<p><strong>ಯಾದಗಿರಿ</strong>: ‘ಈ ಬಾರಿ ಕೋವಿಡ್ ಕಾರಣದಿಂದ ತಮ್ಮ 67ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ’ ಎಂದು ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.</p>.<p>‘ಮಾರ್ಚ್ 28ರಂದು ತಮ್ಮ ಜನ್ಮದಿನವಿದೆ. ನಾನು ಅಧಿವೇಶನದಲ್ಲಿ ಪಾಲ್ಗೊಂಡಿದ್ದೆ. ನನಗೆ ಗೊತ್ತಿಲ್ಲದೆ ಅಭಿಮಾನಿಗಳು, ಮುಖಂಡರು ಬ್ಯಾನರ್, ಫ್ಲೆಕ್ಸ್ ಹಾಕಿದ್ದಾರೆ. ಆದರೆ, ನಾನು ಜನ್ಮದಿನವನ್ನು ರದ್ದು ಮಾಡಿದ್ದೇನೆ. ಕಳೆದ ವರ್ಷವೂ ಕೊರೊನಾ ಇದ್ದ ಕಾರಣ ಜನ್ಮದಿನ ಆಚರಿಸಿಕೊಂಡಿಲ್ಲ. ಈ ಬಾರಿಯೂ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧಾರ ಮಾಡಿದ್ದೇನೆ. ಹೀಗಾಗಿ ಅಭಿಮಾನಿಗಳು, ಮುಖಂಡರು ಯಾರೂ ನಮ್ಮನ್ನು ಸಂಪರ್ಕಿಸಬಾರದು’ ಎಂದುಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>‘ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಗುಂಪುಗೂಡದೇ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿಕೊಂಡು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಸೋಮವಾರ ನಗರಸಭೆ ಉಪಾಚುನಾವಣೆ ನಿಗದಿಯಾಗಿದೆ. ಹೋಳಿ ಹುಣ್ಣಿಮೆ ಇರುವ ಕಾರಣ ಯಾವುದೇ ಗದ್ದಲ ಗಲಾಟೆಗಳಿಗೆ ಅವಕಾಶ ನೀಡದಂತೆ ಸಂಬಂಧಿಸಿದ ಇಲಾಖೆಗಳು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಯೂಡಾ ಅಧ್ಯಕ್ಷ ಬಸವರಾಜ ಚಂಡರಿಕಿ, ಮುಖಂಡರಾದ ಸಿದ್ದನಗೌಡ ಕಾಡಂನೋರ, ಖಂಡಪ್ಪ ದಾಸನ್, ಮಾರುತಿ ಕಲಾಲ್ ಸೇರಿದಂತೆ ಹಲವಾರು ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ‘ಈ ಬಾರಿ ಕೋವಿಡ್ ಕಾರಣದಿಂದ ತಮ್ಮ 67ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ’ ಎಂದು ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.</p>.<p>‘ಮಾರ್ಚ್ 28ರಂದು ತಮ್ಮ ಜನ್ಮದಿನವಿದೆ. ನಾನು ಅಧಿವೇಶನದಲ್ಲಿ ಪಾಲ್ಗೊಂಡಿದ್ದೆ. ನನಗೆ ಗೊತ್ತಿಲ್ಲದೆ ಅಭಿಮಾನಿಗಳು, ಮುಖಂಡರು ಬ್ಯಾನರ್, ಫ್ಲೆಕ್ಸ್ ಹಾಕಿದ್ದಾರೆ. ಆದರೆ, ನಾನು ಜನ್ಮದಿನವನ್ನು ರದ್ದು ಮಾಡಿದ್ದೇನೆ. ಕಳೆದ ವರ್ಷವೂ ಕೊರೊನಾ ಇದ್ದ ಕಾರಣ ಜನ್ಮದಿನ ಆಚರಿಸಿಕೊಂಡಿಲ್ಲ. ಈ ಬಾರಿಯೂ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧಾರ ಮಾಡಿದ್ದೇನೆ. ಹೀಗಾಗಿ ಅಭಿಮಾನಿಗಳು, ಮುಖಂಡರು ಯಾರೂ ನಮ್ಮನ್ನು ಸಂಪರ್ಕಿಸಬಾರದು’ ಎಂದುಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>‘ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಗುಂಪುಗೂಡದೇ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿಕೊಂಡು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಸೋಮವಾರ ನಗರಸಭೆ ಉಪಾಚುನಾವಣೆ ನಿಗದಿಯಾಗಿದೆ. ಹೋಳಿ ಹುಣ್ಣಿಮೆ ಇರುವ ಕಾರಣ ಯಾವುದೇ ಗದ್ದಲ ಗಲಾಟೆಗಳಿಗೆ ಅವಕಾಶ ನೀಡದಂತೆ ಸಂಬಂಧಿಸಿದ ಇಲಾಖೆಗಳು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಯೂಡಾ ಅಧ್ಯಕ್ಷ ಬಸವರಾಜ ಚಂಡರಿಕಿ, ಮುಖಂಡರಾದ ಸಿದ್ದನಗೌಡ ಕಾಡಂನೋರ, ಖಂಡಪ್ಪ ದಾಸನ್, ಮಾರುತಿ ಕಲಾಲ್ ಸೇರಿದಂತೆ ಹಲವಾರು ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>