<p>ಗುರುಮಠಕಲ್: ಕೋವಿಡ್ 3ನೇ ಅಲೆ ಹಬ್ಬುವಿಕೆ ನಿಯಂತ್ರಿಸಲು ತಾಲ್ಲೂಕಿನ ಪುಟಪಾಕ ಮತ್ತು ಇಟಕಲ್ ಗೇಟ್ ಬಳಿಯ ಚೆಕ್ಪೋಸ್ಟ್ನಲ್ಲಿ ಗಡಿ ಪ್ರವೇಶಿಸುವ ಪ್ರಯಾಣಿಕರನ್ನು ಕಂದಾಯ, ಆರೋಗ್ಯ ಹಾಗೂ ಪೊಲೀಸ್ ಸಿಬ್ಬಂದಿ ಕಟ್ಟುನಿಟ್ಟಿನ ತಪಾಸಣೆ ನಡೆಸಿದರು.</p>.<p>ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರು ಲಸಿಕೆಪಡೆದ ಪ್ರಮಾಣ ಪತ್ರ ಹಾಗೂ 72 ಗಂಟೆಗಳ ಅವಧಿಯೊಳಗಿನ ನೆಗೆಟಿವ್ ವರದಿ ಹೊಂದುವುದು ಕಡ್ಡಾಯವಾಗಿದೆ.</p>.<p>ಲಸಿಕೆ ಪಡೆದ ಪ್ರಮಾಣ ಪತ್ರ ಅಥವಾ ನೆಗೆಟಿವ್ ವರದಿ ಇಲ್ಲದರನ್ನು ಮೂಗಿನ ದ್ರವದ ಮಾದರಿ ಪಡೆಯಲಾಗುತ್ತಿದೆ. ಸೋಂಕಿನ ಲಕ್ಷಣಗಳು ಕಂಡುಬಂದರೆ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದುವರೆಗಿನ ಪರೀಕ್ಷೆಗಳಲ್ಲಿ ನೆಗೆಟಿವ್ ವರದಿ ಕಂಡುಬಂದಿಲ್ಲ ಎಂದು ಆರೋಗ್ಯ ಸಿಬ್ಬಂದಿ ತಿಳಿಸಿದರು.</p>.<p>ಚೆಕ್ಪೋಸ್ಟ್ಗಳಲ್ಲಿ ತಲಾ ಒಬ್ಬ ಪೊಲೀಸ್ ಮತ್ತು ಗೃಹ ರಕ್ಷಕ ಸಿಬ್ಬಂದಿ ನಿಯೋಜಿಸಿದರೆ ಪ್ರಯಾಣಿಕರ ತಪಾಸಣೆಗೆ ಅನುಕೂಲವಾಗಲಿದೆ. ಈಗ ಜನರ ಓಡಾಟ ಕಡೆಯಿದೆ. ಒಂದು ವೇಳೆ ಹೆಚ್ಚಾದರೆ ತಪಾಸಣೆಗೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳಿದರು.</p>.<p>ಸರ್ಕಾರದ ಆದೇಶದಂತೆ ಚೆಕ್ ಪೋಸ್ಟ್ಗಳಿಗೆ ಅಗತ್ಯ ಸಿಬ್ಬಂದಿ ನಿಯೋಜಿಸಲಾಗಿದೆ. ಹೆಚ್ಚುವರಿ ಸಿಬ್ಬಂದಿಯ ನೇಮಕದ ಕುರಿತು ಮುಂದೆ ತೀರ್ಮಾನಿಸಲಾಗುವುದು ಎಂದು ತಹಶೀಲ್ದಾರ್ ಶರಣಬಸವ ರಾಣಪ್ಪ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುರುಮಠಕಲ್: ಕೋವಿಡ್ 3ನೇ ಅಲೆ ಹಬ್ಬುವಿಕೆ ನಿಯಂತ್ರಿಸಲು ತಾಲ್ಲೂಕಿನ ಪುಟಪಾಕ ಮತ್ತು ಇಟಕಲ್ ಗೇಟ್ ಬಳಿಯ ಚೆಕ್ಪೋಸ್ಟ್ನಲ್ಲಿ ಗಡಿ ಪ್ರವೇಶಿಸುವ ಪ್ರಯಾಣಿಕರನ್ನು ಕಂದಾಯ, ಆರೋಗ್ಯ ಹಾಗೂ ಪೊಲೀಸ್ ಸಿಬ್ಬಂದಿ ಕಟ್ಟುನಿಟ್ಟಿನ ತಪಾಸಣೆ ನಡೆಸಿದರು.</p>.<p>ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರು ಲಸಿಕೆಪಡೆದ ಪ್ರಮಾಣ ಪತ್ರ ಹಾಗೂ 72 ಗಂಟೆಗಳ ಅವಧಿಯೊಳಗಿನ ನೆಗೆಟಿವ್ ವರದಿ ಹೊಂದುವುದು ಕಡ್ಡಾಯವಾಗಿದೆ.</p>.<p>ಲಸಿಕೆ ಪಡೆದ ಪ್ರಮಾಣ ಪತ್ರ ಅಥವಾ ನೆಗೆಟಿವ್ ವರದಿ ಇಲ್ಲದರನ್ನು ಮೂಗಿನ ದ್ರವದ ಮಾದರಿ ಪಡೆಯಲಾಗುತ್ತಿದೆ. ಸೋಂಕಿನ ಲಕ್ಷಣಗಳು ಕಂಡುಬಂದರೆ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದುವರೆಗಿನ ಪರೀಕ್ಷೆಗಳಲ್ಲಿ ನೆಗೆಟಿವ್ ವರದಿ ಕಂಡುಬಂದಿಲ್ಲ ಎಂದು ಆರೋಗ್ಯ ಸಿಬ್ಬಂದಿ ತಿಳಿಸಿದರು.</p>.<p>ಚೆಕ್ಪೋಸ್ಟ್ಗಳಲ್ಲಿ ತಲಾ ಒಬ್ಬ ಪೊಲೀಸ್ ಮತ್ತು ಗೃಹ ರಕ್ಷಕ ಸಿಬ್ಬಂದಿ ನಿಯೋಜಿಸಿದರೆ ಪ್ರಯಾಣಿಕರ ತಪಾಸಣೆಗೆ ಅನುಕೂಲವಾಗಲಿದೆ. ಈಗ ಜನರ ಓಡಾಟ ಕಡೆಯಿದೆ. ಒಂದು ವೇಳೆ ಹೆಚ್ಚಾದರೆ ತಪಾಸಣೆಗೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳಿದರು.</p>.<p>ಸರ್ಕಾರದ ಆದೇಶದಂತೆ ಚೆಕ್ ಪೋಸ್ಟ್ಗಳಿಗೆ ಅಗತ್ಯ ಸಿಬ್ಬಂದಿ ನಿಯೋಜಿಸಲಾಗಿದೆ. ಹೆಚ್ಚುವರಿ ಸಿಬ್ಬಂದಿಯ ನೇಮಕದ ಕುರಿತು ಮುಂದೆ ತೀರ್ಮಾನಿಸಲಾಗುವುದು ಎಂದು ತಹಶೀಲ್ದಾರ್ ಶರಣಬಸವ ರಾಣಪ್ಪ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>