು ಕಾರಾಗೃಹ ಶಿಕ್ಷೆ ಮತ್ತು ₹ 6 ಸಾವಿರ ದಂಡು ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.
ಸೈದಾಪುರ ಹೋಬಳಿಯ ನೀಲನಹಳ್ಳಿ ಗ್ರಾಮದ ಆರೋಪಿ ಮಲ್ಲಪ್ಪ ಶಿಕ್ಷೆಗೆ ಗುರಿಯಾಗಿದ್ದಾರೆ. ವ್ಯಕ್ತಿ ಮೇಲೆ ಮಂಜಪ್ಪ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಬಂಧಿಸಿದಂತೆ ತಾಲ್ಲೂಕಿನ ಸೈದಾಪುರ ಪೊಲೀಸ್ ಠಾಣೆಯಲ್ಲಿ ಜನವರಿ, 2017ರಲ್ಲಿ ಪ್ರಕರಣ ದಾಖಲಾಗಿತ್ತು.