<p>ಯಾದಗಿರಿ: ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಪ್ರತಿಷ್ಠಾಪನೆ ಮಾಡಿದ್ದ ಹಿಂದು ಗಣಪತಿ ವಿಸರ್ಜನೆ ವೇಳೆ ಸಾವಿರಾರು ಜನರು ಸೇರಿ ಕೋವಿಡ್ ನಿಯಮ ಉಲ್ಲಂಘಿಸಿರುವುದು ಕಂಡುಬಂತು.</p>.<p>ಗಣೇಶ ವಿಸರ್ಜನೆ ಸಂಭ್ರಮದಲ್ಲಿ ಸಾವಿರಾರು ಜನ ಸೇರಿ ಅನುಮತಿ ಇಲ್ಲದಿದ್ದರೂ ಡಿಜೆ ಹಚ್ಚಿ ಜಿಲ್ಲಾಡಳಿತ ಆದೇಶ ಉಲ್ಲಂಘಿಸಿದ್ದಾರೆ.</p>.<p>ಗಣೇಶ ಮೂರ್ತಿ ವಿಸರ್ಜನೆಗೆ ಮಾತ್ರ ಜಿಲ್ಲಾಡಳಿತ ಅನುಮತಿ ನೀಡಿದೆ. ಆದರೆ, ಆದೇಶಕ್ಕೆ ಬೆಲೆ ಕೊಡದೆ ಅದ್ಧೂರಿ ಮೆರವಣಿಗೆ ಮಾಡಿ ಡಿಜೆ ಹಚ್ಚಿ ಯುವಕರು ನೃತ್ಯ ಮಾಡಿದ್ದಾರೆ.</p>.<p>ನಗರದ ಚಿತ್ತಾಪುರ ರಸ್ತೆಯಿಂದ ಮೆರವಣಿಗೆ ಆರಂಭವಾಗಿ ಸುಭಾಷ ವೃತ್ತ, ಶಾಸ್ತ್ರಿ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಚಕ್ರಕಟ್ಟ, ಮೈಲಾಪುರ ಅಗಸಿ ಮಾರ್ಗವಾಗಿ ದೊಡ್ಡ ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡಲಾಯಿತು.</p>.<p>ಜಿಲ್ಲಾಡಳಿತ ಕೇವಲ ಐದು ದಿನ ಗಣೇಶ ಪ್ರತಿಷ್ಠಾಪನೆಗೆ ಅನು ಮತಿ ನೀಡಿತ್ತು. ಆದರೆ, 21 ದಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಗುರುವಾರ ವಿಸರ್ಜನೆ ಮಾಡಲಾ ಯಿತು. ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧ ಕಡೆಯಿಂದ ಯುವಕರು ಭಾಗಿಯಾಗಿದ್ದಾರೆ.</p>.<p>ಮಹಾಗಣಪತಿಯನ್ನು ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ಮಾಡಲಾಯಿತು. ಸ್ಥಳದಲ್ಲಿ ಪೊಲೀಸರು ಇದ್ದರೂ ಮುಖ ಪ್ರೇಕ್ಷಕರಾಗಿದ್ದರು.</p>.<p>‘ಹಿಂದು ಮಹಾಗಣಪತಿ ವಿಸರ್ಜನೆ ವೇಳೆ ಕೋವಿಡ್ ನಿಯಮ ಮೀರಿ ಡಿಜೆ, ಪರಸ್ಪರ ಅಂತರವಿಲ್ಲದೇ, ಮಾಸ್ಕ್ ಧರಿಸದೇ ಮೆರವಣಿಗೆ ಅಯೋಜಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಪ್ರತಿಷ್ಠಾಪನೆ ಮಾಡಿದ್ದ ಹಿಂದು ಗಣಪತಿ ವಿಸರ್ಜನೆ ವೇಳೆ ಸಾವಿರಾರು ಜನರು ಸೇರಿ ಕೋವಿಡ್ ನಿಯಮ ಉಲ್ಲಂಘಿಸಿರುವುದು ಕಂಡುಬಂತು.</p>.<p>ಗಣೇಶ ವಿಸರ್ಜನೆ ಸಂಭ್ರಮದಲ್ಲಿ ಸಾವಿರಾರು ಜನ ಸೇರಿ ಅನುಮತಿ ಇಲ್ಲದಿದ್ದರೂ ಡಿಜೆ ಹಚ್ಚಿ ಜಿಲ್ಲಾಡಳಿತ ಆದೇಶ ಉಲ್ಲಂಘಿಸಿದ್ದಾರೆ.</p>.<p>ಗಣೇಶ ಮೂರ್ತಿ ವಿಸರ್ಜನೆಗೆ ಮಾತ್ರ ಜಿಲ್ಲಾಡಳಿತ ಅನುಮತಿ ನೀಡಿದೆ. ಆದರೆ, ಆದೇಶಕ್ಕೆ ಬೆಲೆ ಕೊಡದೆ ಅದ್ಧೂರಿ ಮೆರವಣಿಗೆ ಮಾಡಿ ಡಿಜೆ ಹಚ್ಚಿ ಯುವಕರು ನೃತ್ಯ ಮಾಡಿದ್ದಾರೆ.</p>.<p>ನಗರದ ಚಿತ್ತಾಪುರ ರಸ್ತೆಯಿಂದ ಮೆರವಣಿಗೆ ಆರಂಭವಾಗಿ ಸುಭಾಷ ವೃತ್ತ, ಶಾಸ್ತ್ರಿ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಚಕ್ರಕಟ್ಟ, ಮೈಲಾಪುರ ಅಗಸಿ ಮಾರ್ಗವಾಗಿ ದೊಡ್ಡ ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡಲಾಯಿತು.</p>.<p>ಜಿಲ್ಲಾಡಳಿತ ಕೇವಲ ಐದು ದಿನ ಗಣೇಶ ಪ್ರತಿಷ್ಠಾಪನೆಗೆ ಅನು ಮತಿ ನೀಡಿತ್ತು. ಆದರೆ, 21 ದಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಗುರುವಾರ ವಿಸರ್ಜನೆ ಮಾಡಲಾ ಯಿತು. ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧ ಕಡೆಯಿಂದ ಯುವಕರು ಭಾಗಿಯಾಗಿದ್ದಾರೆ.</p>.<p>ಮಹಾಗಣಪತಿಯನ್ನು ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ಮಾಡಲಾಯಿತು. ಸ್ಥಳದಲ್ಲಿ ಪೊಲೀಸರು ಇದ್ದರೂ ಮುಖ ಪ್ರೇಕ್ಷಕರಾಗಿದ್ದರು.</p>.<p>‘ಹಿಂದು ಮಹಾಗಣಪತಿ ವಿಸರ್ಜನೆ ವೇಳೆ ಕೋವಿಡ್ ನಿಯಮ ಮೀರಿ ಡಿಜೆ, ಪರಸ್ಪರ ಅಂತರವಿಲ್ಲದೇ, ಮಾಸ್ಕ್ ಧರಿಸದೇ ಮೆರವಣಿಗೆ ಅಯೋಜಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>